NEWSನಮ್ಮರಾಜ್ಯ

ರೋಟರಿ ರೀ ಬಿಲ್ಡ್ ಕೊಡಗು ಯೋಜನೆಯಡಿ ಮತ್ತೆ 25 ಮನೆಗಳ ಹಸ್ತಾಂತರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಕೊಡಗಿನಲ್ಲಿ ಪ್ರಾಕೃತಿಕ ವಿಕೋಪದಿಂದಾಗಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಅಂತರರಾಷ್ಟ್ರೀಯ ರೋಟರಿ ಸಂಸ್ಥೆಯ ರೀ ಬಿಲ್ಡ್ ಕೊಡಗು ಯೋಜನೆ ಮೂಲಕ ಮತ್ತೆ 25 ಮನೆಗಳನ್ನು ಹಸ್ತಾಂತರ ಮಾಡಲಾಗಿದ್ದು, ಈವರೆಗೂ ರೋಟರಿಯಿಂದ 50 ಮನೆಗಳನ್ನು ಸಂತ್ರಸ್ಥರಿಗೆ ನೀಡಲಾಗಿದೆ.

ಕಳೆದ ವರ್ಷ ಜೂನ್ ನಲ್ಲಿ ಪ್ರಥಮ ಹಂತವಾಗಿ ಮನೆ ಕಳೆದುಕೊಂಡ ಸಂತ್ರಸ್ಥರಿಗೆ ಮಾದಾಪುರ ಬಳಿಯ ಇಗ್ಗೋಡ್ಲು ಗ್ರಾಮದಲ್ಲಿ 25 ಮನೆಗಳನ್ನು ರೀ ಬಿಲ್ಡ್ ಕೊಡಗು ವತಿಯಿಂದ ನೀಡಲಾಗಿತ್ತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇದೀಗ ಮಾದಾಪುರ, ಗರಗಂದೂರು ವ್ಯಾಪ್ತಿಯ 25 ಮಂದಿಗೆ ಅವರ ಜಾಗದಲ್ಲಿಯೇ ಹೊಸ ಮನೆ ನಿರ್ಮಾಣ ಮಾಡಿ ಭಾನುವಾರ ಸರಳ ರೀತಿಯಲ್ಲಿ ಹಸ್ತಾಂತರಿಸಲಾಯಿತು ಎಂದು ರೀ ಬಿಲ್ಡ್ ಯೋಜನಾ ಸಮಿತಿ ಅಧ್ಯಕ್ಷ ಡಾ.ರವಿ ಅಪ್ಪಾಜಿ ತಿಳಿಸಿದ್ದಾರೆ.

ಈವರೆಗೂ ವಿವಿಧ ರೋಟರಿ ಕ್ಲಬ್ ಗಳು ನೀಡಿದ ಸಹಾಯ ಧನ ಬಳಸಿ 2.56 ಕೋಟಿ ರೂ. ವೆಚ್ಚದಲ್ಲಿ ಮನೆಗಳನ್ನು ರೋಟರಿ ಮೂಲಕ  ಹ್ಯಾಬಿಟೇಟ್  ಫಾರ್ ಹ್ಯೂಮಾನಿಟಿ ಇಂಡಿಯಾ ಸಂಸ್ಥೆಯು  ನಿರ್ಮಾಣ ಮಾಡಿದೆ.  ಪ್ರತೀ ಮನೆಗೂ 5.5 ಲಕ್ಷ ರೂ. ವೆಚ್ಚ ತಗುಲಿದೆ.

ಅಂತರ ರಾಷ್ಟ್ರೀಯ ರೋಟರಿ ಸಂಸ್ಥೆಯ ಪ್ರಮುಖರು ಹಾಗೂ ಭಾರತದ ರೋಟರಿ ನಾಯಕರ ಬೆಂಬಲದೊಂದಿಗೆ ಈ ಯೋಜನೆ ಕಾರ್ಯಗತಗೊಂಡಿದೆ ಎಂದು ಡಾ.ರವಿ ಅಪ್ಪಾಜಿ ಮಾಹಿತಿ ನೀಡಿದ್ದಾರೆ. ಲಾಕ್‍ಡೌನ್ ನಿಯಮಗಳಂತೆ ಸಭಾ ಕಾರ್ಯಕ್ರಮ ಇಲ್ಲದೇ ಸರಳ ರೀತಿಯಲ್ಲಿ 25 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರ ಮಾಡಿರುವುದಾಗಿಯೂ ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್