NEWSದೇಶ-ವಿದೇಶ

ನವೆಂಬರ್‌ ವೇಳೆಗೆ  ಕೊರೊನಾ ನಿಯಂತ್ರಣ

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ವಿಶ್ವಾಸ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನವೆಂಬರ್‌  ವೇಳೆಗೆ ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವ ವಿಶ್ವಾಸ ಹೊಂದಿದ್ದೇವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ.

ಅನಂತಕುಮಾರ್ ಪ್ರತಿಷ್ಠಾನ ನಗರದಲ್ಲಿ ಆಯೋಜಿಸಿದ್ದ ದೇಶ ಮೊದಲು ವೆಬಿನಾರ್ ಸಂವಾದ ಉದ್ಘಾಟಿಸಿ ಮಾತನಾಡಿದರು. ದೇಶ ಕೋವಿಡ್ ಸೋಂಕನ್ನು ಅತ್ಯಂತ ವ್ಯವಸ್ಥಿತವಾಗಿ ನಿಭಾಯಿಸುತ್ತಾ ಬಂದಿದೆವೆ. ಹೀಗಾಗಿ ಬರುವ ದೀಪಾವಳಿ ಹಬ್ಬದ ವೇಳೆಗೆ ನಿಯಂತ್ರಣಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕೋವಿಡ್ ಪ್ರಾರಂಭದ ಸಮಯದಲ್ಲಿ ಪಿಪಿಇ ಕಿಟ್ ಗಳು, ಎನ್ 95 ಮಾಸ್ಕ್ ಗಳು ಹಾಗೂ ವೆಂಟಿಲೇಟರ್ ಗಳ ಕೊರತೆ ಎದ್ದು ಕಾಣುತ್ತಿತ್ತು. ಆದರೆ, ಪ್ರಸ್ತುತ ಪ್ರತಿ ದಿನ 5 ಲಕ್ಷ ಪಿಪಿಇ ಕಿಟ್ ಉತ್ಪಾದನೆ ಮಾಡಲಾಗುತ್ತಿದೆ ಎಂದರು.

ಇನ್ನು ಸೋಂಕು ದೇಶಕ್ಕೆ ಕಾಲಿಡುವ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ಅವರು ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಂಡಿದ್ದರು. ಫೆಬ್ರವರಿ ಮೊದಲ ವಾರದಲ್ಲಿ ಕೇವಲ ಪುಣೆಯಲ್ಲಿ 1 ಪ್ರಯೋಗಾಲಯ ಇದ್ದದ್ದು ಇಂದು 1582ಕ್ಕೆ ಹೆಚ್ಚಾಗಿದೆ. 1000 ಕ್ಕೂ ಹೆಚ್ಚು ಸರಕಾರಿ ಪ್ರಯೋಗಾಲಯಗಳನ್ನು ಸ್ಥಾಪಿಸಿದ್ದು, ಇದೀಗ ಪ್ರತಿದಿನ ದೇಶದಲ್ಲಿ 10 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ವಿವರಿಸಿದರು.

ದೇಶದ 10  ಉದ್ಯಮಿಗಳು ಎನ್ 95 ಮಾಸ್ಕ್ ಗಳನ್ನು ತಯಾರಿಸುತ್ತಿದ್ದಾರೆ. ಅಲ್ಲದೆ, 25 ಉದ್ಯಮಿಗಳು ವೆಂಟಿಲೇಟರ್ ಗಳನ್ನು ತಯಾರಿಸುತ್ತಿದ್ದಾರೆ. ಇದೀಗ ಪರಿಸ್ಥಿತಿ ಬದಲಾಗಿದ್ದು, ದೇಶದಲ್ಲಿ ಪಿಪಿಇ ಕಿಟ್ ಗಳು, ಎನ್ 95 ಹಾಗೂ ವೆಂಟಿಲೇಟರ್ ಗಳ ಕೊರತೆ ನೀಗಿದೆ ಎಂದು ಹೇಳಿದರು.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್