NEWSನಮ್ಮರಾಜ್ಯರಾಜಕೀಯ

ಆಶಾ ಕಾರ್ಯಕರ್ತೆಯರ ಧರಣಿಗೆ ಸೊಪ್ಪುಹಾಕದ ಸರ್ಕಾರ: ಸಾಮೂಹಿಕ ರಾಜೀನಾಮೆ ಬೆದರಿಕೆ

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ 10ದಿನದಿಂದ ಹೋರಾಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸೇವೆ ಸ್ಥಗಿತಗೊಳಿಸಿ 10 ದಿನಗಳಿಂದ ಧರಣಿ ನಡೆಸುತ್ತಿದ್ದರೂ, ಯಾವುದೇ ಸ್ಪಂದನೆ ನೀಡದೆ ಮೊಂಡುತನ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿ  ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದು, ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ.

12 ಸಾವಿರ ರೂ. ಗೌರವಧನ ಮತ್ತು ಕೊರೊನಾ ಹೋರಾಟದಲ್ಲಿ ರಕ್ಷಣೆಗೆ ಆಗತ್ಯ ಸುರಕ್ಷಾ ಪರಿಕರಗಳನ್ನು ನೀಡಬೇಕೆಂಬುದಷ್ಟೇ ನಮ್ಮ ಬೇಡಿಕೆಯಾಗಿದೆ. ಆದರೆ, ಸರ್ಕಾರ ಜನವಿರೋಧಿ ನೀತಿಯಿಂದ ನಮ್ಮನ್ನು ಈವರೆಗೂ ಮಾತುಕತೆಗೆ ಕರೆದಿಲ್ಲ. ಸೇವೆ ನಿಲ್ಲಿಸಿ ಜೂ.30ರಿಂದ ಸರ್ಕಾರಕ್ಕೆ 10 ದಿನ ಕಾಲಾವಕಾಶ ನೀಡಲಾಗಿತ್ತು. ಆದರೆ, ಸರ್ಕಾರ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಇದು ಹೀಗೆಯೇ ಇದ್ದರೆ, ಮುಂದಿನ ದಿನಗಳಲ್ಲಿ ನಮ್ಮ ಪ್ರತಿಭಟನೆ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುತ್ತದೆ ಎಂದು ಕರ್ನಾಟಕ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ಎಚ್ಚರಿಕೆ ನೀಡಿದ್ದಾರೆ.

ಆಶಾ ಕಾರ್ಯಕರ್ತೆಯರ ಸಂಘಟನೆಯ ಅಧ್ಯಕ್ಷ ಸೋಮಶೇಖರ್ ಯಾದಗಿರಿ ಮಾತನಾಡಿ, ಸರ್ಕಾರ ಈ ಹಿಂದೆ ಭರವಸೆ ನೀಡಿದ್ದ 3000 ರೂ. ಒನ್ ಟೈಮ್ ಪ್ಯಾಕೇಜ್ ಇನ್ನೂ ಸಿಕ್ಕಿಲ್ಲ. ಕಾರ್ಯಕರ್ತೆಯರಿಗೆ ಸೂಕ್ತ ರೀತಿಯ ಪಿಪಿಇ ಕಿಟ್   ನೀಡುತ್ತಿಲ್ಲ. ಈಗಾಗಲೇ ಸೋಂಕಿಗೊಳಗಾಗಿ ಮೂವರು ಕಾರ್ಯಕರ್ತೆಯರು ಮೃತಪಟ್ಟಿದ್ದಾರೆ. ಹಲವರು ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ. ಇದು ಸರ್ಕಾರದ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಆಶಾ ಕಾರ್ಯಕರ್ತೆಯರ ಕಾರ್ಯಕ್ರಮದ ಉಸ್ತುವಾರಿ ಅಧಿಕಾರಿ  ಡಾ. ಪ್ರಭುದೇವ ಗೌಡ ಮಾತನಾಡಿ, ತಮ್ಮ ತಮ್ಮ ಅತ್ಯುತ್ತಮ ಸಾಧನೆಗಳಿಂದಾಗಿ ಈಗಾಗಲೇ ಶೇ.60ರಷ್ಟು ಕಾರ್ಯಕರ್ತೆಯರು 4000 ರೂ. ಪ್ರೋತ್ಸಾಹ ಧನ ಪಡೆಯುತ್ತಿದ್ದಾರೆ. ಇನ್ನೂ ಶೇ.20ರಷ್ಟು ಕಾರ್ಯಕರ್ತೆಯರು ನಿಗದಿತ 6,000 ಜೊತೆಗೆ 5,000 ರೂ ಪಡೆಯುತ್ತಿದ್ದಾರೆ. ಅವರಲ್ಲಿ ಕೇವಲ 10% ರಷ್ಟು ಜನರು ಯಾವುದೇ ಹೆಚ್ಚುವರಿ ಕೆಲಸವನ್ನು ಕೈಗೆತ್ತಿಕೊಂಡಿಲ್ಲ ಹೀಗಾಗಿ 6,000 ರೂ.ಗಳ ಸ್ಥಿರ ಪ್ರೋತ್ಸಾಹವನ್ನೇ ಗಳಿಸುತ್ತಾರೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಆಶಾ ಕಾರ್ಯಕರ್ತೆಯರು 4000 ರೂ. ರಾಜ್ಯ ಸರ್ಕಾರದಿಂದ 2,000 ರೂ. ಕೇಂದ್ರದಿಂದ ಸೇರಿ ಒಟ್ಟು 6,000 ರೂ. ವೇತನ ಪಡೆಯುತ್ತಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್