NEWSನಮ್ಮಜಿಲ್ಲೆ

ಅಧಿಕಾರಿಗಳ ಬೇಜವಾಬ್ದಾರಿ: ವ್ಯಕ್ತಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟು 4ದಿನ, ಮನೆ- ಬೀದಿ ಇನ್ನೂ ಆಗಿಲ್ಲ ಸೀಲ್‌ಡೌನ್‌

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ತಾಲೂಕಿನ ಬೀಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀಡನಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರಿಗೆ ಕೊರೊನಾ ದೃಢಪಟ್ಟು ನಾಲ್ಕು ದಿನಗಳು ಕಳೆದರೂ ಅವರ ಮನೆಗೆ ಈವರೆಗೂ ಯಾವೊಬ್ಬ ಅಧಿಕಾರಿಯೂ ಭೇಟಿನೀಡಿಲ್ಲ. ಜತೆಗೆ ಕುಟುಂಬದವರನ್ನು ಹೋಂ ಕ್ವಾರಂಟೈನ್‌ ಮಾಡುವ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ.

ಕೋವಿಡ್‌-19 ಸೋಂಕಿತರ ಮನೆಯ ಅಕ್ಕಪಕ್ಕದಲ್ಲೇ ವಯಸ್ಸಾದವರು ಮತ್ತು ಮಕ್ಕಳು ಇವೆ ಒಂದು ವೇಳೆ ಅವರಲ್ಲಿ ಕಾಣಿಸಿಕೊಂಡರೆ ಏನು ಎಂಬ ಭಯದಲ್ಲಿ ಗ್ರಾಮಸ್ಥರು ಕಾಲಕಳೆಯುವಂತಾಗಿದೆ.

ಕಳೆದ ಮಂಗಳವಾರ (ಜುಲೈ21) ಕೊರೊನಾ ಪಾಸಿಟಿವ್‌ ಇರುವುದು ದೃಢಪಟ್ಟು ಆ ವ್ಯಕ್ತಿ ಮೈಸೂರಿನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ. ಆದರೆ ಈವರೆಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಾಗಲಿ ಇಲ್ಲ ಆರೋಗ್ಯ ಇಲಾಖೆ ಅಧಿಕಾರಿಗಳಾಗಲಿ ತಕ್ಷಣಕ್ಕೆ ಬಂದು ಮುಂಜಾಗ್ರತಾ ಕ್ರಮ ಅನುಸರಿಸಿಲ್ಲ.

ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲಿಂಗರಾಜು ಅವರಿಗೆ ಕರೆ ಮಾಡಿದರೆ ಅವರು ಫೋನ್‌ ಕರೆಯನ್ನು ಸ್ವೀಕರಿಸುತ್ತಿಲ್ಲ. ಈ ರೀತಿ ಬೇಜವಾಬ್ದಾರಿಯಿಂದ ಅಧಿಕಾರಿಗಳು ನಡೆದುಕೊಂಡರೆ ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುವುದೆ.

ಕೊರೊನಾ ಪಾಸಿಟಿವ್‌ ವ್ಯಕ್ತಿಯೇ ಗ್ರಾಮಪಂಚಾಯಿತಿ ಅಧಿಕಾರಿಗಳಿಗೆ ಮಾಹಿತಿ ಕೊಟ್ಟರು ಇದುವರೆಗೂ ಯಾವ ಅಧಿಕಾರಿಗಳು ಸೂಕ್ತ ಮುನ್ನಚ್ಚರಿಕೆ ಕ್ರಮ ತೆಗೆದುಕೊಳ್ಳಲು ಮುಂದಾಗದಿರುವುದರಿಂದ ಕಳೆದ ನಾಲ್ಕು ದಿನದಿಂದ ಪ್ರಥಮ ಸಂಪರ್ಕದಲ್ಲಿದ್ದವರೂ ಸೇರಿ ಅವರ ಮನೆಯವರು ಓಡಾಡಿರುವ ಜಾಗದಲ್ಲಿ ಇನ್ನೆಷ್ಟು ಹಬ್ಬಿದಿಯೋ ಎಂಬ ಭಯ ಗ್ರಾಮಸ್ಥರಲ್ಲಿ ಉಂಟಾಗಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ