NEWSದೇಶ-ವಿದೇಶನಮ್ಮರಾಜ್ಯ

ಜೂನ್‌ 7- ಕರ್ನಾಟಕದಲ್ಲಿ 239 ಹೊಸ ಸೋಂಕು ದೃಢ, ಇಬ್ಬರು ಮೃತ

ರಾಜ್ಯದಲ್ಲಿ 63ಕ್ಕೆ ಏರಿದ ಸಾವಿನ ಸಂಖ್ಯೆ l ಇಂದು 143 ಮಂದಿ ಗುಣಮುಖ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ  ತನ್ನ ಅಟ್ಟಹಾಸವನ್ನು ಇಂದು ಮುಂದುವರಿಸಿದ್ದು 239  ಮಂದಿಯಲ್ಲಿ ಕೊರೊನಾ ಪಾಸಿಟಿವ್‌ ದೃಢಪಟ್ಟಿದ್ದು, ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದೆ.ಜತೆಗೆ ಇಂದು ಇಬ್ಬರು ಕೊರೊನಾಗೆ ಬಲಿಯಾಗಿದ್ದು ಈವರೆಗೆ 63 ಮಂದಿ ಮೃತಪಟ್ಟಿದ್ದಾರೆ. ( ಅನ್ಯಕಾರಣದಿಂದ ಇಬ್ಬರ ಸಾವು).

ಇಂದು ಹೊಸದಾಗಿ ಪತ್ತೆಯಾದ 239 ಪ್ರಕರಣಗಳಲ್ಲಿ  ಅಂತಾರಾಜ್ಯ ಪ್ರಯಾಣದ ಇತಿಹಾಸ ಹೊಂದಿದವರೆ ಹೆಚ್ಚಾಗಿದ್ದಾರೆ. ಕೆಲ ದಿನಗಳಿಂದ ಅತಿ ಹೆಚ್ಚು ಸೋಂಕಿತ ಪ್ರಕರಣದಿಂದ ಆತಂಕ ಮೂಡಿಸಿದ್ದ ಉಡುಪಿಯಲ್ಲಿ  ಇಂದು ಸೋಂಕಿತರ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಭಾನುವಾರ 13 ಪ್ರಕರಣಗಳು ವರದಿಯಾಗಿವೆ.

ಇನ್ನುಳಿದಂತೆ ಕಲಬುರಗಿ ಮತ್ತು ಯಾದಗಿರಿಯಲ್ಲಿ ತಲಾ 39, ಬೆಳಗಾವಿಯಲ್ಲಿ 38, ಬೆಂಗಳೂರು 23, ದಕ್ಷಿಣ ಕನ್ನಡ ಮತ್ತು ದಾವಣಗೆರೆಯಲ್ಲಿ 17, ಉಡುಪಿಯಲ್ಲಿ 13, ಶಿವಮೊಗ್ಗದಲ್ಲಿ 12, ವಿಜಯಪುರದಲ್ಲಿ 9, ಬೀದರ್ ನಲ್ಲಿ 7, ಬಳ್ಳಾರಿಯಲ್ಲಿ 6, ಬೆಂಗಳೂರು ಗ್ರಾಮಾಂತರ ಮತ್ತು ಹಾಸನದಲ್ಲಿ ತಲಾ 5, ಧಾರವಾಡದಲ್ಲಿ 3, ಗದಗ ಮತ್ತು ಉತ್ತರ ಕನ್ನಡದಲ್ಲಿ ತಲಾ 2, ಮಂಡ್ಯ, ರಾಯಚೂರಿನಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಬೆಂಗಳೂರಿನಲ್ಲಿ 61 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಇವರು ತೀವ್ರ ಉಸಿರಾಟದ ತೊಂದರೆಯಿಂದ ಮೇ 29ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಧುಮೇಹ, ರಕ್ತದೊತ್ತಡ, ಹೈಫೋ ಥೈರಾಡಿಸಮ್ ನಿಂದ ಬಳಲುತ್ತಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜೂ.6ರಂದು ಇವರಿಗೆ ಸೋಂಕು ದೃಢಪಟ್ಟಿತ್ತು.

57 ವರ್ಷದ ಬೆಂಗಳೂರಿನ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದು, ಇವರು ಆನೆಕಾಲು ರೋಗ ಮತ್ತು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಜೂ. 7ರಂದು ಮೃತಪಟ್ಟಿದ್ದರು. ಸಾವಿನ ಬಳಿಕ ಬಂದ ವರದಿಯಲ್ಲಿ ಸೋಂಕು ದೃಢಪಟ್ಟಿದೆ.

ಇದರಿಂದ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 63ಕ್ಕೇರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 143 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ 2132 ಜನರು ಗುಣಮುಖರಾಗಿದ್ದು, 3257 ಸಕ್ರಿಯವಾಗಿದ್ದು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶದಲ್ಲಿ 254,340 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 254,340 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 7,718 ಮಂದಿ ಮೃತಪಟ್ಟಿದ್ದಾರೆ. 122,738 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 7,028,578 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 403,083 ಜನರು ಮೃತಪಟ್ಟಿದ್ದಾರೆ 3,435,919 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ