NEWSನಮ್ಮರಾಜ್ಯ

ಕ್ವಾರಂಟೈನ್‌ ಕೇಂದ್ರಗಳಲ್ಲಿ ಅವ್ಯವಸ್ಥೆ, ಸರ್ಕಾರದ ವಿರುದ್ಧ ಕ್ವಾರಂಟೈನ್‌ಗಳ ಆಕ್ರೋಶ

ವಿವಿಧೆಡೆ ಪ್ರತಿಭಟನೆ l ಕುರಿಗಳ ದೊಡ್ಡಿಯಂತಿವೆ ಕ್ವಾರಂಟೈನ್‌ ಕೇಂದ್ರಗಳ ಎಂಬ ಆರೋಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸುವ ದೃಷ್ಟಿಯಿಂದ ಸರ್ಕಾರ ಮಾಡಿರುವ ಕ್ವಾರಂಟೈನ್‌ ಕೇಂದ್ರಗಳಲ್ಲಿ ಕ್ವಾರಂಟೈನ್‌ ಆಗಿರುವ ಜನರನ್ನು ನಾಯಿಗಿಂತ ಕಡೆಯಾಗಿ ಸರ್ಕಾರ ನೋಡಿಕೊಳ್ಳುತ್ತಿದೆ.

ಹೌದು, ಯಾದಗಿರಿ, ರಾಯಚೂರು, ಮಂಡ್ಯ, ನೆಲಮಂಗಲ ಸೇರಿದಂತೆ ರಾಜ್ಯದ ವಿವಿಧ ಹೋಟೆಲ್‌ಗಳಲ್ಲಿ ಕ್ವಾರಂಟೈನ್‌ನಲ್ಲಿ ಇರುವವರಿಗೆ ಸರಿಯಾದ ಆಹಾರ ನೀಡುತ್ತಿಲ್ಲ. ಸಮಯಕ್ಕೆ ಸರಿಯಾದ ಕಾಳಜಿ ವಹಿಸುತ್ತಿಲ್ಲ. ದನದ ದೊಡ್ಡಿಗೆ ದನಗಳನ್ನು ಹಾಕಿ ಬಿಟ್ಟಂತೆ ಮಾಡಿದ್ದು, ಇದರಿಂದ ಕ್ವಾರಂಟೈನ್‌ನಲ್ಲಿರುವವರು ಕೊರೊನಾ ಭಯದ ಬದಲು ಇವರು ಇಟ್ಟಿರುವ ಸ್ಥಳದಿಂದ ಕೊರೊನಾ ಜತೆಗೆ ಇನ್ನೂ ಹಲವಾರು ರೋಗಗಳು ಬರುವ ಆತಂಕದಲ್ಲಿಒ ಕಾಲಕಾಳೆಯುತ್ತಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಇದರಿಂದ ಕ್ವಾರಂಟೈನ್‌ ಆಗಿರುವ ಜನರು ಪ್ರತಿಭಟನೆ ಮಾಡುತ್ತಿದ್ದು, ನಮ್ಮ ಮನೆಮಂದಿಯನ್ನು ಬಿಟ್ಟು ಇಲ್ಲಿಗೆ ಬಂದರೆ ನೀವು ನಮ್ಮನ್ನು ಪ್ರಾಣಿಗಳ ರೀತಿಯಲ್ಲಿ ನೋಡುತ್ತಿದ್ದೀರಿ ನಮಗೆ ಏನು ಇಲ್ಲದೇ ಇಲ್ಲಿಗೆ ಬಂದಿಲ್ಲ. ಕೊರೊನಾ ಸೋಂಕು ಇದ್ದರೆ ಅದಕ್ಕೆ ಇತರರು ಬಲಿಯಾಗಬಾರದು ಎಂಬ ದೃಷ್ಟಿಯಿಂದ ಬಂದಿದ್ದೇವೆ. ಆದರೆ ನೀವು ನಮಗೆ ಸರಿಯಾದ ಆಹಾರ ಕೊಡುತ್ತಿಲ್ಲ. ಜತೆಗೆ ಸರಿಯಾಗಿ ತಪಾಸಣೆ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮಗೆ ಉತ್ತಮ ಆಹಾರ ಕೊಡುತ್ತಿಲ್ಲ. ಅರ್ಧಂಬರ್ಧ ಬೇಸಿದ ಆಹಾರ ಕಲುಸಿತ ನೀರು, ಜತೆಗೆ ಸಾಮಾಜಿ ಅಂತರವಿಲ್ಲದೆ ಕುರಿದೊಡ್ಡಿಯಲ್ಲಿ ಕುರಿಗಳನ್ನು ತುಂಬಿದಂತೆ ನಮ್ಮನ್ನು ತುಂಬಿದ್ದೀರಿ ಎಂದು ಸರ್ಕಾರದ ನಡೆ ಮತ್ತು ಅಧಿಕಾರಿಗಳ ವರ್ತನೆ ವಿರುದ್ಧ ಕಿಡಿಕಾರಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಇಷ್ಟೆಲ್ಲ ಆದಮೇಲೆ ನೀವು ಕ್ವಾರಂಟೈನ್‌ ಮಾಡುತ್ತೇವೆ ಎಂದು ಏಕೆ ಹೇಳಬೇಕು. ಇದು ಒಂದು ಸರ್ಕಾರನ ರಾಜ್ಯದಲ್ಲಿ ಸರ್ಕಾರ ಇದೆಯೇ ಎಂಬ ಪ್ರಶ್ನೆ ಮೂಡುತ್ತಿದೆ ಎಂದು ಕ್ವಾರಂಟೈನ್‌ ಆಗಿರುವವರು ಗುಡುಗುತ್ತಿದ್ದಾರೆ.

ಇನ್ನಾದರೂ ಇಂಥ ಪ್ರಮಾದವನ್ನು ಸರ್ಕಾರ ಮತ್ತು ಅಧಿಕಾರಿಗಳು ಮಾಡದೆ ಕ್ವಾರಂಟೈನ್‌ನಲ್ಲಿ ಇರುವವರನ್ನು ಸರಿಯಗಿ ನೋಡಿಕೊಳ್ಳಬೇಕು. ಅವರಿಗೆ ಬಿಸಿನೀರನ್ನು ಒದಗಿಸಿ ಕೊಡಬೇಕು. ಆರೋಗ್ಯ ತಪಾಸಣೆಯನ್ನು ಮಾಡಿಸಿ ಆರೋಗ್ಯವಾಗಿದ್ದರೆ ಅವರ ಮನೆಗಳಿಗೆ ಕಳುಹಿಸಲು ಮುಂದಾಗಬೇಕು  ಎಂದು ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ