NEWSನಮ್ಮರಾಜ್ಯರಾಜಕೀಯ

ಪಿಪಿಇ ಕಿಟ್ ತಯಾರಿಕಾ ಕಾರ್ಖಾನೆ ತೆರೆಯಲು ಚಿಂತನೆ: ಸಚಿವ ಆರ್‌. ಅಶೋಕ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಉದ್ದೇಶದಿಂದ ಪಿಪಿಇ ಕಿಟ್ ತಯಾರಿಸುವ ಕಾರ್ಖಾನೆಗಳನ್ನು ತೆರೆಯಲು ಸರ್ಕಾರ ಉದ್ದೇಶಿಸಿದೆ ಎಂದು ಕಂದಾಯ ಸಚಿವ, ಬೆಂಗಳೂರು ದಕ್ಷಿಣ ವಲಯ ಕೋವಿಡ್ ಉಸ್ತುವಾರಿ ಆರ್. ಅಶೋಕ್ ಭಾನುವಾರ ತಿಳಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕೃತ ನಿವಾಸ ಕಾವೇರಿಯಲ್ಲಿ ಭಾನುವಾರ ನಡೆದ ಸಭೆಯ ನಂತರ ಮಾತನಾಡಿ, ವೈದ್ಯಕೀಯ ಪರಿಕರಗಳಿಗೆ ಸಂಬಂಧಿತ ಕಾರ್ಖಾನೆಗಳನ್ನು ತೆರೆಯಲು ಅವಕಾಶ ನೀಡುವಂತೆ ಸಿಎಂ ಅವರಿಗೆ ಮನವಿ ಮಾಡಿದ್ದೇವೆ. ಅವರು ಈ ನಿಟ್ಟಿನಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.

12 ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಗಂಭೀರ ಪರಿಸ್ಥಿತಿ ಇದೆ. ಇನ್ನು ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲೂ ಲಾಕ್‌ಡೌನ್ ಜಾರಿಯೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುವುದು. ಈ ಕುರಿತು ಚರ್ಚಿಸಲು ಸೋಮವಾರ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್‌ ಮೂಲಕ  ಸಿಎಂ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಇನ್ನು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಲಾಕ್‌ಡೌನ್ ಕುರಿತ ಸಂಬಂಧ ಸೋಮವಾರ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು. ಸದ್ಯ 7 ದಿನ ಮಾತ್ರ ಲಾಕ್‌ಡೌನ್ ಜಾರಿಯಲ್ಲಿರುತ್ತದೆ. ಈ ಸಂದರ್ಭದಲ್ಲಿ ಜನರು ಅನಗತ್ಯವಾಗಿ ಮನೆಯಿಂದ ಹೊರಬಾರದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

1 Comment

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ