ಬೆಂಗಳೂರು: ಕುಮಾರಕೃಪ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕೆಲಸ ಮಾಡುತ್ತಿರುವ ಪೊಲೀಸ್ ಮಹಿಳಾ ಕಾನ್ಸ್ಟೆಬಲ್ ಒಬ್ಬರ ಪತಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿಎಂ ಗೃಹಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ.
ಗೃಹ ಕಚೇರಿ ಕೃಷ್ಣಾಗೂ ಕೊರೊನಾ ಮಹಾಮಾರಿ ವಕ್ಕರಿಸಿದ್ದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಎಲ್ಲಾ ಅಧಿಕೃತ ಸಭೆಗಳನ್ನು ವಿಧಾನಸೌಧಕ್ಕೆ ಸ್ಥಳಾಂತರಿಸಲಾಗಿದೆ.
ಇನ್ನು ಸಿಎಂ ಗೃಹ ಕಚೇರಿಗೆ ಔಷಧಿ ಸಿಂಪಡನೆ ಮಾಡಲಾಗಿದೆ. ಕಾನ್ ಸ್ಟೆಬಲ್ ಗಂಟಲು ದ್ರವ್ಯವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿ ಬರಬೇಕಾಗಿದೆ. ಇನ್ನು ಇವರ ಜತೆಗೆ ಕಾರ್ಯ ನಿರ್ವಹಿಸಿದ ಎಲ್ಲಾ ಸಿಬ್ಬಂದಿಯನ್ನೂ ಕೊರೊನಾ ಪರೀಕ್ಷೆಗೆ ಒಳಪಡಿಸಲು ಸಿಎಂ ಸೂಚಿಸಿದ್ದಾರೆ.