NEWSನಮ್ಮರಾಜ್ಯರಾಜಕೀಯ

ಜುಲೈ 26- ರಾಜ್ಯದಲ್ಲಿ 5199 ಕೊರೊನಾ ಸೋಂಕು ದೃಢ, 82 ಮಂದಿ ಮರಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 5199 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು  96141  ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು  82  ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1886 ಕ್ಕೆ  (ಅನ್ಯ ಕಾರಣಕ್ಕೆ 8ಸೇರಿ) ಏರಿಕೆಯಾಗಿದೆ.

ಬೆಂಗಳೂರು ನಗರದಲ್ಲಿ ಇಂದು 1950 ಮಂದಿ ಹೊಸದಾಗಿ  ಕೊರೊನಾ ಸೋಂಕಿಗೆ ಒಳಗಾಗಿದ್ದು, 29 ಮಂದಿ ಮೃತಪಟ್ಟಿದ್ದಾರೆ. ಇನ್ನು ಬಳ್ಳಾರಿಯಲ್ಲಿ  579,  ಮೈಸೂರಿನಲ್ಲಿ 230 , ಬೆಂಗಳೂರು ಗ್ರಾಮಾಂತರ 213, ದಕ್ಷಿಣ ಕನ್ನಡ 199, ಉಡುಪಿ 169,  ಧಾರವಾಡ 165, ಹಾಸನ 164, ಕಲಬುರಗಿ,  ಬೆಳಗಾವಿ 163, 152,  ವಿಜಯಪುರ 132, ರಾಯಚೂರು 131,  ದಾವಣಗೆರೆ 89, ಉತ್ತರ ಕನ್ನಡ 85, ಚಿಕ್ಕಬಳ್ಳಾಪುರ 81, ಬೀದರ್‌ 77,  ಮಂಡ್ಯ 64, ಗದಗ ಮತ್ತು ಚಿಕ್ಕಮಗಳೂರು ತಲಾ 61,  ಯಾದಗಿರಿ 56,  ಚಿತ್ರದುರ್ಗ 53, ಕೋಲಾರ 49, ಹಾವೇರಿ 47, ತುಮಕೂರು 46, ಬಾಗಲಕೋಟೆ 41, ಕೊಪ್ಪಳ 40, ಶಿವಮೊಗ್ಗ 39, ಚಾಮರಾಜನಗರ 28, ಕೊಡಗು 20 ಮತ್ತು ರಾಮನಗರ 15 ಸೇರಿ ಒಟ್ಟು 5199 ಹೊಸ ಪ್ರಕರಣಗಳು ಇಂದು ರಾಜ್ಯದಲ್ಲಿ ಪತ್ತೆಯಾಗಿವೆ.

ಇನ್ನು ಬೆಂಗಳೂರಿನಲ್ಲಿ 647  ಮಂದಿ ಸೇರಿ ರಾಜ್ಯದಲ್ಲಿ 2088 ಗುಣಮುಖರಾಗಿ ಮನೆಗೆ ಮರಳಿದ್ದಾರೆ.  ಧಾರವಾಡ, ಬೆಳಗಾಗಿ, ಕಲಬುರಗಿಯಲ್ಲಿ ತಲಾ 6, ಮೈಸೂರು, ತುಮಕೂರಿನಲ್ಲಿ ತಲಾ 5 ಮಂದಿ ಮೃತಪಟ್ಟಿದ್ದಾರೆ.

ಭಾತರ ಸೇರಿದಂತೆ  ವಿಶ್ವದ ನಾನಾ ರಾಷ್ಟ್ರಗಳ ಕೊರೊನಾ ಸೋಂಕಿತರ ಅಂಕಿ ಅಂಶಗಳನ್ನು ತಿಳಿಯಲು  ಇಲ್ಲಿ ಕ್ಲಿಕ್‌ ಮಾಡಿ  view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್