NEWSನಮ್ಮರಾಜ್ಯಸಂಸ್ಕೃತಿ

ಭಾನುವಾರ ಸಂಪೂರ್ಣ ಲಾಕ್‍ಡೌನ್, ಮದುವೆಗಳಿಗೆ ವಿನಾಯಿತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:   ರಾಜ್ಯ ಸರ್ಕಾರವು ಕೋವಿಡ್ 19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಲಾಕ್‍ಡೌನ್ ಕ್ರಮಗಳ ಕುರಿತು ಮಾರ್ಗಸೂಚಿಯನ್ನು ಹೊರಡಿಸಿದ್ದು ಇವುಗಳು ರಾಜ್ಯಾದ್ಯಂತ ಮೇ 18 ರಿಂದ 31 ರವರೆಗೆ ಜಾರಿಯಲ್ಲಿವೆ. ಈ ಆದೇಶದ ಮಾರ್ಗಸೂಚಿ ಕ್ರಮ ಸಂಖ್ಯೆ 6 ರಲ್ಲಿ ಭಾನುವಾರ ಸಂಪೂರ್ಣ ಲಾಕ್‍ಡೌನ್ ವಿಧಿಸಲಾಗಿದೆ.

ಪ್ರತಿದಿನ ರಾತ್ರಿ 7 ರಿಂದ ಬೆಳಗ್ಗೆ 7 ರವರೆಗೆ ಎಲ್ಲಾ ಅವಶ್ಯಕವಲ್ಲದ ಚಟುವಟಿಕೆಗಳ ವ್ಯಕ್ತಿಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಭಾನುವಾರದಂದು ಹೆಚ್ಚುವರಿಯಾಗಿ ಬೆಳಗ್ಗೆ 7 ರಿಂದ ಸಂಜೆ ರವರೆಗೆ ಸಹ ಎಲ್ಲಾ ಅವಶ್ಯಕವಲ್ಲದ ಚಟುವಟಿಕೆಗಳ ವ್ಯಕ್ತಿಗಳ ಸಂಚಾರನ್ನು ನಿಷೇಧಿಸಿದೆ (ಭಾನುವಾರದಂದು ಪೂರ್ಣ ದಿನದ ಲಾಕ್‍ಡೌನ್ ಇರುತ್ತದೆ) ಈ ಉದ್ದೇಶಕ್ಕಾಗಿ ಸಿಆರ್‍ಪಿಸಿ ಸೆಕ್ಷನ್ 144 ರಡಿಯಲ್ಲಿ ನಿಷೇಧಾತ್ಮಕ ಆದೇಶ (ಕಫ್ರ್ಯೂ)ವನ್ನು ಸ್ಥಳೀಯ ಪ್ರಾಧಿಕಾರಗಳ ವತಿಯಿಂದ ಆದೇಶಿಸಲಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
https://play.google.com/store/apps/detail

ಸಾರ್ವಜನಿಕರು ಭಾನುವಾರದಂದು ಪೂರ್ಣದಿನದ ಲಾಕ್‍ಡೌನ್ ಇರುವ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಪಡಿಸಿರುವಂತಹ ಮದುವೆ ಸಮಾರಂಭಗಳನ್ನು ನಡೆಸಲು ಸ್ಪಷ್ಟೀಕರಣ/ಅನುಮತಿ ನೀಡುವಂತೆ ಕೋರಿದ್ದು, ಆದೇಶದಲ್ಲಿ ಭಾನುವಾರ  ಲಾಕ್‍ಡೌನ್ ಎಂದು ಆದೇಶಿಸಲಾಗಿದೆ.

ಆದರೆ ಮದುವೆ ಸಮಾರಂಭಗಳು ಈ ಹಿಂದೆಯೇ ನಿಗದಿಪಡಿಸಿರುವ ಹಿನ್ನೆಲೆಯಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಸಾಮಾಜಿಕ ಅಂತರವನ್ನು ಖಾತರಿಪಡಿಸಿಕೊಂಡು ಗರಿಷ್ಠ ಅತಿಥಿಗಳ ಸಂಖ್ಯೆಯನ್ನು 50 ಕ್ಕೆ ಸೀಮಿತಗೊಳಿಸಿ ರಾಷ್ಟ್ರೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಸರಳವಾಗಿ ಮದುವೆ ಸಮಾರಂಭವನ್ನು ನಡೆಸಲು ಅನುಮತಿಸಲಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್