NEWSದೇಶ-ವಿದೇಶರಾಜಕೀಯವಿಜ್ಞಾನ

ಇನ್ನೂ 47ಚೀನಿ ಆಪ್‌ಗಳ ನಿಷೇಧಕ್ಕೆ ಮುಂದಾದ ಭಾರತ

ವಿಜಯಪಥ ಸಮಗ್ರ ಸುದ್ದಿ

 ನ್ಯೂಡೆಲ್ಲಿ: ಕಳೆದ ತಿಂಗಳು 59 ಚೀನಾದ ಆಪ್‌ಗಳನ್ನು ನಿಷೇಧಿಸಿದ ನಂತರ, ಈಗ ಭಾರತದಲ್ಲಿ ಮತ್ತೆ ಇನ್ನೂ 47 ಚೀನಿ ಮೂಲದ ಆ್ಯಪ್‌ಗಳನ್ನು ಭಾರತ ಸರ್ಕಾರ ನಿಷೇಧಿಸಿದೆ.

47 ನಿಷೇಧಿತ ಚೀನಿ ಅಪ್ಲಿಕೇಶನ್‌ಗಳು ಈ ಹಿಂದೆ ನಿಷೇಧಿಸಲಾದ ಅಪ್ಲಿಕೇಶನ್‌ಗಳ ತದ್ರೂಪುಗಳಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಮೂಲಗಳು ವಿಜಯಪಥಕ್ಕೆ  ತಿಳಿಸಿವೆ. ಚೀನಾದ 47 ಆಪ್‌ಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು.

ಯಾವುದೇ ಬಳಕೆದಾರರ ಗೌಪ್ಯತೆ ಅಥವಾ ರಾಷ್ಟ್ರೀಯ ಭದ್ರತಾ ಉಲ್ಲಂಘನೆಗಳ ಬಗ್ಗೆ ಪರಿಶೀಲಿಸುವ 250 ಕ್ಕೂ ಹೆಚ್ಚು ಅಪ್ಲಿಕೇಶನ್‌ಗಳ ಪಟ್ಟಿಯನ್ನು ಭಾರತ ಸಿದ್ಧಪಡಿಸಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಸರ್ಕಾರದ ಮೂಲಗಳ ಪ್ರಕಾರ, ರಾಷ್ಟ್ರೀಯ ಭದ್ರತೆ ಮತ್ತು ಬಳಕೆದಾರರ ಗೌಪ್ಯತೆಯ ಯಾವುದೇ ಉಲ್ಲಂಘನೆಯಾಗುವುದನ್ನು ತಡೆಯುವ ದೃಷ್ಟಿಯಿಂದ  ಕೇಂದ್ರ ಸರ್ಕಾರ 250 ಕ್ಕೂ ಹೆಚ್ಚು ಚೀನಿ ಆಪ್‌ಗಳ ಪಟ್ಟಿಯನ್ನು ಸಿದ್ಧಪಡಿಸಿಟ್ಟುಕೊಂಡಿದೆ.

ಕೆಲವು ಉನ್ನತ ಗೇಮ್‌ನ  ಚೀನಿ ಆಪ್‌ಗಳನ್ನು ಸಹ ಹೊಸ ಪಟ್ಟಿಯಲ್ಲಿ ನಿಷೇಧಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಪರಿಶೀಲಿಸಲಾಗುತ್ತಿರುವ ಈ ಚೀನಿ ಆಪ್‌ಗಳು ಚೀನಾದ ಏಜೆನ್ಸಿಗಳೊಂದಿಗೆ ಡೇಟಾವನ್ನು ಹಂಚಿಕೊಳ್ಳುತ್ತಿವೆ ಎಂಬ ಆರೋಪ ಕೇಳಿ ಬಂದಿದೆ.

ಭಾರತೀಯ ಮತ್ತು ಚೀನಾದ ಯೋಧರ ನಡುವೆ ಹಿಂಸಾತ್ಮಕ, ಮಾರಣಾಂತಿಕ ಘಟನೆಗಳ ನಂತರ ಲಡಾಖ್ ಗಡಿ ಉದ್ವಿಗ್ನತೆ ಮುಂದುವರಿದಿರುವ ಕಾರಣ, ಟಿಕ್‌ಟಾಕ್ ಸೇರಿದಂತೆ 59 ಚೀಬಿ ಅಪ್ಲಿಕೇಶನ್‌ಗಳನ್ನುಈಗಾಗಲೇ ನಿಷೇಧಿಸಲಾಗಿದೆ. ಆ ನಂತರ ಅದೇ ಮಾರ್ಗದಲ್ಲಿ ಇಂದಿನ ನಿರ್ಧಾರವನ್ನು ಕೈಗೊಳ್ಳಲಾಗುತ್ತಿದೆ. ಈ ಆಪ್‌ಗಳು ಭಾರತದ ಸಾರ್ವಭೌಮತ್ವ, ಸಮಗ್ರತೆ ಮತ್ತು ರಕ್ಷಣೆಗೆ ಪೂರ್ವಾಗ್ರಹ ಪೀಡಿತ ಚಟುವಟಿಕೆಗಳಲ್ಲಿ ತೊಡಗಿಕೊಂಡಿವೆ ಎಂದು ಸರ್ಕಾರ ಹೇಳಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್