Vijayapatha - ವಿಜಯಪಥ > NEWS > ನಮ್ಮರಾಜ್ಯ > MLC ಚುನಾವಣೆ: ಜೆಡಿಎಸ್ನಿಂದ ಇಂಚರ ಗೋವಿಂದರಾಜು ನಾಮಪತ್ರ ಸಲ್ಲಿಕೆ

ಬೆಂಗಳೂರು: ಇದೇ ಜೂನ್ 29ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಇಂದು ಇಂಚರ ಗೋವಿಂದರಾಜು ಇಂದು ನಾಮಪತ್ರ ಸಲ್ಲಿಸಿದರು.

ವಿಧಾನ ಸಭಾ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಅವರಿಗೆ ವಿಧಾನಸೌಧದಲ್ಲಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಶಾಸಕರಾದ ಶ್ರೀನಿವಾಸ್ ಗೌಡ , ಬಸವರಾಜ್ ಹೊರಟ್ಟಿಯವರು ಹಾಜರಿದ್ದರು.
ನಾಮ ಪತ್ರ ಸಲ್ಲಿಸುವ ಮುನ್ನ ಗೋವಿಂದರಾಜು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಂದ ಆಶೀರ್ವಾದ ಪಡೆದ ಬಳಿಕ ಪಕ್ಷದ ಬಿಫಾರಂ ಪಡೆದುಕೊಂಡಿದ್ದರು.
ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪರಿಷತ್ ಅಭ್ಯರ್ಥಿ ಆಯ್ಕೆ ಅಧಿಕಾರವನ್ನು ಗೌಡರಿಗೆ ನೀಡಲಾಗಿತ್ತು. ಪಕ್ಷದ ಶಾಸಕರು ಹಾಗೂ ಮುಖಂಡರೊಂದಿಗೆ ಸಮಾಲೋಚಿಸಿದ ಗೌಡರು ಕೋಲಾರ ಭಾಗದಲ್ಲಿ ಪಕ್ಷದ ಸಂಘಟನೆ ದೃಷ್ಟಿಯಲ್ಲಿ ಗೋವಿಂದರಾಜು ಅವರಿಗೆ ಟಿಕೆಟ್ ನೀಡಿದ್ದಾರೆ.
Related posts
ನೀತಿ ಸಂಹಿತೆ ನೆಪದಲ್ಲಿ ಆಟೋ ಚಾಲಕರಿಗೆ ಕಿರುಕುಳ: ಆಮ್ ಆದ್ಮಿ ಪಾರ್ಟಿ ಆಕ್ರೋಶ
ಬೆಂಗಳೂರು: ರಾಜಕೀಯ ಪಕ್ಷಗಳ ಸ್...
NEWS
ಪತ್ರಪಥ: ಆಂಧ್ರ- ಕರ್ನಾಕಟ ಗಡಿ ಭಾಗದಲ್ಲಿ KSRTC ಬಸ್ ಹೆಚ್ಚಿಸಿ - ಪ್ರಯಾಣಿಕರಿಗೂ ಅನುಕೂಲ ಸಂಸ್ಥೆಗೂ ಲಾಭ
ಮಾನ್ಯರೇ,: ಬೆಂಗಳೂರಿನಿಂದ ಯಲ...
NEWS
ಬಿಎಂಟಿಸಿ ಮಾಜಿ ಕಂಡಕ್ಟರ್ ಸೇರಿ 60 ಅಭ್ಯರ್ಥಿಗಳನ್ನೊಳಗೊಂಡ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಆಮ್ ಆದ್ಮಿ ಪಾರ್ಟಿ
ಬೆಂಗಳೂರು: ಕರ್ನಾಟಕ ವಿಧಾನಸಭಾ...
NEWS
Editordev
Leave a reply