NEWSನಮ್ಮಜಿಲ್ಲೆ

ಹೆಚ್ಚುತ್ತಿರುವ ಕೋವಿಡ್-19 ಹಿನ್ನೆಲೆ: ಮೈಸೂರಿನ ಹೊರವಲಯದಲ್ಲಿ 600 ಬೆಡ್ ಕೋವಿಡ್ ಕೇರ್ ಸೆಂಟರ್ ಸಿದ್ಧ

ಮುಕ್ತ ವಿವಿಯ ನೂತನ ಕಟ್ಟಡ ಅಕಾಡೆಮಿಕ್ ಭವನದಲ್ಲಿ ಸ್ಥಾಪಿಸಿರುವ  ಕೋವಿಡ್ ಕೇರ್ ಸೆಂಟರ್‌ಗೆ ಭೇಟಿ ನೀಡಿದ  ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮೈಸೂರಿನ ಹೊರವಲಯದ ಮಂಡಕಳ್ಳಿಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನೂತನ ಕಟ್ಟಡ  ಅಕಾಡೆಮಿಕ್ ಭವನದಲ್ಲಿ ಸ್ಥಾಪಿಸಿರುವ ನೂತನ ಕೋವಿಡ್ ಕೇರ್ ಸೆಂಟರ್ ಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಶನಿವಾರ  ಭೇಟಿ ನೀಡಿ ಪರಿಶೀಲಿಸಿದರು.

ಸುಮಾರು 55 ರೂಂ ಇದ್ದು, 600 ಬೆಡ್ ವರೆಗೆ ವ್ಯವಸ್ಥೆ ಮಾಡಬಹುದು. ಇಲ್ಲಿ ಎಲ್ಲಾ ಮೂಲ ಸೌಕರ್ಯ ಒದಗಿಸಲಾಗಿದೆ. ಒಂದೆರೆಡು ದಿನದಲ್ಲಿ ಸಂಪೂರ್ಣ ಸಿದ್ಧವಾಗಲಿದೆ. ಪ್ರತಿ ಕೊಠಡಿಗೆ ಟಿ.ವಿ. ಕೇಬಲ್ ಸಂಪರ್ಕ, ಇಂಟರ್ನೆಟ್ ಸಂಪರ್ಕ, ವೈಫೈ ವ್ಯವಸ್ಥೆ ಇದೆ ಎಂದು ಈ ವೇಳಿ ಸೋಮಶೇಖರ್‌ ತಿಳಿಸಿದರು.

ಸ್ನಾನದ ಕೊಠಡಿ, ಶೌಚಾಲಯ, ಬಟ್ಟೆ ಸ್ವಚ್ಚಗೊಳಿಸಲು ಬೇಕಾದ ವ್ಯವಸ್ಥೆ ಇದೆ. ಸ್ನಾನಕ್ಕೆ ಬಿಸಿ ನೀರಿನ ವ್ಯವಸ್ಥೆ ಇದೆ. ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಪ್ರತ್ಯೇಕ ವಿಭಾಗ, ಆಡಳಿತ ವಿಭಾಗವನ್ನು ಈ ಕೇಂದ್ರದಲ್ಲಿ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗಿದೆ ಎಂದರು.

ಮನರಂಜನೆಗಾಗಿ ಒಳಾಂಗಣ ಆಟಗಳ ಪರಿಕರಗಳನ್ನು ಒದಗಿಸಲಾಗುವುದು. ನಮಗೆ ಯಾವುದೇ ಬೆಡ್ ಕೊರತೆ ಇಲ್ಲ. 100 ಜನರಿಗೆ ಇಬ್ಬರು ಸ್ಟಾಫ್ ನರ್ಸ್, ಒಬ್ಬರು ವೈದ್ಯರು ಕೆಲಸ ಮಾಡುವರು ಎಂದರು.

ಸಿದ್ದರಾಮಯ್ಯ ವಿಪಕ್ಷ  ನಾಯಕ ಹಾಗಾಗಿ ವಿರೋಧ ಮಾಡುತ್ತಾರೆ
ಕೊರೊನಾ ವಿಚಾರದಲ್ಲಿ ಅವ್ಯವಹಾರ ಆರೋಪ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು ವಿಧಾನಸೌಧಕ್ಕೆ ಬನ್ನಿ ನಿಮಗೆ ಬೇಕಾದ ದಾಖಲೆ ಕೊಡುತ್ತೇವೆ. ಕೊರೊನಾ ವಿಚಾರದಲ್ಲಿ ಅವ್ಯವಹಾರ ಮಾಡುವವರು ಮನುಷ್ಯತ್ವ ಇಲ್ಲದವರು. ನಾವು ವೆಚ್ಚ ಮಾಡಿರುವುದೇ 550ಕೋಟಿ ರೂ. ಹೀಗಿರುವಾಗ 2 ಸಾವಿರ ಕೋಟಿ ಅವ್ಯವಹಾರ ಎನ್ನುತ್ತಿದ್ದಾರೆ ಇದು ಹೇಗೆ ಸಾಧ್ಯ. ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರು ಹಾಗಾಗಿ ವಿರೋಧ ಮಾಡುತ್ತಿದ್ದಾರೆ. ಯಾವುದೇ ಅವ್ಯವಹಾರ ನಡೆದಿಲ್ಲ ಎಂದರು.

ಬೆಂಗಳೂರಿನಲ್ಲಿ ವಲಯವಾರು ಉಸ್ತುವಾರಿಯನ್ನು ಸಚಿವರಿಗೆ ನೀಡಲಾಗಿದೆ. ಶುಕ್ರವಾರ ಯಶವಂತಪುರ, ಆರ್.ಆರ್.ನಗರಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿದ್ದೇನೆ. ಅದೇ ರೀತಿ ಇತರ ಸಚಿವರು ಸಹ ಸಭೆ ನಡೆಸುತ್ತಿದ್ದಾರೆ. ಅಧಿಕಾರಿಗಳ ಸಭೆ ನಡೆಸಿಲ್ಲ ಎಂಬುದು ಸುಳ್ಳು ಆರೋಪ.  ನನ್ನ ವ್ಯಾಪ್ತಿಗೆ ಮೂರು ಕ್ಷೇತ್ರಗಳು ಬರಲಿವೆ. ಎಲ್ಲಾ ಕ್ಷೇತ್ರದ ಅಧಿಕಾರಿಗಳ ಸಭೆ ನಡೆಸಿದ್ದೇನೆ. ಕೆಲ ಸಚಿವರು ನಿನ್ನೆಯೇ ಸಭೆ ಮಾಡಿದ್ದಾರೆ ಮತ್ತೆ ಕೆಲವರು ಇಂದು ಸಭೆ ನಡೆಸಲಿದ್ದಾರೆ. ನಾವೆಲ್ಲರೂ ನಮಗೆ ವಹಿಸಿರುವ ಜವಾಬ್ದಾರಿಯನ್ನು ನಿಭಾಯಿಸುತ್ತೇವೆ ಎಂದರು.

ಮೈಸೂರಿನಲ್ಲಿ ನರಸಿಂಹರಾಜ ಕ್ಷೇತ್ರದಲ್ಲಿ ಕೊರೊನಾ ಪಾಸಿಟಿವ್ ಹೆಚ್ಚಾಗಿ ಕಾಣುತ್ತಿದೆ.  ನರಸಿಂಹರಾಜ ಕ್ಷೇತ್ರದ ಕೆಲವು ಜನರು ಪರೀಕ್ಷೆಗೆ ಸಹಕಾರ ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಆ ಕ್ಷೇತ್ರದ ಕೆಲವು ಪ್ರದೇಶಗಳನ್ನು ಲಾಕ್ ಡೌನ್ ಮಾಡುವ ಬಗ್ಗೆ ಆಲೋಚಿಸಲಾಗುತ್ತಿದೆ. ಈ ಭಾಗದಲ್ಲಿ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಜಾಸ್ತಿಯಾಗಿದೆ. ಇಲ್ಲಿನ ಜನರು ಪರೀಕ್ಷೆ ಮಾಡಿಸಿಕೊಳ್ಳಲು ಬರುತ್ತಿಲ್ಲ. ಅಲ್ಲಿನ ಶಾಸಕರು ಇತರ ಮುಖಂಡರೊಂದಿಗೆ ಮಾತನಾಡಿ ಲಾಕ್ ಡೌನ್ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದರು.

ಶಾಸಕ ಎಲ್. ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಶ್ಯಂತ್, ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ  ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ