NEWSದೇಶ-ವಿದೇಶ

ಕೊರೊನಾ ವಿರುದ್ಧದ ಹೋರಾಟಕ್ಕೆ ಪಿಎಂ ಕೇರ್ಸ್ ನಿಧಿಯಿಂದ 3100 ಕೋಟಿ ರೂ. ಬಿಡುಗಡೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಪಿ.ಎಂ.ಕೇರ್ಸ್ (ತುರ್ತು ಪರಿಸ್ಥಿತಿಗಳಲ್ಲಿ ಪ್ರಧಾನ ಮಂತ್ರಿ ಅವರ ನಾಗರಿಕ ನೆರವು ಮತ್ತು ಪರಿಹಾರ ) ನಿಧಿ ಟ್ರಸ್ಟ್ ಬುಧವಾರ ಕೋವಿಡ್ -19 ರ ವಿರುದ್ದ ಹೋರಾಡಲು 3100 ಕೋ.ರೂ.ಗಳನ್ನು ದೇಶದ ಎಲ್ಲಾ ರಾಜ್ಯಗಳಿಗೂ ಅವಶ್ಯಕತೆಗೆ ಅನುಗುಣವಾಗಿ  ಬಿಡುಗಡೆ ಮಾಡಿದೆ.

ಒಟ್ಟು 3100 ಕೋ ಟಿ ರೂ.ಗಳಲ್ಲಿ 2000 ಕೋಟಿ ರೂ.ಗಳನ್ನು ವೆಂಟಿಲೇಟರ್‌ಗಳ ಖರೀದಿಗೆ , 1000 ಕೋ ಟಿ ರೂ.ಗಳನ್ನು ವಲಸೆ ಕಾರ್ಮಿಕರ ಕಾಳಜಿಗಾಗಿ ಬಳಸಲು ಮತ್ತು 100 ಕೋ ಟಿ ರೂ.ಗಳನ್ನು ಲಸಿಕೆ ಅಭಿವೃದ್ಧಿಗಾಗಿ  ನೀಡಲು ತಿಳಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಟ್ರಸ್ಟನ್ನು 2020 ರ ಮಾರ್ಚ್ 27 ರಂದು  ಪ್ರಧಾನ ಮಂತ್ರಿ  ನರೇಂದ್ರ ಮೋದಿ (ಅಧಿಕಾರೇತರ) ಅವರ ನೇತೃತ್ವದಲ್ಲಿ ರಚಿಸಲಾಗಿತ್ತು. ಇದರ ಇತರ ಅಧಿಕಾರೇತರ ಸದಸ್ಯರೆಂದರೆ ರಕ್ಷಣಾ ಸಚಿವರು, ಗೃಹ ಸಚಿವರು ಮತ್ತು ಹಣಕಾಸು ಸಚಿವರು. ಈ ಪ್ಯಾಕೇಜನ್ನು ಘೋಷಿಸಿದ ಪ್ರಧಾನ ಮಂತ್ರಿ   ಪಿ.ಎಂ. ಕೇರ್ಸ್ ನಿಧಿಗೆ ಉದಾರವಾಗಿ ದೇಣಿಗೆ ನೀಡಿದವರಿಗೆ ಕೃತಜ್ಞತೆ ಸಲ್ಲಿಸಿದರು. ಈ ನಿಧಿ, ಕೊರೊನಾ-19 ವಿರುದ್ಧ ಭಾರತದ ಹೋರಾಟಕ್ಕೆ ನೆರವಾಗಲಿದೆ.

50,000 ವೆಂಟಿ ಲೇಟರುಗಳು
ದೇಶಾದ್ಯಂತ ಕೋವಿಡ್-19 ಪ್ರಕರಣಗಳನ್ನು ನಿಭಾಯಿಸಲು ಮೂಲಸೌಕರ್ಯವನ್ನು ಕ್ರೋಢೀಕರಿಸುವುದಕ್ಕಾಗಿ 50 ಸಾವರ ದೇಶಿ ನಿರ್ಮಿತ ವೆಂಟಿಲೇಟರುಗಳನ್ನು ಪಿ.ಎಂ. ಕೇರ್ಸ್ ನಿಧಿಯಿಂದ ಅಂದಾಜು 2,000 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗುವುದು. ಈ ವೆಂಟಿಲೇಟರುಗಳನ್ನು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಸರಕಾರ ನಿರ್ವಹಿಸುವ ಕೋವಿಡ್ ಆಸ್ಪತ್ರೆಗಳಿಗೆ ಗಂಭೀರ ಸ್ಥಿತಿಯಲ್ಲಿರುವ ಕೋವಿಡ್ -19 ಪ್ರಕರಣಗಳ ಚಿಕಿತ್ಸೆಗಾಗಿ ಒದಗಿಸಲಾಗುವುದು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ವಲಸೆ ಕಾರ್ಮಿಕರಿಗೆ ಪರಿಹಾರ
ವಲಸೆಗಾರರ ಮತ್ತು ಬಡವರ ಕಲ್ಯಾಣಕ್ಕಾಗಿ ಈಗಿರುವ ಕ್ರಮಗಳನ್ನು ಬಲಪಡಿಸಲು ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟು 1000 ಕೋಟಿ ರೂ. ಗಳ ನೆರವನ್ನು ಪಿ.ಎಂ. ಕೇರ್ಸ್ ನಿಧಿಯಿಂದ ಕೊಡಲಾಗುವುದು. ಈ ಮೊತ್ತವನ್ನು ಜಿಲ್ಲಾಧಿಕಾರಿಗಳು/ ಮುನ್ಸಿಪಲ್ ಕಮಿಷನರ್‌ ವಲಸೆಗಾರರಿಗೆ ವಸತಿ ಒದಗಿಸುವಿಕೆ, ಆಹಾರ ವ್ಯವಸ್ಥೆ, ವೈದ್ಯಕೀಯ ಚಿಕಿತ್ಸೆ  ಮತ್ತು ವಲಸೆಗಾರರ ಸಾರಿಗೆ ವೆಚ್ಚಕ್ಕಾಗಿ ಬಳಸಿಕೊಳ್ಳಲು ಅನುಕೂಲವಾಗುವಂತೆ  ಒದಗಿಸಲಾಗುವುದು.

ಲಸಿಕೆ ಅಭಿವೃದ್ಧಿ
ಕೋವಿಡ್-19 ಕ್ಕೆ ಲಸಿಕೆಯು ಅತ್ಯಂತ ಅವಶ್ಯಕವಾಗಿದ್ದು ಮತ್ತು ಭಾರತೀಯ ಶೈಕ್ಷಣಿಕ ವಲಯ, ನವೋದ್ಯಮಗಳು, ಹಾಗೂ ಕೈಗಾರಿಕೆಗಳು ಲಸಿಕೆ ವಿನ್ಯಾಸ ಮತ್ತು ಅಭಿವೃದ್ಧಿಗಾಗಿ ಮುಂದೆ ಬಂದಿವೆ. ಕೋವಿಡ್ -19 ಲಸಿಕೆ ವಿನ್ಯಾಸಕಾರರನ್ನು ಮತ್ತು ಅಭಿವೃದಿಗಾರರನ್ನು ಬೆಂಬಲಿಸಲು ಪಿ.ಎಂ. ಕೇರ್ಸ್ ನಿಧಿಯಿಂದ 100 ಕೋಟಿ ರೂಪಾಯಿಗಳನ್ನು ಲಸಿಕೆ ಅಭಿವೃದ್ಧಿಗೆ ವೇಗ ತಂದುಕೊಡುವುದಕ್ಕಾಗಿ ನೀಡಲಾಗುವುದು, ಇದನ್ನು ಪ್ರಧಾನ ವೈಜ್ಞಾನಿಕ ಸಲಹೆಗಾರರ ಮೇಲುಸ್ತುವಾರಿಯಲ್ಲಿ ಬಳಸಲಾಗುವುದು ಎಂದು ಟ್ರಸ್ಟ್‌ ಮಾಹಿತಿ ನೀಡಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

2 Comments

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...