NEWSಕೃಷಿದೇಶ-ವಿದೇಶ

ಕೃಷಿಗೆ ಪ್ರಮುಖ ಒತ್ತು ನೀಡಲು ಲಕ್ಷ ಕೋಟಿ ರೂ. ಮೀಸಲು

20 ಲಕ್ಷ ಕೋಟಿ ರೂ. ಆರ್ಥಿಕ ಪ್ಯಾಕೇಜ್‌ನ ಮೂರನೇ ಹಂತದ ಘೋಷಣೆಗಳ ವಿವರ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೃಷಿ ಮೂಲ  ಸೌಕರ್ಯ ಅಭಿವೃದ್ಧಿಗೆ 1 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ನ್ಯೂಡೆಲ್ಲಿ ಇಂದು ಮೂರನೇ ದಿನ ಸುದ್ದಿಗೋಷ್ಠಿಯಲ್ಲಿ ಕೊರೊನಾ ಸೋಂಕಿನಿಂದ ಉಂಟಾಗಿರುವ ಲಾಕ್‌ಡೌನ್  ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 20 ಲಕ್ಷ ಕೋಟಿ ರೂ. ಆರ್ಥಿಕ ಪ್ಯಾಕೇಜ್‌ನ ಮೂರನೇ ಹಂತದ ಘೋಷಣೆಗಳ ವಿವರವನ್ನು ನಿರ್ಮಲಾ ಸೀತಾರಾಮನ್ ವಿವರಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಕೃಷಿಗೆ ಸಂಬಂಧಿಸಿದಂತೆ ಇಂದು 11 ಘೋಷಣೆಗಳನ್ನು ಮಾಡಲಾಗಿಗುತ್ತಿದ್ದು,  ಕಳೆದ ಎರಡು ತಿಂಗಳಲ್ಲಿ ಫಸಲ್ ಬಿಮಾ ಯೋಜನೆ ಅಡಿ ರೈತರಿಗೆ 6400 ಕೋಟಿ ರೂಪಾಯಿ ನೀಡಿದ್ದೇವೆ. ಕಳೆದ ಎರಡು ತಿಂಗಳಲ್ಲಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಅಡಿ ರೈತರಿಗೆ 18,700 ಕೋಟಿ ರೂ. ವರ್ಗಾವಣೆ ಮಾಡಿದ್ದೇವೆ. ಎರಡು ತಿಂಗಳಲ್ಲಿ ರೈತರಿಗೆ ಕನಿಷ್ಟ ಬೆಂಬಲ  ಬೆಲೆ ನೀಡಿ ಉತ್ಪನ್ನ ಖರೀದಿ ಮಾಡಿದ್ದೇವೆ. ಇದಕ್ಕಾಗಿ 74,300 ಕೋಟಿ ರೂಪಾಯಿ ನೆರವು ನೀಡಲಾಗಿದೆ ಎಂದು ಆರ್ಥಿಕ ಪ್ಯಾಕೇಜ್ ನ ಮೂರನೇ ಕಂತಿನಲ್ಲಿ ಕೃಷಿ ಮತ್ತು ಕೃಷಿ ಸಂಬಂಧಿತ ವಿಷಯಗಳಿಗೆ ಆದ್ಯತೆ ನೀಡಿರುವ ಬಗ್ಗೆ ತಿಳಿಸಿದರು.

 ಕೃಷಿ ಅಭಿವೃದ್ಧಿಗೆ ಆದ್ಯತೆ ನೀಡಿ. ಕೃಷಿ ಉತ್ಪನ್ನಗಳ ಸಾಗಾಟಕ್ಕೆ 10 ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ. ಕ್ಲಸ್ಟರ್ ಅಧಾರಿತ ಕೃಷಿಗೆ 10  ಸಾವಿರ ಕೋಟಿ ರೂಪಾಯಿ ಮತ್ತು ಆಯುರ್ವೇದ ಉತ್ಪನ್ನಗಳ ಸಾಗಾಟಕ್ಕೂ ಹಣ ಮೀಸಲಿಡಲಾಗಿದೆ ಎಂದು ಹೇಳಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಬೆಳೆದ ಫಸಲು ಮಾರಲು ರೈತರಿಗೆ ಮುಕ್ತ ಅವಕಾಶ
ಕೃಷಿ ಮಾರುಕಟ್ಟೆಗಳಲ್ಲಿ ಸುಧಾರಣೆ ತರಲು ಕೇಂದ್ರ ಸರ್ಕಾರ ನಿರ್ಧಾರ ತೆಗೆದು ಕೊಂಡಿದೆ.  ಎಪಿಎಂಸಿ ಯಲ್ಲೇ ಮಾರಾಟ ಮಾಡಬೇಕೆಂಬ ನಿಯಮವಿಲ್ಲ. ರೈತರಿಗೆ ತಮಗಿಷ್ಟವಾದ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಎಪಿಎಂಸಿಯಲ್ಲಿ ಪರವಾನಗಿ ಹೊಂದಿರುವ ರೈತರಿಗೆ ಮಾತ್ರ  ಅವಕಾಶ. ಇದರಿಂದ ಬೇಕಾಬಿಟ್ಟಿ ಖರೀದಿ ಮಾಡುವವರಿಗೆ ಕಡಿವಾಣ ಹಾಕಲಾಗುತ್ತದೆ. ಕೃಷಿ ಉತ್ಪನ್ನಗಳ ಅಂತಾರಾಜ್ಯ ಮುಕ್ತ ಮಾರಾಟಕ್ಕೆ ಕೇಂದ್ರ ಸರ್ಕಾರದಿಂದ ಅವಕಾಶ ನೀಡಿದ್ದು, ತಮಗೆ ಇಷ್ಟ ಬಂದ ಕಡೆ ರೈತರು ಉತ್ಪನ್ನ ಮಾರಬಹುದು. ಇ-ಟ್ರೇಡಿಂಗ್ ಮೂಲಕ ಕೃಷಿ  ಉತ್ಪನ್ನಗಳ ಮಾರಾಟ ಮಾಡಬಹುದು. ರೈತರು ಸಗಟು ಬೆಲೆಗೆ ಮಾರಾಟ ಮಾಡಲು ಕಾನೂನಿನ ಸ್ವರೂಪ ನೀಡಲಾಗುವುದು ಎಂದು ಹೇಳಿದರು.

ಇದಲ್ಲದೆ ಎಲ್ಲಾ ದೇಶಿಯ ಆಹಾರ ಉತ್ಪನ್ನಗಳ ಮಾರುಕಟ್ಟೆ ವಿಸ್ತರಣೆಗೆ ಒತ್ತು ನೀಡಲಾಗುತ್ತದೆ, ಸಾವಯವ ಕೃಷಿ, ಹರ್ಬಲ್ ಕೃಷಿಕರಿಗೆ  ನೆರವು ನೀಡುತ್ತೇವೆ. ಸಾವಯವ ಪದ್ಧತಿಯಲ್ಲಿ ರಾಗಿ ಬೆಳೆಯಲು ಪ್ರೋತ್ಸಾಹ ನೀಡಲಾಗುವುದು. ಕರ್ನಾಟಕ ರಾಗಿ ಬೆಳೆಗೆ ಜಾಗತಿಕ ಬ್ರ್ಯಾಂಡಿಂಗ್ ಆಗಿದ್ದು, ಇದೇ ರೀತಿಯಲ್ಲಿ ಕೃಷಿ ಉತ್ಪನ್ನಗಳ ಬ್ರ್ಯಾಂಡಿಂಗ್ ಮತ್ತು ಮಾರ್ಕೆಟಿಂಗ್ ಮಾಡುತ್ತೇವೆ. ಬ್ರ್ಯಾಂಡಿಂಗ್ ಮೂಲಕ ಆಹಾರ ಉತ್ಪನ್ನಗಳ ಮಾರಾಟಕ್ಕೆ  ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಹಾಲು ಉತ್ಪಾದಕರಿಗೆ ನೆರವು
ಲಾಕ್‌ಡೌನ್ ಅವಧಿಯಲ್ಲಿ ಹಾಲಿಗೆ ಬೇಡಿಕೆ ಶೇ 20–25ರಷ್ಟು ಕಡಿಮೆಯಾಗಿದೆ. ಹಾಲು ಉತ್ಪಾದಕರಿಗೆ ಸಾಲದ ಮೇಲಿನ ಬಡ್ಡಿಯಲ್ಲಿ ಸರ್ಕಾರದಿಂದ ಶೇ. 2ರಷ್ಟು ಪಾವತಿ ಮಾಡುವ ಹೊಸ ಯೋಜನೆ. 2020–21 ಹಣಕಾಸು ವರ್ಷಕ್ಕೆ ಅನ್ವಯವಾಗುತ್ತದೆ. ಇದರಿಂದಾಗಿ 2 ಕೋಟಿ ರೈತರಿಗೆ ಉಪಯೋಗವಾಗಲಿದ್ದು, 5,000 ಕೋಟಿ ರೂ. ಹೆಚ್ಚುವರಿ ನಗದು ಹೊರಬರಲಿದೆ. ಹೈನುಗಾರಿಕೆ ಮೂಲಸೌಕರ್ಯ ಅಭಿವೃದ್ಧಿ ನಿಧಿಗೆ 15,000 ಕೋಟಿ ರೂ ಮೀಸಲಿಟ್ಟಿದ್ದು, ಲಾಕ್‌ಡೌನ್‌ ಅವಧಿಯಲ್ಲಿ ಕನಿಷ್ಠ ಬೆಂಬಲ ಬೆಲೆಗಾಗಿ 74,300 ಕೋಟಿ ರೂ.ಗಳು  ಮೀಸಲಿಡಲಾಗಿದೆ. ಅಲ್ಲದೆ ಪಿಎಂ ಕಿಸಾನ್‌ ನಿಧಿಯಿಂದ 18,700 ಕೋಟಿ ರೂ. ವರ್ಗಾಯಿಸಲಾಗಿದೆ. ಸ್ಥಳೀಯ ತಯಾರಿಕೆಗಳನ್ನು ಪ್ರಚುರ ಪಡಿಸುವುದು ಹಾಗೂ ಜಗತ್ತಿನಾದ್ಯಂತ ತಲುಪಿಸುವ ನಿಟ್ಟಿನಲ್ಲಿ ಕಿರು ಆಹಾರ ಉದ್ಯಮಗಳ ಉನ್ನತಿಗಾಗಿ ರೂ 10,000 ಕೋಟಿ ರೂ. ಮೀಸಲಿಡಲಾಗಿದೆ  ಎಂದು ವಿವರ ನೀಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಎಲ್ಲಾ ಪಶುಗಳಿಗೆ ಶೇ.100 ರೋಗ ನಿರೋಧಕ ಲಸಿಕೆ
ಪಶುಸಂಗೋಪನೆಯ ಮೂಲ ಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಮಿಲ್ಕ್ ಪೌಡರ್, ಚೀಸ್, ಕ್ರೀಮ್ ಉತ್ಪನ್ನಗಳ ಗುಣಮಟ್ಟಕ್ಕೆ ಒತ್ತು ನೀಡಲಾಗಿದೆ ಈಗಾಗಲೇ 1.5 ಕೋಟಿ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. 53 ಕೋಟಿ ಜಾನುವಾರುಗಳಿಗೆ ಲಸಿಕೆ ಹಾಕುವ ಕಾರ್ಯಕ್ಕೆ ಚಾಲನೆ ನೀಡಳಾಗುವುದು. ಲಸಿಕೆಗಾಗಿ 13,343 ಕೋಟಿ ರೂ. ಮೀಸಲಿಡಲಾಗಿದೆ. ಡೈರಿ ಉತ್ಪನ್ನಗಳ ಪ್ರೋತ್ಸಾಹಕ್ಕೆ 15  ಸಾವಿರ ಕೋಟಿ ರೂಪಾಯಿ ತೆಗೆದಿರಿಸಲಾಗಿದೆ ಎಂದು ಹೇಳಿದರು.

ಮೀನುಗಾರಿಕೆ ಉದ್ಯಮದಲ್ಲಿ ಉದ್ಯೋಗ ಸೃಷ್ಟಿಗೆ ಒತ್ತು
ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಅಡಿಯಲ್ಲಿ 20 ಸಾವಿರ ಕೋಟಿ ರೂಪಾಯಿ ನೆರವು ಮೀಸಲಿಡಲಾಗಿದ್ದು, ಈ ಮೂಲಕ ಮೀನುಗಾರಿಕೆ ಉದ್ಯಮದಲ್ಲಿ 55 ಲಕ್ಷ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಮೀನುಗಾರರಿಗೆ ಹೊಸ ಬೋಟ್, ಉಪಕರಣ ಖರೀದಿಗೆ ಸಾಲ ನೀಡಲಾಗುವುದು ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಎಣ್ಣೆ, ಬೇಳೆ, ಆಲೂಗೆಡ್ಡೆ, ಈರುಳ್ಳಿ ಸಂಗ್ರಹ ನಿರ್ಬಂಧ ರದ್ದು
ಇನ್ನು ಟೊಮ್ಯಾಟೊ, ಈರುಳ್ಳಿ, ಆಲೂಗೆಡ್ಡೆ ಬೆಳೆ ಸಾಗಣೆ ಮತ್ತು ಸಂಸ್ಕರಣೆಗೆ 500 ಕೋಟಿ ರೂಪಾಯಿ ಮತ್ತು ಸಾಗಾಟಕ್ಕೆ ಶೇ.50ರಷ್ಟು ಸಬ್ಸಿಡಿ ನೀಡಲಾಗುತ್ತದೆ. ಅಗತ್ಯ ವಸ್ತುಗಳ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧಾರ ಮಾಡಲಾಗಿದೆ. ಇದರಿಂದ ರೈತರಿಗೆ ಉತ್ತಮ ಬೆಂಬಲ ಬೆಲೆ  ನೀಡಲು ಪ್ರಯತ್ನಿಸಲಾಗುವುದು. ಎಣ್ಣೆ, ಬೇಳೆ, ಆಲೂಗೆಡ್ಡೆ, ಈರುಳ್ಳಿ ಸಂಗ್ರಹ ನಿರ್ಬಂಧ ರದ್ದು ಮಾಡಲಾಗುವುದು. ರಾಷ್ಟ್ರೀಯ ವಿಪತ್ತು, ದರ ಕುಸಿತ ವೇಳೆ ಮಾತ್ರ ನಿರ್ಬಂಧ ರದ್ದು. ಉಳಿದ ದಿನಗಳಲ್ಲಿ ಸಂಗ್ರಹಣೆಗೆ ಇರುವ ನಿರ್ಬಂಧ ಮುಂದುವರಿಯುವುದು. ಅಗತ್ಯವಸ್ತುಗಳನ್ನು  ಸಂಗ್ರಹಿಸಲು ಸದ್ಯಕ್ಕೆ ಯಾವುದೇ ಮಿತಿ ಇಲ್ಲ ಎಂದು ಹೇಳಿದರು.

ಸಣ್ಣ ಆಹಾರ ಉದ್ಯಮಕ್ಕೆ 10 ಸಾವಿರ ಕೋಟಿ ನೆರವು
2 ಲಕ್ಷ ಕಿರು ಆಹಾರ ಉದ್ಯಮಗಳಿಗೆ ಅನುಕೂಲ ಕಲ್ಪಿಸುವ ಉದ್ದೆಸದಿಂದ ಸಮುದಾಯ ಆಧಾರಿತ ಈ ವ್ಯವಸ್ಥೆಯಲ್ಲಿ ಬ್ರ್ಯಾಂಡಿಂಗ್‌ ಮತ್ತು ಮಾರ್ಕೆಟಿಂಗ್‌  ಹೆಚ್ಚಿನ ಒತ್ತು ನೀಡಲಾಗುತ್ತಿದೆ.  ಸ್ಥಳೀಯವಾಗಿ ಉತ್ಪಾದಿಸಿದ ಆಹಾರ ಪದಾರ್ಥಗಳನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡಲು  ಈ ನಿಧಿಯನ್ನು ಬಳಿಸಿಕೊಳ್ಳಲಾಗುತ್ತದೆ. ಮಹಿಳಾ ಉದ್ಯೋಗಿಗಳು ಹಾಗೂ ಮಾಲೀಕರನ್ನು ಕೇಂದ್ರೀಕರಿಸಲಾಗುತ್ತದೆ. ಇನ್ನು ಔಷಧಿ ಸಸ್ಯಗಳ ಕೃಷಿ ಉತ್ತೇಜನಕ್ಕೆ 4 ಸಾವಿರ ಕೋಟಿ. ಗಿಡಮೂಲಿಕೆ ಉಳುಮೆ ಮಾಡಲು ನೆರವು ನೀಡಲಾಗುವುದು. ಜೇನು ಸಾಕಣೆಗಾಗಿ 500 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಇದರಿಂದ 2 ಲಕ್ಷ ಜೇನು ಕೃಷಿಕರಿಗೆ ಅನುಕೂಲವಾಗಲಿದೆ. ಇದರಿಂದ ಗ್ರಾಮೀಣ ಮಹಿಳೆಯರಿಗೂ ಉದ್ಯೋಗ ಸೃಷ್ಟಿಯಾಗಲಿದೆ. ಜೇನಿನಿಂದ ಉತ್ಪಾದನೆಯಾಗುವ ಮೇಣ ರಫ್ತು ಕಡಿತಕ್ಕೆ ಯತ್ನಿಸಲಾಗುತ್ತದೆ ಎಂದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...