NEWSಆರೋಗ್ಯನಮ್ಮರಾಜ್ಯ

ಸಾಮಾನ್ಯ ರೋಗಿಗಳಿಗೆ ಚಿಕಿತ್ಸೆ ಕೊಡಲು ತಾಕೀತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೋವಿಡ್-19 ಸೋಂಕಿತರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ಹಾಸಿಗೆ ಮೀಸಲಿಡಲು ರಾಜ್ಯ ಸರ್ಕಾರ ಆದೇಶಿಸಿದೆ. ಅದರಂತೆ ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ಹಾಸಿಗೆ ಕೋವಿಡ್ ಹಾಗೂ ಶೇ.50 ಸಾಮಾನ್ಯ ರೋಗಿಗಳಿಗೆ ಮೀಸರಿಸಬೇಕೆಂಬ ಸೂಚನೆ ಇದೆ ಎಂದು ಆಯುಕ್ತ ಮಂಜುನಾಥ್‌ ಪ್ರಸಾದ್‌ ತಿಳಿಸಿದರು.

ಪಾಲಿಕೆ ಕೇಂದ್ರ ಕಚೇರಿ ಸಭಾಂಗಣ-01ರಲ್ಲಿ ಶುಕ್ರವಾರ  ಆಯೋಜಿಸಿದ್ದ  ಸಭೆ  ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಸಣ್ಣ-ಸಣ್ಣ/ಕಡಿಮೆ ಹಾಸಿಗೆಗಳಿರುವ 5 ರಿಂದ 10 ಆಸ್ಪತ್ರೆಗಳು ಒಟ್ಟಿಗೆ ಬಂದು ಉದಾಹರಣೆಗೆ 200 ಹಾಸಿಗೆಗಳಿದ್ದಲ್ಲಿ ಅದರಲ್ಲಿ ಕೆಲ ಆಸ್ಪತ್ರೆಗಳನ್ನು ಕೋವಿಡ್ ಚಿಕಿತ್ಸೆಗಾಗಿ ಹಾಸಿಗೆಗಳನ್ನು ನೀಡಿ, ಉಳಿದ ಆಸ್ಪತ್ರೆಗಳಲ್ಲಿ ಸಾಮಾನ್ಯ ರೋಗಿಗಳಿಗೆ ಚಿಕಿತ್ಸೆ ನೀಡುವಂತೆಯೂ ಸೂಚನೆ ನೀಡಲಾಗಿದೆ ಎಂದರು.

ಪ್ರತಿಯೊಬ್ಬ ಬಡವರಿಗೂ ಹಾಸಿಗೆ ಲಭ್ಯವಾಗಬೇಕು. ಆ ದೃಷ್ಟಿಯಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಂದು ವೇಳೆ ಹಾಸಿಗೆ ಮೀಸಲಿಡದಿದ್ದರೆ ಕಠಿಣವಾದ ಕ್ರಮ ತೆಗೆದುಕೊಳ್ಳುವುದು. ಈಗಾಗಲೇ ಸೇಂಟ್ ಮಾರ್ಥಾಸ್  ಆಸ್ಪತ್ರೆ (ನೃಪತುಂಗ ರಸ್ತೆ), ರಂಗದೋರ್ ಮೆಮೋರಿಯಲ್ ಆಸ್ಪತ್ರೆ (ಶಂಕರಪುರಂ), ಶಿಫಾ ಆಸ್ಪತ್ರೆ(ಕ್ವೀನ್ಸ್ ರಸ್ತೆ) ಹಾಗೂ ಪೋರ್ಟಿಸ್ ಆಸ್ಪತ್ರೆ (ಕನ್ನಿಂಗ್‌ಹ್ಯಾಮ್ ರಸ್ತೆ)ಗಳಿಗೆ ವಿಪತ್ತು ನಿವರ್ಹಣಾ ಕಾಯ್ದೆ ಅಡಿ ದೂರು ದಾಖಲಿಸಲು ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಸಲ್ಲಿಸಿದ ಕೆಎಚ್‌ಎಂ ಹೈಕೋರ್ಟ್ ಬಿಗ್ ಶಾಕ್ ಜತೆಗೆ ಸಿಎಂ ಸಿದ್ದರಾಮಯ್ಯಗೆ ನಾಳೆ ಕೂಡ ಮಹತ್ವದ ದಿನ ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ- ಗವರ್ನರ್ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ಬೆಂಗಳೂರು ಗ್ರಾಮಾಂತರ: ಉನ್ನತ ಗ್ರಾಮ ಅಭಿಯಾನದಡಿ ಜಿಲ್ಲೆಯ 14 ಗ್ರಾಮಗಳು ಆಯ್ಕೆ: ಜಿಲ್ಲಾಧಿಕಾರಿ ಡಾ.ಶಿವಶಂಕರ್ ಮಾನಸಿಕ ಆರೋಗ್ಯ ಸಮಾಲೋಚಕರ  ಹುದ್ಧೆಗೆ ಅರ್ಜಿ ಆಹ್ವಾನ ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ...