NEWSದೇಶ-ವಿದೇಶ

ಅಂಫಾನ್ ಚಂಡಮಾರುತಕ್ಕೆ ನಲುಗಿರುವ ಪಶ್ಚಿಮ ಬಂಗಾಳಕ್ಕೆ ಸಾವಿರ ಕೋಟಿ ರೂ. ಪರಿಹಾರ

ಹಾನಿಗೊಳಗಾದ ಪ್ರದೇಶವನ್ನು ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ ಘೋಷಣೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೊರೊನಾ ವೈರಸ್ ಬಳಿಕ ಅಂಫಾನ್ ಚಂಡಮಾರುತಕ್ಕೆ ನಲುಗಿ ಹೋಗಿರುವ ಪಶ್ಚಿಮ ಬಂಗಾಳಕ್ಕೆ  ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ 1000 ಕೋಟಿ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ಚಂಡಮಾರುತದ ಅಬ್ಬರಕ್ಕೆ ಪಶ್ಚಿಮ ಬಂಗಾಳದಲ್ಲಿ ಈ ವರೆಗೂ 77 ಮಂದಿ ಮೃತಪಟ್ಟಿದ್ದು, ಅನೇಕ ಪ್ರದೇಶಗಳಿಗೆ ತೆರಳಲು  ಸಾಧ್ಯವಾಗುತ್ತಿಲ್ಲವಾದ್ದರಿಂದ ಅಲ್ಲಿನ ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ.  ಈ ಎಲ್ಲವನ್ನು ಅವಲೋಕಿಸಿ ಪರಿಹಾರ ಕಾರ್ಯ ಹಾಗೂ ಮರು ನಿರ್ಮಾಣ ಕಾರ್ಯಗಳಂತ ಸಂದಿಗ್ಧ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಸದಾಕಾಲ ಪಶ್ಚಿಮಬಂಗಾಳದ ಜತೆಗೆ ನಿಲ್ಲಲಿದೆ. ಪಶ್ಚಿಮ ಬಂಗಾಳ ಮುನ್ನಡೆಯುವದಷ್ಟೇ ನಮಗೆ ಬೇಕು. ಮತ್ತಷ್ಟು ವೈಮಾನಿಕ ಸಮೀಕ್ಷೆಗಾಗಿ ಕೇಂದ್ರ ಶೀಘ್ರದಲ್ಲಿಯೇ ತಂಡವೊಂದನ್ನು ರವಾನಿಸಲಿದ್ದು, ಈ ತಂಡವು ನಷ್ಟವನ್ನು ಲೆಕ್ಕಹಾಕಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ಡೌನ್ಲೋಡ್ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಚಂಡಮಾರುತದಿಂದ ಉಂಟಾಗಿರುವ ಹಾನಿ ಕುರಿತು ಪರೀಶಿಲನೆ ನಡೆಸಲು  ಇಂದು ಬೆಳಗ್ಗೆ   ಮೋದಿಯವರು  ಪಶ್ಚಿಮ ಬಂಗಾಳ ತಲುಪಿದ್ದರು.   ಸ್ವತಃ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ರಾಜ್ಯಪಾಲ ಜಗದೀಪ್ ಧಂಖರ್  ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ವಾಗತಿಸಿದರು.  ಬಳಿಕ ಮೋದಿಯವರು ಸಿಎಂ ಮಮತಾ ಹಾಗೂ ರಾಜ್ಯಪಾಲ   ಧಂಖರ್ ಜತೆಗೆ ಚಂಡಮಾರುತದಿಂದ ಹೆಚ್ಚು ಹಾನಿಗೊಳಗಾಗಿರುವ ದಕ್ಷಿಣ ಬಂಗಾಳದಲ್ಲಿ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ನಡೆಸಿ, ನಷ್ಟದ ಕುರಿತು ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡರು.

ಬಳಿಕ ಅಧಿಕಾರಿಗಳೊಂದಿಗೆ ಸಭೆ  ನಡೆಸಿದರು. ಪಶ್ಚಿಮ ಬಂಗಾಳಕ್ಕೆ  1000 ರೂ. ಗಳ ಭರವಸೆಯನ್ನು ನೀಡುತ್ತಿದ್ದೇವೆ. ಘಟನೆಯಲ್ಲಿ ಸಾವನ್ನಪ್ಪಿರುವವರ ಕುಟುಂಬಕ್ಕೆ  .2 ಲಕ್ಷ ರೂ. ಹಾಗೂ ಗಾಯಾಳುಗಲಿಗೆ  50,000 ರೂ. ಪರಿಹಾರ ನೀಡಲಾಗುತ್ತದೆ ಎಂದು  ಮೋದಿಯವರು, ಹೇಳಿದ್ದಾರೆ.

ಕೊರೊನಾ ಹಾವಳಿ ಒಂದೆಡೆಯಾದರೆ, ಮತ್ತೊಂದೆಡೆ ಕೆಲ ರಾಜ್ಯಗಳಲ್ಲಿ ಚಂಡಮಾರುತಗಳು ಎದುರಾಗಿವೆ. ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಸಾಮಾಜಿಕ ದೂರ ಅಗತ್ಯವಿದೆ, ಆದರೆ ಚಂಡಮಾರುತದ ವಿರುದ್ಧ ಹೋರಾಡಲು ಜನರು ಸುರಕ್ಷಿತ ಪ್ರದೇಶಗಳಿಗೆ ಹೋಗಬೇಕಾಗಿದೆ. ಈ ಎಲ್ಲಾ ಸಂಕಷ್ಟಗಳ ನಡುವಲ್ಲೂ ಪಶ್ಚಿಮ ಬಂಗಾಳ ಉತ್ತಮವಾಗಿ ಹೋರಾಟ ನಡೆಸುತ್ತಿದೆ. ಇಂತಹ ಸಂದಿಗ್ಧ ಸಮಯದಲ್ಲಿ ನಾವೆಲ್ಲರೂ ಪಶ್ಚಿಮ ಬಂಗಾಳ ಜನತೆಯ  ಬೆಂಬಲಕ್ಕೆ ನಿಲ್ಲುತ್ತೇವೆಂದು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ಡೌನ್ಲೋಡ್ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್