Please assign a menu to the primary menu location under menu

NEWSದೇಶ-ವಿದೇಶ

ಚೀನಾಪರ ಎಂದು ವಿಶ್ವ ಆರೋಗ್ಯ ಸಂಸ್ಥೆ ವಿರುದ್ಧ ಟ್ರಂಪ್‌ ವಾಗ್ದಾಳಿ

ವಿಜಯಪಥ ಸಮಗ್ರ ಸುದ್ದಿ

ಅಮೆರಿಕ:  ಕೊರೊನಾ ಸೋಂಕಿನ ವಿಷಯದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಚೀನಾದ ಹೇಳಿಕೆಗೆ ತಕ್ಕಂತೆ ತಾಳ ಹಾಕುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗಂಭೀರ ಆರೋಪ ಮಾಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಕೊರೊನಾ ಸೋಂಕು ಬಿಕ್ಕಟ್ಟಿನ ಈ ನಡುವೆ ಅಮೆರಿಕ ಹಾಗೂ ಚೀನಾ ನಡುವಣ ದ್ವಿಪಕ್ಷೀಯ ಬಾಂಧವ್ಯ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜತೆಗೆ ವಿಶ್ವ ಆರೋಗ್ಯ ಸಂಸ್ಥೆಯು (WHO) ಚೀನಾದ ಕೈಗೊಂಬೆಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದ್ದಾರೆ.  ಅಲ್ಲದೆ WHOಗೆ ನೀಡುತ್ತಿರುವ ಆರ್ಥಿಕ ನೆರವಿನ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಕೊರೊನಾ ಸೋಂಕಿನ ವಿಷಯದಲ್ಲಿ ಚೀನಾ ಪರವಾಗಿ ನಿಂತಿರುವ ವಿಶ್ವ ಆರೋಗ್ಯ ಸಂಸ್ಥೆಗೆ ನೀಡುವ ಆರ್ಥಿಕ ನೆರವನ್ನು ತಡೆ ಹಿಡಿದಿರುವ ಟ್ರಂಪ್, ಮತ್ತಷ್ಟು ಆರೋಪಗಳನ್ನು ಮಾಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ವಿಶ್ವ ಆರೋಗ್ಯ ಸಂಸ್ಥೆ ಹೀಗೆ ಉದ್ದೇಶಪೂರ್ವಕವಾಗಿ ಮಾಡಲಾಗಿದೆ ಎಂದು ನಾನು ನಂಬುವುದಲ್ಲ. ಬಹುಶಃ ಅಸಮರ್ಥತೆಯಿಂದಾಗಿ ಆಗಿರಬಹುದು. ಅದರ ಹೇಗೆ ಮಾತನಾಡೇಬೇಕೆಂಬುದು ಅವರಿಗೆ ತಿಳಿದಿಲ್ಲಎಂದು ಸಂದರ್ಶನ ಒಂದರಲ್ಲಿ ಟ್ರಂಪ್ ಹೇಳಿದ್ದಾರೆ.

ನಾವು ಚೀನಾದ ಒಳಗೆ ಹೋಗಬೇಕೆಂದು ವಿಶ್ವಸಂಸ್ಥೆ ಬಯಸಿರಲಿಲ್ಲ. ವಿಶ್ವ ಆರೋಗ್ಯ ಸಂಸ್ಥೆಗೆ ವಾರ್ಷಿಕವಾಗಿ 500 ಮಿಲಿಯನ್ ಅಮೆರಿಕನ್ ಡಾಲರ್ ಪಾವತಿಸುತ್ತಿದ್ದೇವೆ. ವಿಶ್ವ ಆರೋಗ್ಯ ಸಂಸ್ಥೆ  ಚೀನಾದ ಕೈಗೊಂಬೆಯಂತೆ ವರ್ತಿಸುತ್ತಿರುವುದರಿಂದ ನಾನು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ನಾವು 450 ಮಿಲಿಯನ್ ಅಮೆರಿಕನ್ ಡಾಲರ್ ಪಾವತಿಸುತ್ತೇವೆ. ಚೀನಾ 38 ಮಿಲಿಯನ್ ಅಮೆರಿಕನ್ ಡಾಲರ್ ಪಾವತಿಸುತ್ತಿದೆ. ಹಾಗಾದರೂ ಏನು ಮಾಡಬೇಕೆಂದು ಚೀನಾ ಹೇಳುತ್ತಿದೆ. ಅದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದು ಇದು ಹೀಗೆ ಮುಂದುವರಿದರೆ ನಾವು ನೀಡುತ್ತಿರುವ ಹಣವನ್ನು ನಿಲ್ಲಿಸುವ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಕೈ ತೆಗೆದುಕೊಳ್ಳುತ್ತೇವೆ ಎಂದು ಪದೇಪದೆ ಹೇಳಿಕೆ ನೀಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ