NEWSನಮ್ಮರಾಜ್ಯರಾಜಕೀಯ

ಪರಿಷತ್‌ ಸಭಾಪತಿಗೆ ಅವಿಶ್ವಾಸದ ಅಗ್ನಿಪರೀಕ್ಷೆ: ಬಿಜೆಪಿ ಪ್ರಯತ್ನಕ್ಕೆ ವಿಪಕ್ಷ ಕಾಂಗ್ರೆಸ್‌ ನೀಡುವುದೇ ತಿರುಗೇಟು?

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಧಾನಪರಿಷತ್‌ನ ಒಂದು ದಿನದ ವಿಶೇಷ ಅಧಿವೇಶನ ಇಂದು (ಡಿ.15) ನಡೆಯಲಿದ್ದು, ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯದ ಪರ–ವಿರೋಧದ ನಡೆಯ ನಿಗೂಢತೆ ಕುತೂಹಲಕ್ಕೆ ಕಾರಣವಾಗಿದೆ.

ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರನ್ನು ಪದಚ್ಯುತಗೊಳಿಸಲೇಬೇಕೆಂಬ ಹಟಕ್ಕೆ ಬಿದ್ದಿರುವ ಆಡಳಿತಾರೂಢ ಬಿಜೆಪಿ ಪ್ರಯತ್ನಕ್ಕೆ ವಿಪಕ್ಷ ಕಾಂಗ್ರೆಸ್‌ ಯಾವ ನಡೆ ಅನುಸರಿಸಲಿದೆ ಹಾಗೂ ಪರಿಷತ್ತಿನಲ್ಲಿ ಕಾಂಗ್ರೆಸ್ ಜತೆಗೆ ಇರುವ ಜೆಡಿಎಸ್‌ ಸದಸ್ಯರ ನಡೆಯೇನು ಎಂಬುದು ಇನ್ನೂ ಬಹಿರಂಗವಾಗಿಲ್ಲ. ಸಭಾಪತಿ ಪರವಾಗಿ ನಿಂತಿರುವ ಕಾಂಗ್ರೆಸ್‌, ಸದನದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ತಮ್ಮ ಸದಸ್ಯರಿಗೆ ವಿಪ್ ಜಾರಿ ಮಾಡಿ ಅಖಾಡಕ್ಕೆ ಇಳಿದಿದೆ.

ಇಂದಿನ ಕಲಾಪದ ಕಾರ್ಯಸೂಚಿ ಪಟ್ಟಿಯಲ್ಲಿ ಅವಿಶ್ವಾಸ ನಿರ್ಣಯದ ಪ್ರಸ್ತಾಪವಿಲ್ಲ. ಗೋಹತ್ಯೆ ನಿಷೇಧದ ಮಸೂದೆ ಮತ್ತು ಇತರ ವಿಷಯಗಳು ಸೇರಿವೆ. ಜೆಡಿಎಸ್‌ ಬೆಂಬಲ ತನಗಿದೆ ಎಂದು ಹೇಳಿಕೊಂಡಿರುವ ಬಿಜೆಪಿ ಅವಿಶ್ವಾಸ ನಿರ್ಣಯದ ನೋಟಿಸ್‌ ಅನ್ನು ಪ್ರಸ್ತಾಪಿಸುವ ಸಿದ್ಧತೆ ಮಾಡಿಕೊಂಡಿದೆ.

ಗುರುವಾರ ಅಧಿವೇಶನ ಮುಂದೂಡಿದ ಬಳಿಕವಷ್ಟೇ ಸಂವಿಧಾನ ಬದ್ಧವಾಗಿಲ್ಲ ಎಂದು ಅವಿಶ್ವಾಸದ ನೋಟಿಸ್‌ನ ಕಡತಕ್ಕೆ ಟಿಪ್ಪಣಿ ಬರೆದು ಸಭಾಪತಿ ತಮ್ಮ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಿದರು. ಆವರೆಗೆ ನೋಟಿಸ್‌ ಪರಿಶೀಲಿಸುವ ಗೋಜಿಗೆ ಅವರು ಹೋಗಿರಲಿಲ್ಲ ಎಂದು ವಿಧಾನಪರಿಷತ್‌ ಸಚಿವಾಲಯದ ಮೂಲಗಳು ತಿಳಿಸಿವೆ.

ಸದನದ ಬಹುಸಂಖ್ಯಾತ ಸದಸ್ಯರ ವಿಶ್ವಾಸ ಕಳೆದುಕೊಂಡಿರುವ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಒತ್ತಾಯಿಸಿದ್ದಾರೆ.

 

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್