CrimeNEWSನಮ್ಮರಾಜ್ಯ

ಗ್ರಾಹಕರ ಡಾಟಾ ಕಳವು ಮಾಡಿ ಹಣ ದೋಚಲು ಯತ್ನಿಸಿದ ಇಬ್ಬರು ವಿದೇಶಿಗರ ಸೆರೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಎಟಿಎಂಗಳಿಗೆ ಸ್ಕೀಮರ್‌ ಮೆಷಿನ್ ಅಳವಡಿಸಿ ಗ್ರಾಹಕರ ಡಾಟಾಗಳನ್ನು ಕಳವು ಮಾಡಿ ಹಣ ದೋಚಲು ಯತ್ನಿಸುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಆರ್‌ಟಿ ನಗರ ಪೊಲೀಸರು ಬಂಧಿಸಿದ್ದಾರೆ.

ಯಲಹಂಕದ ಕೋಗಿಲು ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಉಗಾಂಡಾದ ಫೆಲಿಕ್ಸ್‌ ಕಿಸ್ಸಿಬೋ (25)   ಮತ್ತು ತಾಂಜೇನಿಯಾದ ಖೈರುನ್‌ ಅಬ್ದುಲ್ಲಾ (32) ಬಂಧಿತ ಆರೋಪಿಗಳು.

ಆರೋಪಿಗಳಿಂದ 12 ವಿವಿಧ ಬ್ಯಾಂಕ್‌ಗಳ ಎಟಿಎಂ ಕಾರ್ಡ್ ಗಳು, ಮೂರು ಮೊಬೈಲ್ ಫೋನ್ ಗಳು, ಲ್ಯಾಪ್ ಟಾಪ್, ಸ್ಕೀಮರ್‌ ಮೆಷಿನ್,  ಲೋಡರ್, ರಹಸ್ಯ ಕ್ಯಾಮೆರಾ ಮತ್ತಿತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಯೂನಿಯನ್ ಬ್ಯಾಂಕ್ ನ ಗಂಗಾನಗರ ಶಾಖೆಯ ವ್ಯವಸ್ಥಾಪಕ ಶ್ರೀನಿವಾಸ್ ರೆಡ್ಡಿ ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳು ಬ್ಯಾಂಕ್‌ ಎಟಿಎಂ ಪ್ರವೇಶಿಸಿ ಸ್ಕೀಮರ್‌ ಮೆಷಿನ್ ಮತ್ತು ಹಲವು ಎಟಿಎಂ ಕಾರ್ಡ್‌ಗಳನ್ನು ಹಿಡಿದುಕೊಂಡು ಹಣ ಡ್ರಾ ಮಾಡುತ್ತಿದ್ದದ್ದು ಸಿಸಿ  ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಈ  ಆಧಾರದ ಮೇಲೆ ಬಂಧಿಸಿರುವ ಪೊಲೀಸರು ಸೈಬರ್ ಕಾಯಿದೆ ಮತ್ತು ವಂಚನೆ ಪ್ರಕರಣದಡಿ ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲು ಮಾಡಿ ಮುಂದಿನ ಕ್ರಮ ಜರುಗಿಸಿದ್ದಾರೆ.

1 Comment

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್