NEWSನಮ್ಮರಾಜ್ಯ

ಯಾವುದೇ ಅನರ್ಹ ಬಿಪಿಎಲ್ ಕಾರ್ಡ್​ಗಳನ್ನ ರದ್ದು ಮಾಡೊಲ್ಲ: ಸಚಿವ ಮುನಿಯಪ್ಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಯಾವುದೇ ಅನರ್ಹ ಬಿಪಿಎಲ್ ಕಾರ್ಡ್​ಗಳನ್ನ ರದ್ದು ಮಾಡುವುದಿಲ್ಲ. ಆದರೆ ಅಂತಹ ಕಾರ್ಡ್​ಗಳನ್ನು ಎಪಿಎಲ್ ಆಗಿ ಕನ್ವರ್ಟ್ ಮಾಡ್ತೀವಿ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಅನರ್ಹ ರೇಷನ್ ಕಾರ್ಡ್‌ಗಳ ರದ್ದು ವಿಚಾರವಾಗಿ ಮಾತನಾಡಿರುವ ಮುನಿಯಪ್ಪ.. ಬಿಪಿಎಲ್‌ನಲ್ಲಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ. ಎಪಿಎಲ್‌ಗೆ ವರ್ಗಾವಣೆ ಮಾಡುತ್ತೇವೆ. ಯಾವ ಕಾರ್ಡನ್ನೂ ರದ್ದು ಮಾಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜತೆಗೆ ಎಲ್ಲಾ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡುತ್ತೇವೆ. ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ ಕೊಡುವ ಕೆಲಸ ಮಾಡ್ತೇವೆ ಎಂದು ತಿಳಿಸಿದ್ದಾರೆ.

ಇನ್ನು, ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್​​ಗಳ ಲಿಸ್ಟ್ ನ್ಯಾಯಬೆಲೆ ಅಂಗಡಿಗಳ ಮುಂದೆ ಇದ್ದು,  ಲಿಸ್ಟ್​ನಲ್ಲಿ ಇರುವವರಿಗೆ ಮೂರು ದಿನಗಳವರೆಗೆ ಪಡಿತರ ವಿತರಣೆಯನ್ನು ತಡೆಹಿಡಿಯಲು ಮೌಖಿಕ ಆದೇಶ ಹೊರಡಿಸಲಾಗಿದೆ.

ವಾರ್ಷಿಕ ಆದಾಯ 1,20,000 ರೂ.ಗಳು ಇರುವವರ ಬಿಪಿಎಲ್ ಕಾರ್ಡ್ ರದ್ದುಪಡಿಸಲಾಗುತ್ತಿರುವ ಹಿನ್ನೆಲೆ, ಕೆಲವೆಡೆ ಆಕ್ರೋಶ ವ್ಯಕ್ತವಾಗಿದೆ. ಇನ್ನೂ ಕೆಲವು ಕಡೆ ಗೊಂದಲದ ವಾತಾವರಣ ನಿರ್ಮಾಣವಾಗಿದೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ