ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಘಟಕಗಳಲ್ಲಿ ಸಂಸ್ಥೆಯ ಯಾವುದೇ ಅಧಿಕಾರಿ /ನೌಕರು ಪೂರ್ವ ಮಂಜೂರಾತಿ ಪಡೆಯದೆ ಚಂದಾ ವಸೂಲಿ ಮಾಡಬಾರದು ಎಂದು ನಿಗಮದ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.
ಇನ್ನು ಮುಂದೆ ಸಂಸ್ಥೆಯ ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಕಾರ್ಯ ವ್ಯವಸ್ಥಾಪಕರು, ಪ್ರಾಂಶುಪಾಲರು, ಎಲ್ಲ ಹಿರಿಯ- ಘಟಕ ವ್ಯವಸ್ಥಾಪಕರು ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಗುರುವಾರ (ಜು.24) ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಹೊರಡಿಸಿರುವ ಆದೇಶ ತಿಳಿಸಿದ್ದಾರೆ.
ಏಕೆಂದರೆ ಈ ವಿಷಯಕ್ಕೆ ಸಂಬಂಧಿಸಿದಂತೆ, ಘಟಕಗಳಲ್ಲಿ ವರ್ಗಾವಣೆ ಅಥವಾ ನಿವೃತ್ತಿಯಾದಾಗ ಬಲವಂತವಾಗಿ ನೌಕರರಿಂದ ಚಂದಾ ಹಣ ವಸೂಲಿ ಮಾಡಿ ಕೊಡುಗೆಗಳನ್ನು ನೀಡುತ್ತಿರುವ ಬಗ್ಗೆ ದೂರನ್ನು ಸ್ವೀಕರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಸಂಸ್ಥೆಯಲ್ಲಿ ಪೂರ್ವ ಮಂಜೂರಾತಿ ಪಡೆಯದೆ ಚಂದಾ ಕೋರಬಾರದು ಎಂಬುದರ ಸುತ್ತೋಲೆ ಹೊರಡಿಸಲಾಗಿದೆ. ಈ ಸುತ್ತೋಲೆಯಲ್ಲಿ “ಸಂಸ್ಥೆಯ ಯಾರೇ ನೌಕರನು ಸಂಸ್ಥೆಯ ಅಥವಾ ಸಂಸ್ಥೆ ನಿರ್ದಿಷ್ಟ ಪಡಿಸುವಂತಹ ಅಧಿಕಾರಿಗಳ ಪೂರ್ವ ಮಂಜೂರಾತಿಯನ್ನು ಪಡೆಯದೆ ಯಾವುದೇ ರೀತಿಯ ಉದ್ದೇಶ ಸಾಧನೆಗಾಗಿ ಚಂದಾ ಕೋರಬಾರದು ಅಥವಾ ಸ್ವೀಕರಿಸಬಾರದು ಅಥವಾ ಯಾವುದೇ ನಿಧಿ ಸಂಗ್ರಹಣೆ ಅಥವಾ ನಗದು ವಸ್ತು ರೂಪದಲ್ಲಿ ಇತರ ಸಂಗ್ರಹಣೆಗಳನ್ನು ಮಾಡುವ ಕಾರ್ಯದಲ್ಲಿ ಬೇರೆ ರೀತಿಯಲ್ಲಿ ಸಹಕರಿಸತಕ್ಕದ್ದಲ್ಲ” ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ಅದರಂತೆ ಸಂಸ್ಥೆಯ ಯಾವುದೇ ನೌಕರರು ಪೂರ್ವ ಮಂಜೂರಾತಿ ಇಲ್ಲದೆ ಚಂದಾ ವಸೂಲು ಮಾಡುವುದು ಅಥವಾ ಸ್ವೀಕರಿಸುವುದು ಅಥವಾ ಸಂಗ್ರಹಣೆ ಮಾಡುವುದು ಕಂಡುಬಂದಲ್ಲಿ ಅಂತಹ ನೌಕರರ ವಿರುದ್ಧ ಶಿಸ್ತು & ನಡತೆ ನಿಯಮಾವಳಿಗಳು 1971 ರನ್ವಯ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಿಳಿಸಲಾಗಿದೆ.
ಆದುದರಿಂದ ಈ ಸುತ್ತೋಲೆಯಲ್ಲಿ ತಿಳಿಸಿರುವ ಅಂಶಗಳನ್ನು ಯಾವುದೇ ದೂರಿಗೆ ಆಸ್ಪದ ನೀಡದೇ ಕಟ್ಟುನಿಟ್ಟಾಗಿ ಪಾಲನೆ ಮಾಡಲು ತಮ್ಮ ಅಧೀನ ಸಿಬ್ಬಂದಿಗಳಿಗೆ ಸೂಕ್ತ ಮಾಹಿತಿ/ ತಿಳಿವಳಿಕೆ ನೀಡಲು ತಿಳಿಸಿದ್ದು, ಈ ಸುತ್ತೋಲೆ ನೌಕರರ ಗಮನಕ್ಕೆ ಸೂಚನಾ ಫಲಕಕ್ಕೆ ಪ್ರಕಟಿಸಿ ಅನುಸರಣಾ ವರದಿಯನ್ನು ಸಲ್ಲಿಸಬೇಕು ಎಂದು ಆದೇಶ ಹೊರಡಿಸಿದ್ದಾರೆ.
ನೌಕರರಿಂದ ಬಹುತೇಕ ಎಲ್ಲ ಘಟಕಗಳಲ್ಲೂ ಮಹಾನೀಯರ ಜಯಂತಿ ಹೆಸರಿನಲ್ಲಿ ಹಾಗೂ ಗಣೇಶ ಹಬ್ಬ ಹೀಗೆ ವಿವಿಧ ಹೆಸರಿನಲ್ಲಿ ಚಂದಾ ವಸೂಲಿ ಮಾಡುವುದಕ್ಕೆ ಕೆಲ ನೌಕರರು ಡಿಪೋಗಳಲ್ಲಿ ಡ್ಯೂಟಿ ಬಿಟ್ಟು ನಿಲ್ಲುತ್ತಿದ್ದಾರೆ ಎಂಬ ಬಗ್ಗೆಯೂ ಆರೋಪವಿದೆ.
ಇದರ ಜತೆಗೆ ನೌಕರರು ಕೊಟ್ಟಷ್ಟು ಹಣವನ್ನು ತೆಗೆದುಕೊಳ್ಳದೆ ನೀವು 500 ರೂ. 1000 ರೂ.ಗಳನ್ನೇ ಕೊಡಬೇಕು ಇಲ್ಲದಿದ್ದರೆ ನಿಮಗೆ ಎಲ್ಲಿ ಪಾಠ ಕಲಿಸಬೇಕೋ ಅಲ್ಲೇ ಕಲಿಸುತ್ತೇವೆ ಎಂಬ ದಮ್ಕಿ ಕೂಡ ಹಾಕಿರುವುದು ಹಾಗೂ ನೌಕರರಿಗೆ ಇದರಿಂದ ಮಾನಸಿಕ ಕಿರುಕುಳ ಕೊಟ್ಟಿರುವ ಬಗ್ಗೆಯೂ ಆರೋಪ ಕೇಳಿ ಬರುತ್ತಿದೆ.
ಅಲ್ಲದೆ ಈ ಚಂದಾ ಹಣ ವಸೂಲಿ ಮಾಡುವುದಕ್ಕೆ ಅಲ್ಲಿನ ಅಧಿಕಾರಿಗಳು ಕೂಡ ಪರೋಕ್ಷವಾಗಿ ನಿಲ್ಲುತ್ತಿದ್ದಾರೆ. ಚಂದಾ ವಸೂಲಿ ಮಾಡುವವರಿಗೆ ಡ್ಯೂಟಿ ಕೊಡದೆ ಒಒಡಿ ಹೆಸರಿನಲ್ಲಿ ಡಿಪೋಗಳಲ್ಲೇ ಉಳಿಸಿಕೊಂಡು ವಸೂಲಿ ಮಾಡಿಸುತ್ತಿದ್ದಾರೆ ಅಧಿಕಾರಿಗಳು ಎಂಬ ಆರೋಪವನ್ನು ನೌಕರರು ಮಾಡಿದ್ದಾರೆ.
ಇದನ್ನು ಗಮನಿಸಿದ ಕೆಲ ನೌಕರರು ಸಂಸ್ಥೆಯ ಕೇಂದ್ರ ಕಚೇರಿಗೆ ದೂರಿ ನೀಡಿ ಒಳ್ಳೆ ಕೆಲಸ ಮಾಡಿದ್ದಾರೆ ಎಂದು ಚಂದಾ ಹಣ ವಸೂಲಿ ಹೆಸರಿನಲ್ಲಿ ದೌರ್ಜನ್ಯಕ್ಕೆ ಒಳಗಾದ ನೌಕರರು ವಿಜಯಪಥಕ್ಕೆ ಮಾಹಿತಿ ನೀಡಿ ಈ ಆದೇಶ ಹೊರಡಿಸಿರುವುದಕ್ಕೆ ಖುಷಿ ಪಟ್ಟಿದ್ದಾರೆ.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...