NEWSನಮ್ಮರಾಜ್ಯಶಿಕ್ಷಣ-

NRIಗಳಿಗೆ ಸರ್ಕಾರಿ ವೈದ್ಯ ಕಾಲೇಜುಗಳಲ್ಲಿ ಸೀಟುಗಳ ಕಾಯ್ದಿರಿಸುವ ಸರ್ಕಾರದ ನಡೆ ಖಂಡನೀಯ: ಅತ್ತಹಳ್ಳಿ ದೇವರಾಜ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕರ್ನಾಟಕ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್‌ಆರ್‌ಐ (NRI) ಗಳಿಗೆ ಸೀಟುಗಳನ್ನು ಕಾಯ್ದಿರಿಸುವುದಕ್ಕಾಗಿ ರಾಷ್ಟ್ರೀಯ ಮೆಡಿಕಲ್ ಕೌನ್ಸಿಲ್ (NMC) ಗೆ ರಾಜ್ಯ ಸರ್ಕಾರ ಪತ್ರ ಬರೆದಿರುವುದು ಖಂಡನೀಯ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಖಂಡಿಸಿದ್ದಾರೆ.

ಈ ಬಗ್ಗೆ ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ಬಡ ಮಕ್ಕಳಿಗೆ ರೈತರ ಮಕ್ಕಳಿಗೆ, ಹಿಂದುಳಿದ – ದಲಿತ, ಕೂಲಿ ಕಾರ್ಮಿಕರ ಮಕ್ಕಳಿಗೆ ಸರ್ಕಾರ ನಿಗದಿ ಮಾಡಿದ ಶುಲ್ಕದಲ್ಲಿ ಹಾಗೂ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಸೀಟುಗಳು ಸಿಗುತ್ತಿವೆ.

ಇಂತಹ ವ್ಯವಸ್ಥೆಯನ್ನು ಬದಲಾಯಿಸಿ ಹೊರದೇಶದಲ್ಲಿ ವಾಸ ಮಾಡುವ ಮಕ್ಕಳಿಗೆ (NRI) ಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15 ರಷ್ಟು ಸೀಟುಗಳನ್ನು ಕಾಯ್ದಿರಿಸುವಂತೆ ರಾಜ್ಯ ಸರ್ಕಾರ “ರಾಷ್ಟ್ರೀಯ ಮೆಡಿಕಲ್ ಕೌನ್ಸಿಲ್ (NMC) ಗೆ ಒತ್ತಾಯ ಮಾಡಿರುವುದು ಖಂಡನೀಯ ಎಂದು ಹೇಳಿದ್ದಾರೆ.

ಅಲ್ಲದೆ ರಾಜ್ಯದ ಜನರ ಹಿತಾಸಕ್ತಿಯನ್ನು ಬಲಿಕೊಡುತ್ತಿರುವುದು ಸರ್ಕಾರಕ್ಕೆ ಗೌರವ ತರುವುದಿಲ್ಲ. ಕೂಡಲೇ ಈ ನಿರ್ಧಾರವನ್ನು ಕೈಬಿಡಬೇಕು ಇಲ್ಲದಿದ್ದರೆ ರಾಜ್ಯಾದ್ಯಂತ ರೈತ ಪರ ಸಂಘಟನೆಗಳ ಸಹಕಾರ ದೊಂದಿಗೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಆತ್ತಹಳ್ಳಿ ದೇವರಾಜ್ ಎಚ್ಚರಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ