CrimeNEWSನಮ್ಮಜಿಲ್ಲೆ

NWKRT: ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ ನಿರ್ವಾಹಕನ ವಿರುದ್ಧ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಚಲಿಸುತ್ತಿದ್ದ ಬಸ್‌ನಲ್ಲಿ ಗೊತ್ತಿಲ್ಲದೆ ವಿದ್ಯಾರ್ಥಿನಿ ಬ್ಯಾಗ್‌ ಕಂಡಕ್ಟರ್ ಕೈಗೆ ತಾಕಿದ್ದರಿಂದ ಕೋಪಗೊಂಡ ನಿರ್ವಾಹಕ ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ ಘಟನೆ ನಗರದಲ್ಲಿ ನಡೆದಿದ್ದು, ಆಕ್ರೋಶಗೊಂಡ ಪಾಲಕರು ಮತ್ತು ಇತರರು ಪ್ರತಿಭಟನೆ ನಡೆಸಿದ್ದಾರೆ.

ಧಾರವಾಡದ ಕೆಲಗೇರಿ ಬಡಾವಣೆ ಬಳಿ ಈ ಘಟನೆ ನಡೆದಿದ್ದು, ಸಾಧನಕೆರೆಯಲ್ಲಿ ಶಾಲೆಯಿಂದ ಮರಳಿ ಮನೆಗೆ ವಾಪಸ್ ಬರುವಾಗ ನಿರ್ವಾಹಕ ಕಪಾಳಕ್ಕೆ ಹೊಡೆದಿದ್ದಾನೆ ಎಂದು ಹೇಳಲಾಗಿದೆ.

ಪ್ರಯಾಣಿಕರು ಹೇಳಿದಂತೆ, ಧಾರವಾಡದಿಂದ ಮುಗದ ಗ್ರಾಮಕ್ಕೆ ಬಸ್ ತೆರಳುತಿತ್ತು. ರಶ್ ಇದ್ದ ಬಸ್‌ನಲ್ಲಿ ಕಂಡಕ್ಟರ್ ಹಣವನ್ನು ಎಣಿಸಲು ಮುಂದಾಗಿದ್ದರು. ಈ ವೇಳೆ ಅಚಾನಕ್ ಆಗಿ ಕೆಲಗೇರಿ ನಿವಾಸಿ ಪ್ರಕೃತಿ ಎಂಬ ವಿದ್ಯಾರ್ಥಿನಿಯ ಬ್ಯಾಗ್ ಕಂಡಕ್ಟರ್‌ಗೆ ಟಚ್ ಆಗಿದೆ. ಆಗ ಕಂಡಕ್ಟರ್ ಕೈಯಲ್ಲಿದ್ದ ಹಣವು ಕೆಳಗೆ ಬಿದ್ದಿದ್ದು, ಇದರಿಂದ ಕೋಪಗೊಂಡ ಕಂಡಕ್ಟರ್ ಸಿಟ್ಟಿನಲ್ಲಿ ವಿದ್ಯಾರ್ಥಿನಿಯ ಕಪಾಳಕ್ಕೆ ಹೊಡೆದಿದ್ದಾರೆ.

ಕಂಡಕ್ಟರ್ ಹೊಡೆದಿದ್ದರಿಂದ ವಿದ್ಯಾರ್ಥಿನಿಯ ಕೆನ್ನೆ ಮೇಲೆ ಬರೆ ಬಿದ್ದಿದ್ದು, ನೋವಿನಿಂದ ಆಕೆ ಬಿಕ್ಕಿ ಬಿಕ್ಕಿ ಅಳುತ್ತಲೇ ಬಸ್ ಇಳಿದು ಮನೆಗೆ ಹೋಗಿದ್ದಾಳೆ. ಬಳಿಕ ವಿಚಾರ ತಿಳಿದ ಪಾಲಕರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ದಿಢೀರ್ ಪ್ರತಿಭಟನೆ ನಡೆಸಿದರು.

ಅಲ್ಲದೆ ಕಂಡಕ್ಟರ್ ಇಲ್ಲಿಗೆ ಬಂದು ಕ್ಷಮೆ ಕೇಳುವಂತೆ ಪಟ್ಟು ಹಿಡಿದರು. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಗ್ರಾಮಸ್ಥರ ಮನವೊಲಿಸಲು ಮುಂದಾದರು. ಕೊನೆಗೆ ಪ್ರತಿಭಟನಾ ಸ್ಥಳಕ್ಕೆ ಬಂದ ಕಂಡಕ್ಟರ್ ಪಾಲಕರ ಬಳಿ ಕ್ಷಮೆ ಕೇಳಿದರು. ಇದರಿಂದ ಪ್ರಕರಣವು ಸುಖಾಂತ್ಯ ಕಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ