NEWSನಮ್ಮಜಿಲ್ಲೆನಮ್ಮರಾಜ್ಯ

NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಲಘಟಗಿ ಘಟಕ ಹಾಗೂ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ವ್ಯವಸ್ಥಾಪಕ ನಿರ್ದೇಶಕರಾದ ಎಂ.ಪ್ರಿಯಾಂಗಾ ಬಸ್‌ಗಳನ್ನು ತಾಂತ್ರಿಕವಾಗಿ ಸುಸ್ಥಿತಿಯಲ್ಲಿಟ್ಟುಕೊಂಡು ಸಾರ್ವಜನಿಕರಿಗೆ, ವಿಶೇಷವಾಗಿ ವಿದ್ಯಾರ್ಥಿಗಳಿಗೆ ಉತ್ತಮ ಸಾರಿಗೆ ಸೇವೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

vijayapatha.in - ವಿಜಯಪಥ.ಇನ್‌ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ.   ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ. 

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯಭಾರ ವಹಿಸಿಕೊಂಡ ಮೇಲೆ ಸಂಸ್ಥೆಯ ನೌಕರರ ಹಾಗೂ ಸಾರ್ವಜನಿಕರ ಅನುಕೂಲತೆಯ ಬಗ್ಗೆ ಎಂಡಿ ಪ್ರಿಯಾಂಗಾ ಅವರು ಹೆಚ್ಚಿನ ಗಮನ ನೀಡುತ್ತಿದ್ದಾರೆ.

ಮಂಗಳವಾರ (ನ.5) ಘಟಕಕ್ಕೆ ಭೇಡಿ ನೀಡಿದ ಎಂಡಿ ನೌಕರರ ಸಮಸ್ಯೆ ಹಾಗೂ ವಾಹನಗಳಲ್ಲಿ ತಾಂತ್ರಿಕ ದೋಷ ಮತ್ತಿತರ ಬಿಡಿಭಾಗಗಳ ಬಗ್ಗೆ ಮಾಹಿತಿ ಕಲೆಹಾಕಿದರು. ಜತೆಗೆ ನೌಕರರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವೇತನ ಹೆಚ್ಚಳ ಸಂಬಂಧ ಸರ್ಕಾರ ತಳೆದಿರುವ ಧೋರಣೆ ಬಗ್ಗೆ ನೌಕರರು ತಮ್ಮ ಅಧಿಕಾರಿಯ ಮುಂದೆ ಅಸಮಾಧಾನ ತೋಡಿಕೊಂಡರು.

ಈ ವೇಳೆ ಮಾತನಾಡಿದ ಅವರು, ಘಟಕಗಳಲ್ಲಿ ಸಿಬ್ಬಂದಿಗಳಿಗೆ ಅದರಲ್ಲೂ ಒತ್ತಡದಲ್ಲಿ ಕೆಲಸ ಮಾಡುವ ಚಾಲನಾ ಸಿಬ್ಬಂದಿಗಳ ಬಗ್ಗೆ ಪ್ರತಿ ಅಧಿಕಾರಿಯೂ ಕಾಳಜಿ ತೆಗೆದುಕೊಳ್ಳಬೇಕು. ಈ ಮೂಲಕ ಅವರಲ್ಲಿ ಡ್ಯೂಟಿ ಮಾಡುವ ಚೇತನ್ಯವನ್ನು ಹೆಚ್ಚಿಸಬೇಕು ಎಂದು ಡಿಪೋ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನು ನಿಗಮಕ್ಕೆ 799 ಹೊಸ ಬಸ್‌ಗಳ ಸೇರ್ಪಯಾಗುತ್ತಿದ್ದು, 2023-24 ನೇ ಸಾಲಿನಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಹೊಸ ಬಸ್‌ಗಳ ಖರೀದಿ ಪ್ರಕ್ರಿಯೆಯಿಂದ 20 ಪಲ್ಲಕ್ಕಿ ನಾನ್ ಏಸಿ ಸ್ಲೀಪರ್, 04 ಮಲ್ಟಿ ಆಕ್ಸಲ್ ಏಸಿ ಸ್ಲೀಪರ್ (ಅಂಬಾರಿ ಉತ್ಸವ), 675 BS-6 ಮಾದರಿಯ ಗ್ರಾಮಾಂತರ ಬಸ್‌ಗಳು ಹಾಗೂ 100 ನಗರ ಸಾರಿಗೆ ಬಸ್‌ಗಳು ಹೀಗೆ ಒಟ್ಟು 799 ಹೊಸ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ.

ಈ ಪೈಕಿ ಈಗಾಗಲೇ 10 ಪಲ್ಲಕ್ಕಿ ನಾನ್ ಏಸಿ ಸ್ಲೀಪರ್, 236 BS-6 ಮಾದರಿಯ ಗ್ರಾಮಾಂತರ ನೂತನ ಬಸ್ಸುಗಳು ರಸ್ತೆಗಿಳಿದಿದ್ದು ಸಾರ್ವಜನಿಕ ಪ್ರಯಾಣಿಕರಿಗೆ ಸೇವೆ ಸಲ್ಲಿಸುತ್ತಿವೆ. ಉಳಿದಂತೆ 10 ಪಲ್ಲಕ್ಕಿ ನಾನ್ ಏಸಿ ಸ್ಲೀಪರ್, 04 ಮಲ್ಟಿ ಆಕ್ಸಲ್ ಏಸಿ ಸ್ಲೀಪರ್ (ಅಂಬಾರಿ ಉತ್ಸವ), 439 BS-6 ಮಾದರಿಯ ಗ್ರಾಮಾಂತರ ಬಸ್‌ಗಳು ಹಾಗೂ 100 ನಗರ ಸಾರಿಗೆ ಬಸ್‌ಗಳ ಕೂಡ ಶೀಘ್ರದಲ್ಲೇ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿವೆ ಎಂದರು.

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!