NEWSನಮ್ಮಜಿಲ್ಲೆನಮ್ಮರಾಜ್ಯವಿಡಿಯೋ

NWKRTC: ನಿರ್ವಾಹಕನಿಗೆ ಕಾಲಿನಿಂದ ಒದ್ದು ಬಸ್‌ನಿಂದ ಹೊರ ದಬ್ಬಿದ ಮಹಿಳಾ ಮಣಿಗಳು

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಸರ್ಕಾರ ಮಹಿಳೆಯರಿಗೆ ರಾಜ್ಯದ ಎಲ್ಲ ನಾಲ್ಕೂ ನಿಗಮಗಳ ಬಸ್‌ಗಳಲ್ಲಿ ಎಲ್ಲಿಂದ ಎಲ್ಲಿಯವರೆಗೂ ಬೇಕಾದರೂ ಉಚಿತವಾಗಿ ಪ್ರಯಾಣಿಸುವುದಕ್ಕೆ ಅವಕಾಶ ಕಲ್ಪಿಸಿದೆ. ಆದರೆ, ಇದರ ಸದುಪಯೋಗ ಪಡೆದುಕೊಳ್ಳುವುದಕ್ಕಿಂತ ಹೆಚ್ಚಾಗಿ ಸಾರಿಗೆ ನೌಕರರ ಮೇಲೆ ದೌರ್ಜನ್ಯ ಎಸಗುವವರೆ ಹೆಚ್ಚಾಗುತ್ತಿದ್ದಾರೆ.

ಹೌದು! ಸಾರಿಗೆ ನಿಗಮಗಳ ಚಾಲನಾ ಸಿಬ್ಬಂದಿಯ ಮೇಲೆ ಹಲ್ಲೆ ಮಾಡುವುದು, ಅವಾಚ್ಯವಾಗಿ ನಿಂದಿಸುವುದು, ಬಸ್‌ ಡೋರ್‌ಗಳನ್ನು ಮುರಿಯುವುದು ಇತ್ತೀಚೆಗೆ ಹೆಚ್ಚಾಗಿಯೇ ನಡೆಯುತ್ತಿದೆ. ಆದರೆ, ಪ್ರಯಾಣಿಕ ಮಹಿಳೆಯರಿಗೆ ಅರಿವು ಮೂಡಿಸಬೇಕಿರುವ ನಿಗಮಗಳ ಅಧಿಕಾರಿಗಳು ಆ ಕೆಲಸ ಮಾಡದೆ ಸಿಬ್ಬಂದಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡುತ್ತಿದ್ದಾರೆ.

ತಪ್ಪು ಮಾಡಿದವರಿಗೆ ಕಾನೂನು ರೀತಿಯಲ್ಲಿ ಶಿಕ್ಷೆ ನೀಡಲಾಗುತ್ತದೆ ಎಂದು ಸರ್ಕಾರ ಮತ್ತು ನಿಗಮಗಳ ಅಧಿಕಾರಿಗಳು ಪ್ರಯಾಣಿಕರಿಗೂ ಎಚ್ಚರಿಕೆ ನೀಡಬೇಕು. ಆದರೆ ಇಲ್ಲಿ ಪ್ರಯಾಣಿಕರೆ ತಪ್ಪು ಮಾಡಿದರೂ ಶಿಕ್ಷೆ ಮಾತ್ರ ಸಾರಿಗೆ ನೌಕರರಿಗೆ ಕೊಡಲಾಗುತ್ತಿದೆ. ಇದು ಎಷ್ಟರ ಮಟ್ಟಿಗೆ ಸರಿ. ಇದರಿಂದ ನಾವು ಸರಿಯಾಗಿ ಡ್ಯೂಟಿ ಮಾಡುವುದಕ್ಕೂ ಆಗುತ್ತಿಲ್ಲ ಎಂದು ನೌಕರರು ಅಲವತ್ತುಕೊಳ್ಳುತ್ತಿದ್ದಾರೆ.

ಇನ್ನು ನಿನ್ನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿ ನಿರ್ವಾಹಕರ ಮೇಲೆ ಮಹಿಳಾ ಪ್ರಯಾಣಿಕರ ಗುಂಪೊಂದು ಹಲ್ಲೆ ಮಾಡುತ್ತಿದೆ. ಅವಾಚ್ಯ ಶಬ್ದ ಪ್ರಯೋಗವನ್ನು ಮಾಡಿದೆ. ಅಲ್ಲದೆ ನಿರ್ವಾಹಕರಿಗೆ ಕಾಲಿನಿಂದ ಒದ್ದು ಬಸ್‌ ಫುಟ್‌ಬೋರ್ಡ್‌ನಿಂದ ಬೀಳಿಸಿದ್ದಾರೆ.

ಇಷ್ಟು ಮಾತ್ರಕ್ಕೆ ಸುಮ್ಮನಿರದ ಆ ಮಹಿಳೆಯರು ಮತ್ತೆ ನಿರ್ವಾಹಕನನ್ನು ಮೇಲೆಕ್ಕೆ ಎಳೆದುಕೊಂಡು ಥಳಿಸಿದ್ದಾರೆ. ಜತೆಗೆ ಕುತ್ತಿಗೆ ಪಟ್ಟಿಯನ್ನು ಹಿಡಿದು ಹೊಡೆಯುತ್ತಿದ್ದಾರೆ. ಹೀಗೆ ಪ್ರಯಾಣಿಕರು ನಡೆದುಕೊಂಡರೆ ಸಾರಿಗೆ ಸಿಬ್ಬಂದಿ ಡ್ಯೂಟಿ ಮಾಡುವುದಾದರೂ ಹೇಗೆ ಎಂದು ಭಯದಲ್ಲೇ ಅಮಾಯಕ ನೌಕರರು ಕೇಳುತ್ತಿದ್ದಾರೆ.

ಇನ್ನು ಈ ರೀತಿಯ ದೌರ್ಜನ್ಯದಿಂದ ನಿರ್ವಾಹಕರು ಮತ್ತು ಚಾಲಕರು ಕರ್ತವ್ಯ ನಿರ್ವಹಿಸುವುದು ತುಂಬಾ ಕಷ್ಟವಾಗುತ್ತಿದೆ. ಸೌಜನ್ಯಯುತವಾಗಿ ನಡೆದುಕೊಳ್ಳುವ ಸಲುವಾಗಿ ಆ ನಿರ್ವಾಹಕ ತಾಳ್ಮೆಯಿಂದಲೇ ವರ್ತಿಸಿದ್ದಾರೆ. ಆದರೂ ಕೂಡ ಮಹಿಳೆಯರು ಈ ರೀತಿ ವರ್ತಿಸಿದರೆ ಹೇಗೆ?

ಇನ್ನು ಸಾರಿಗೆ ನಿಗಮಗಳು ಮತ್ತು ಸಾರಿಗೆ ಸಚಿವರು ಮಹಿಳೆಯರಿಗೆ ಯಾವುದೇ ಗೈಡ್ಲೈನ್ಸ್ ನೀಡಿಲ್ಲ. ಆದರೆ ಸಾರಿಗೆ ಸಿಬ್ಬಂದಿಗಳಿಗೆ ಗೈಡ್ಲೈನ್ಸ್ ನೀಡಿದ್ದಾರೆ. ಹೀಗಾದರೆ ಹೇಗೆ? ಇದು ಹೀಗೆ ಮುಂದುವರಿದರೆ ನಿರ್ವಾಹಕರು ಮತ್ತು ಚಾಲಕರು ಪ್ರತಿಭಟನೆ ಮಾಡಬೇಕಾಗುತ್ತದೆ.

ಇಲ್ಲ ಸಾಮೂಹಿಕ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೇಳುತ್ತಿರುವ ನೌಕರರು ಪ್ರಯಾಣದ ವೇಳೆ ಮಹಿಳೆಯರು ಡ್ಯೂಟಿ ನಿರತ ಸಾರಿಗೆ ಸಿಬ್ಬಂದಿಯೊಂದಿಗೆ ಯಾವ ರೀತಿ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ಕರಪತ್ರ ನೀಡುವ ಮೂಲಕ ಅರಿವು ಮೂಡಿಸಿ ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು