NEWSನಮ್ಮಜಿಲ್ಲೆನಮ್ಮರಾಜ್ಯ

NWKRTC ಹಾವೇರಿ: ಸಂಚಾರ ನಿಯಮ ಉಲ್ಲಂಘನೆ ಮಾಡಿದ ಚಾಲಕರಿಂದ ₹26 ಸಾವಿರ ದಂಡ ವಸೂಲಿಗೆ ಡಿಸಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹಾವೇರಿ ವಿಭಾಗದ ಎಲ್ಲ ಘಟಕದ ಚಾಲನಾ ಸಿಬ್ಬಂದಿಗಳು ನಗರ ಪ್ರದೇಶ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿ ವಾಹನ ಚಾಲನೆ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು ಮುಂದೆ ಇಂಥ ದೂರುಗಳು ಬರದಂತೆ ನಿಗಾವಹಿಸಬೇಕು ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ತಾಕೀತು ಮಾಡಿದ್ದಾರೆ.

ಈ ಸಂಬಂಧ ವಿಭಾಗದ ಹಾವೇರಿ, ಹಿರೇಕೆರೂರು, ರಾಣೆಬೆನ್ನುರು ಹಾನಗಲ್, ಬ್ಯಾಡಗಿ ಮತ್ತು ಸವಣೂರು ಘಟಕದಲ್ಲಿ ಯಾರು ಸಂಚಾರ ನಿಯಮ ಉಲ್ಲಂಘನೆ ಮಾಡಿ ವಾಹನ ಚಾಲನೆ ಮಾಡುತ್ತಿದ್ದಾರೋ ಅಂಥವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಈ ಎಲ್ಲ ಘಟಕ ವ್ಯವಸ್ಥಾಪಕರಿಗೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ವಿಭಾಗದ ಚಾಲನಾ ಸಿಬ್ಬಂದಿಗಳು ನಗರ ಪ್ರದೇಶ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿ ವಾಹನ ಚಾಲನೆ ಮಾಡುತ್ತಿರುವುದು ಕಂಡುಬರುತ್ತಿವೆ. ಹೀಗೆ ಸಂಚಾರ ನಿಯಮ ಉಲ್ಲಂಘನೆ ಮಾಡಿ ಚಾಲನೆ ಮಾಡುವ ವಾಹನಗಳಿಗೆ ರಸ್ತೆ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ, ನಗರ ಪ್ರದೇಶ ಹಾಗೂ ಟೋಲ್‌ಗಳ ಹತ್ತಿರ ಕ್ಯಾಮರಾ ಅಳವಡಿಸಲಾಗಿದೆ.

ಆದರೆ, ವಿಭಾಗದ ಚಾಲನಾ ಸಿಬ್ಬಂದಿಗಳು ಪದೇಪದೆ ಸಂಚಾರ ನಿಯಮ ಉಲ್ಲಂಘನೆ ಮಾಡಿ ಚಾಲನೆ ಮಾಡುತ್ತಿರುವ ಕುರಿತು ಪೊಲೀಸ್‌ ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಪ್ರಕರಣ ದಾಖಲಾಗುತ್ತಿದ್ದು, ಇದರಿಂದ ವಾಹನಗಳ ಅರ್ಹತಾ ನವೀಕರಣ ಮತ್ತು ವಾಹನಗಳ ವರ್ಗಾವಣೆ ಸಮಯದಲ್ಲಿ ತೊಂದರೆವುಂಟಾಗುತ್ತಿದೆ.

ಉದಾ: ಹಿರೇಕೆರೂರು ಘಟಕದ ವಾಹನ ಸಂಖ್ಯೆ ಕೆಎ 27 ಎಪ್-0787 ವಾಹನಕ್ಕೆ ಜೂನ್-2023 ತಿಂಗಳಲ್ಲಿ 33 ಸಾರಿ ದಂಡದ ಮೊತ್ತ 16500 ರೂ.ಗಳು ಹಾಗೂ ಕೆಎ 27 ಎಫ್-813 ವಾಹನಕ್ಕೆ 19 ಸಾರಿ ದಂಡದ ಮೊತ್ತ 9500 ರೂ.ಗಳು ಹಾಕಿ ಪ್ರಕರಣ ದಾಖಲಾಗಿದೆ.

ಅಲ್ಲದೆ ಹಾನಗಲ್ಲ ಘಟಕದ ವಾಹನ ಸಂಖ್ಯೆ ಕೆಎ 27 ಎಫ್-760 ವಾಹನಕ್ಕೆ 18-07-2024 ಮತ್ತು 25-04-2027 ರಂದು ಎರಡು ಸಾರಿ ಮೈಸೂರ ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಕುರಿತು ಆನಲೈನ್ ಪ್ರಕರಣ ದಾಖಲಾಗಿದೆ. ಇನ್ನುಳಿದಂತೆ ಬಂಕಾಪೂರ ಟೋಲ್ ಮುಖಾಂತರ ಕಾರ್ಯಾಚರಣೆಯಾಗುವ ವಿಭಾಗದ ಎಲ್ಲ ವಾಹನಗಳಿಗೂ ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಕುರಿತು ಆನ್ ಲೈನ್ ಪ್ರಕರಣ ದಾಖಲಾಗಿದೆ.

ಹೀಗಾಗಿ ಈ ಮೇಲೆ ನಮೂದಿಸಿದ ವಾಹನಗಳ ಚಾಲಕರಿಗೆ ಈ ವಿಷಯದ ಕುರಿತು ತಿಳಿಸಿ ಸಂಬಂಧಪಟ್ಟ ಚಾಲನಾ ಸಿಬ್ಬಂದಿಗಳಿಂದ ದಂಡದ ಹಣ ಕಟ್ಟಿಸುವ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸಿರುವ ಇನ್ನುಳಿದ ವಾಹಗಳ ಮೇಲೆ ದಾಖಲಾಗಿರುವ ಪ್ರಕರಣದ ಮಾಹಿತಿ ಪಡೆದುಕೊಂಡು ಆ ವಾಹನಗಳ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಕ್ರಮ ಕೈಗೊಳ್ಳುವಂತೆ ಡಿಸಿ ಸೂಚನೆ ನೀಡಿದ್ದಾರೆ.

ಮುಂದುವರಿದು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಸಂಚರಿಸಿರುವ ವಾಹನಗಳ ಚಾಲನಾ ಸಿಬ್ಬಂದಿಗಳಿಗೆ ಸಂಚಾರ ನಿಯಮಗಳ ಬಗ್ಗೆ ಸೂಕ್ತ ತಿಳಿವಳಿಕೆ ನೀಡುವುದು ಹಾಗೂ ಈ ವಿಷಯದ ಕುರಿತು ಪೊಲೀಸ್‌ ಪ್ರಕರಣ ದಾಖಲಾದಲ್ಲಿ ಸಂಬಂಧಪಟ್ಟ ಚಾಲನಾ ಸಿಬ್ಬಂದಿಗಳಿಂದ ಪ್ರಕರಣ ಇತ್ಯರ್ಥ ಪಡಿಸಲು ಸೂಕ್ತ ಕ್ರಮ ವಹಿಸುವಂತೆ ಡಿಸಿ ಸೂಚಿಸಿ ಆದೇಶ ಹೊರಡಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು