CrimeNEWSನಮ್ಮಜಿಲ್ಲೆನಮ್ಮರಾಜ್ಯ

NWKRTC: ದಾರಿಗಾಗಿ ಹಾರ್ನ್ ಮಾಡಿದ ಬಸ್‌ ಚಾಲಕನ ಮೇಲೆ ಹಲ್ಲೆ ಮಾಡಿ ಪರಾರಿ

ವಿಜಯಪಥ ಸಮಗ್ರ ಸುದ್ದಿ

ಗದಗ: ದಾರಿ ಬಿಡಿ ಎಂದು ಹಾರ್ನ್ ಮಾಡಿದ್ದಕ್ಕೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್‌ ಚಾಲಕನ ಮೇಲೆ ಕಾರಿನಲ್ಲಿದ್ದ ಯುವಕರು ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಗದಗ ನಗರದ ಹೊರವಲಯ ಅಸುಂಡಿಯಲ್ಲಿ ನಡೆದಿದೆ.

ಗದಗದಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC)ಯ ಬಸ್‌ ಅಸುಂಡಿ ಬಳಿ ಬರುತ್ತಿದ್ದಾಗ ಮುಂದೆ ಹೋಗುತ್ತಿದ್ದ ಕಾರಿಗೆ ಸೈಡ್ ಬಿಡುವಂತೆ ಚಾಲಕ ಸಂತೋಷ್‌ ಹಾರ್ನ್ ಮಾಡಿದ್ದಾರೆ. ಅದಕ್ಕೆ ಕಾರಣ ಕಾರಿನ ಸೈಡ್ ವ್ಯೂ ಮಿರರ್‌ಗಳನ್ನು ಒಳಭಾಗಕ್ಕೆ ಎಳೆದುಕೊಂಡು ಮುಚ್ಚಿದ್ದರಿಂದ ಕಾರಿನಲ್ಲಿದ್ದವರಿಗೆ ಹಿಂದೆ ಬರುತ್ತಿದ್ದ ವಾಹನ ಕಾಣುವುದು ಸಾಧ್ಯವಿರಲಿಲ್ಲ.

ಹಾಗಾಗೇ ಬಸ್ ಚಾಲಕ ಹಾರ್ನ್ ಮಾಡಿದ್ದಾರೆ. ಹಾರ್ನ್ ಶಬ್ದದಿಂದ ಕುಪಿತಗೊಂಡ ಕಾರಲ್ಲಿದ್ದವರು ಕಾರನ್ನು ಬಸ್‌ಗೆ ಅಡ್ಡಮಾಡಿ ನಿಲ್ಲಿಸಿ ಕಾರಿನಿಂದ ಇಳಿದು ಬಂದು ಬಸ್ ಡ್ರೈವರ್‌ಗೆ ಬಾಯಿಗೆ ಬಂದಂತೆ ಬೈದು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ಇನ್ನು ಚಾಲಕನಿಗೆ ಕಿಡಿಗೇಡಿಗಳು ಏನಾದರೂ ತೊಂದರೆ ಮಾಡಿಬಿಟ್ಟಾರು ಎಂದು ಬಸ್‌ನಲ್ಲಿದ್ದ ಮಹಿಳಾ ಪ್ರಯಾಣಿಕರು ಚಾಲಕನ ರಕ್ಷಣೆಗೆ ಬಂದಿದ್ದಾರೆ. ಅಷ್ಟರಲ್ಲಾಗಲೇ ಕಾರಿನಿಂದ ಇಳಿದು ಬಂದ ಕಿಡಿಗೇಡಿಕಗಳು ಚಾಲಕ ಸಂತೋಷ್ ಅವರಿಗೆ ಹೊಡೆದಿದ್ದರಿಂದ ಆತ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಕರ್ತವ್ಯನಿರತ ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಅವರ ಮುಖ ಪರಿಚಯ ವಿಡಿಯೋದಲ್ಲಿ ಸಿಗುತ್ತದೆ ಮತ್ತು ಕಾರಿನ ನಂಬರ್ ರಸ್ತೆಬದಿಯ ಯಾವುದಾದರೂ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಬಸ್‌ನಲ್ಲಿದ್ದ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಒಟ್ಟಾರೆ ಸಾರಿಗೆ ಬಸ್‌ ಚಾಲನಾ ಸಿಬ್ಬಂದಿ ಒಂದು ರೀತಿ ಗರಗಸದ ಬಾಯಲ್ಲಿ ಸಿಕ್ಕಿಹಾಕಿಕೊಂಡವರಂತೆ ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿ ಈ ಬಗ್ಗೆ ಸಾರಿಗೆ ಸಚಿವರು ಮತ್ತು ನಿಗಮದ ಎಂಡಿಗಳು ಗಮನಹರಿಸಿ ನೌಕರರಿಗೆ ಆಗುತ್ತಿರುವ ಈ ರೀತಿಯ ಸಮಸ್ಯಗೆ ಪರಿಹಾರವನ್ನು ಕಾನೂನಾತ್ಮಕವಾಗಿಯೇ ಒದಗಿಸಬೇಕು.

ಅಂದರೆ ತಪ್ಪು ಮಾಡಿದವರನ್ನು ಶಿಕ್ಷೆಗೆ ಗುರಿಪಡಿಸುವುದಕ್ಕೆ ನಿಗಮದ ಉನ್ನತ ಅಧಿಕಾರಿಗಳು ಮುಂದಾದರೆ ಚಾಲನಾ ಸಿಬ್ಬಂದಿಗೆ ಕಿಡಿಗೇಡಿಗಳಿಂದ ಆಗುತ್ತಿರುವ ಇಂಧ ಹಲ್ಲೆಯನ್ನು ತಡೆಗಟ್ಟಬಹುದಾಗಿದೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...