NEWSನಮ್ಮಜಿಲ್ಲೆನಮ್ಮರಾಜ್ಯ

ಸಮವಸ್ತ್ರ ಧರಿಸದ ಮೇಲ್ವಿಚಾರಕ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ – ಡಿಸಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಸಮವಸ್ತ್ರವನ್ನು ಮೇಲ್ವಿಚಾರಕರು/ಸಿಬ್ಬಂದಿಗಳು ಕಡ್ಡಾಯವಾಗಿ ಧರಿಸಬೇಕು ಒಂದು ವೇಳೆ ಧರಿಸದೆ ಇದ್ದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಧಾರವಾಡ ಗ್ರಾಮಾಂತರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಧಾರವಾಡ (ಗ್ರಾ) ವಿಭಾಗ ಎಲ್ಲ ಘಟಕ ವ್ಯವಸ್ಥಾಪಕರು, ಧಾರವಾಡ, ಸವದತ್ತಿ, ರಾಮದುರ್ಗ, ಹಳಿಯಾಳ ಮತ್ತು ದಾಂಡೇಲಿ ಘಟಕ ವ್ಯವಸ್ಥಾಪಕರು ಈ ಬಗ್ಗೆ ಸಮರ್ಪಕ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.

ವ್ಯವಸ್ಥಾಪಕ ನಿರ್ದೇಶಕರೂ ಆದ ಸೂಕ್ತಾಧಿಕಾರಿಗಳು ವಿಭಾಗದಲ್ಲಿ ಸಮವಸ್ತ್ರ ಹೊಂದಿರುವ ಮೇಲ್ವಿಚಾರಕರು/ ಸಿಬ್ಬಂದಿಗಳು ನಿಯಮಿತವಾಗಿ ಸಮವಸ್ತ್ರಗಳನ್ನು ಕಡ್ಡಾಯವಾಗಿ ಧರಿಸುವ ಕುರಿತು ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಿದ್ದಾರೆ.

ಆದ್ದರಿಂದ ಘಟಕಗಳಲ್ಲಿ ಸಮವಸ್ತ್ರ ಹೊಂದಿ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಮೇಲ್ವಿಚಾರಕ ಸಿಬ್ಬಂದಿಗಳು, ಚಾಲನಾ ಸಿಬ್ಬಂದಿಗಳು ಹಾಗೂ ಸಮವಸ್ತ್ರವಿರುವ ಇತರೆ ಸಿಬ್ಬಂದಿಗಳು ಕಡ್ಡಾಯವಾಗಿ ನಿಗದಿಪಡಿಸಿರುವ ಸಮವಸ್ತ್ರಗಳನ್ನು ಧರಿಸಿ ಕರ್ತವ್ಯಕ್ಕೆ ಹಾಜರಾಗಬೇಕು.

ಅಲ್ಲದೆ ಕರ್ತವ್ಯದ ಅವಧಿ ಮುಗಿಯುವವರೆಗೂ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಿರತಕ್ಕದ್ದು, ಈ ಆದೇಶವನ್ನು ಉಲ್ಲಂಘನೆ ಮಾಡುವ ಸಿಬ್ಬಂದಿಗಳಿಗೆ ಘಟಕ ವ್ಯವಸ್ಥಾಪಕರು ಸೂಕ್ತ ಕಟ್ಟುನಿಟ್ಟಿನ ತಿಳಿವಳಿಕೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಇನ್ನು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಖು. ಈ ಆದೇಶದ ನಿರ್ದೇಶನಗಳನ್ನು ಉಲ್ಲಂಘನೆ ಮಾಡುವ ಸಂಬಂಧಿಸಿದ ಮೇಲ್ವಿಚಾರಕ / ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ವರದಿಯನ್ನು ಮುಂದಿನ ಕ್ರಮಕ್ಕಾಗಿ ಕಚೇರಿಗೆ ಕಳುಹಿಸಬೇಕು ಎಂದು ಧಾರವಾಡ ಗ್ರಾಮಾಂತರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ