NEWSನಮ್ಮಜಿಲ್ಲೆನಮ್ಮರಾಜ್ಯ

NWKRTC: 2024-25ನೇ ಸಾಲಿನ ಐಚ್ಛಿಕ ಭ.ನಿ. ಚೀಟಿಗಳ ಆನ್‌ಲೈನ್ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳಿ: ನೌಕರರಿಗೆ CAO ಆದೇಶ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ವಿಭಾಗಗಳ ಎಲ್ಲ ಅಧಿಕಾರಿಗಳ- ನೌಕರರ 2024-25ನೇ ಸಾಲಿನ ಭವಿಷ್ಯ ನಿಧಿ/ ಐಚ್ಛಿಕ ಭವಿಷ್ಯನಿಧಿ ಚೀಟಿಗಳನ್ನು ಆನ್‌ಲೈನ್ ಮೂಲಕ ವೀಕ್ಷಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ಸಂಸ್ಥೆಯ ಮುಖ್ಯ ಲೆಕ್ಕಾಧಿಕಾರಿ ತಿಳಿಸಿದ್ದಾರೆ.

ಇನ್ನು ಸಂಸ್ಥೆಯ ಎಲ್ಲ ವಿಭಾಗಗಳ ಅಧಿಕಾರಿ, ನೌಕರರು ತಮ್ಮ ಭವಿಷ್ಯ ನಿಧಿ ಚೀಟಿಗಳನ್ನು ಆನ್‌ಲೈನ್ ಮೂಲಕ ನೋಡುವ ಹಾಗೂ ಪ್ರಿಂಟ್ ಪಡೆಯುವ ವ್ಯವಸ್ಥೆಯನ್ನು ಮಾಡಲು ಮುಖ್ಯ ಗಣಕ ವ್ಯವಸ್ಥಾಪಕರಿಗೆ ಲಿಖಿತವಾಗಿ ತಿಳಿಸಲಾಗಿತ್ತು. ಅದರಂತೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಹೀಗಾಗಿ ಸಂಸ್ಥೆಯ ಎಲ್ಲ ವಿಭಾಗಗಳ ಅಧಿಕಾರಿಗಳು/ ನೌಕರರು 2024-25ನೇ ಸಾಲಿನ ಭವಿಷ್ಯ ನಿಧಿ / ಐಚ್ಛಿಕ ಭವಿಷ್ಯ ನಿಧಿ ಚೀಟಿಗಳನ್ನು ಹೋಸ್ಟ್ ಮಾಡಿ ಆನ್‌ಲೈನ್ ಮೂಲಕ ವೀಕ್ಷಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ.

ಆದ್ದರಿಂದ ಎಲ್ಲರೂ pfnwkrtc.in ವೆಬ್ ಸೈಟ್ ಅನ್ನು ತೆರೆದು ಅವರ ಪಿಎಫ್ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು dd/mm/yyyy ಮಾದರಿಯಲ್ಲಿ ನಮೂದಿಸಿ 2024-25ನೇ ಸಾಲಿನ ಭವಿಷ್ಯ ನಿಧಿ / ಐಚ್ಛಿಕ ಭ.ನಿ ಚೀಟಿಗಳನ್ನು ವೀಕ್ಷಿಸಬಹುದಾಗಿದೆ ಹಾಗೂ Print ಅನ್ನು ಸಹ ಪಡೆಯಬಹುದಾಗಿದೆ.

ಈ ವಿಷಯವನ್ನು ವಿಭಾಗದ ಎಲ್ಲ ಘಟಕಗಳಲ್ಲಿ. ವಿಭಾಗೀಯ ಕಾರ್ಯಾಗಾರಗಳಲ್ಲಿ ಹಾಗೂ ಪ್ರಾದೇಶಿಕ ಕಾರ್ಯಾಗಾರದಲ್ಲಿ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲ ಅಧಿಕಾರಿಗಳ ಹಾಗೂ ನೌಕರರ ಗಮನಕ್ಕೆ ತರಲು ಸೂಕ್ತ ಕ್ರಮವನ್ನು ಜರುಗಿಸಲು ತಿಳಿಸಿದ್ದಾರೆ.

ಮುಂದುವರಿದು 2024-25ನೇ ಸಾಲಿನಲ್ಲಿ ವಿಭಾಗಗಳಿಂದ ವರ್ಗಾವಣೆಗೊಂಡ ಹಾಗೂ F.W.C ಇತ್ಯರ್ಥಗೊಂಡ ಅಧಿಕಾರಿ / ನೌಕರರ ಭವಿಷ್ಯ ನಿಧಿ ಚೀಟಿಯನ್ನು ವಿಭಾಗಮಟ್ಟದಲ್ಲಿ ಬ್ಲಾಕ್ ಮಾಡಲು ಅವಕಾಶ ನೀಡಲಾಗಿದ್ದು ಅವುಗಳನ್ನು ಕಡ್ಡಾಯವಾಗಿ ಬ್ಲಾಕ್ ಮಾಡಬೇಕು ಎಂದು ತಿಳಿಸಿದ್ದಾರೆ.

ಈ ಸಂಬಂಧ ಕಾರ್ಯದರ್ಶಿ, ಭವಿಷ್ಯ ನಿಧಿ ನ್ಯಾಸ ಮಂಡಳಿ. ಕ.ರಾ.ರ.ಸಾರಿಗೆ ನಿಗಮ ಅವರಿಗೂ ಮಾಹಿತಿಗಾಗಿ ಕಳುಹಿಸಲಾಗಿದೆ. ಅಲ್ಲದೆ ಧರ್ಮದರ್ಶಿ, ಭವಿಷ್ಯ ನಿಧಿ ನ್ಯಾಸ ಮಂಡಳಿ, nwkrtc ಸಂಸ್ಥೆ ಅವರಿಗೂ ಮಾಹಿತಿಗಾಗಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...