NEWSನಮ್ಮಜಿಲ್ಲೆನಮ್ಮರಾಜ್ಯ

NWKRTC: 45 ವರ್ಷದ ಮಹಿಳೆಗೆ ಅನುಕಂಪದ ಆಧಾರದಡಿ ಹುದ್ದೆಕೊಡಿ- ಹೈಕೋರ್ಟ್‌ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಯೋಮಿತಿ ಮೀರಿದ ಮಹಿಳೆಗೆ ವಿಶೇಷ ಪ್ರಕರಣವೆಂದು ಅನುಕಂಪದ ಹುದ್ದೆ ನೀಡಬೇಕು ಎಂದು ಹೈಕೋರ್ಟ್ ಮಹತ್ವ ಆದೇಶ ಹೊರಡಿಸಿದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರನ ಪತ್ನಿ 45 ವರ್ಷದ ಲಕ್ಕವ್ವಗೇ ಅನುಕಂಪದ ಆಧಾರದ ಮೇರೆಗೆ ಹುದ್ದೆ ನೀಡಬೇಕು ಎಂದು ಕೋರ್ಟ್‌ ಆದೇಶಿಸಿರುವುದು.

ಗದಗ ಜಿಲ್ಲೆಯ ಶಿರಾಹಟ್ಟಿ ತಾಲೂಕಿನ ಲಕ್ಕವ್ವ ಎಂಬುವರ ಪತಿ ಸಂಸ್ಥೆಯ ನೌಕರ ರಾಮಣ್ಣ ಸಾವನ್ನಪ್ಪಿದ್ದರು. ಈ ಹಿನ್ನೆಲೆ ಅನುಕಂಪದ ಹುದ್ದೆ ಕೋರಿ ಲಕ್ಕವ್ವ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಏಕಸದಸ್ಯ ಪೀಠ, ಮಕ್ಕಳೂ ಇಲ್ಲದ 45 ವರ್ಷ ಮೀರಿದ ಮಹಿಳೆಗೆ ಅನುಕಂಪದ ಹುದ್ದೆ ನೀಡಿ ಎಂದು NWKRTCಗೆ ನಿರ್ದೇಶಿಸಿದೆ.

ಮಕ್ಕಳಿಲ್ಲದ ಮಹಿಳೆಯಾದ್ದರಿಂದ ಮಾನವೀಯತೆಯಿಂದ ಪರಿಗಣಿಸಿ. ವಯೋಮಿತಿಯ ಕಠಿಣ ಹೇರಿಕೆಯಿಂದ ಅನ್ಯಾಯವಾಗಬಾರದು. ಇಂತಹ ಪ್ರಕರಣಗಳಲ್ಲಿ ಮಾನವೀಯತೆಯ ನೀತಿ ರೂಪಿಸಲು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಇದ್ದ ಹೈಕೋರ್ಟ್ ಪೀಠ ತೀರ್ಪು ನೀಡಿದೆ.

ರಾಮಣ್ಣ NWKRTC ಉದ್ಯೋಗಿಯಾಗಿದ್ದರು. ಅವರು 2021ರಲ್ಲಿ ಸಾವನ್ನಪ್ಪಿದ್ದರು. ಆದರೆ ರಾಮಣ್ಣ ಹಾಗೂ ಲಕ್ಕವ್ವ ದಂಪತಿಗೆ ಮಕ್ಕಳಿಲ್ಲ. ಹೀಗಾಗಿ ಅನುಕಂಪದ ಹುದ್ದೆಯನ್ನು ತನಗೆ ನೀಡಬೇಕೆಂದು ಪತ್ನಿ ಲಕ್ಕವ್ವ ಸಂಸ್ಥೆಗೆ ಮನವಿ ಮಾಡಿದ್ದರು.

ಆದರೆ ವಯೋಮಿತಿ ಆಧಾರದ ಮೇಲೆ ಅನುಕಂಪದ ಹುದ್ದೆ ನೀಡಲು ಬರುವುದಿಲ್ಲ ಎಂದು NWKRTC ನಿಗಮದ ಅಧಿಕಾರಿಗಳು ಹೇಳಿ ಅವರನ್ನು ಕಳಿಸಿದ್ದರು. ಅದನ್ನು ಪ್ರಶ್ನಿಸಿ ಲಕ್ಕವ್ವ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಇದೀಗ ಮಾನವೀಯತೆ ಆಧಾರದ ಮೇಲೆ ಲಕ್ಕವ್ವಳಿಗೆ ಅನುಕಂಪದ ಹುದ್ದೆ ನೀಡುವಂತೆ ತೀರ್ಪು ನೀಡಿದೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ