NEWSನಮ್ಮಜಿಲ್ಲೆನಮ್ಮರಾಜ್ಯ

NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ

ನಮ್ಮೆಲ್ಲರ ನೆಚ್ಚಿನ ಅಧಿಕಾರಿ ಹಾ ಗೂ ನೌಕರರ ಮಾರ್ಗದರ್ಶಕರಾಗಿದ್ದ ನೀವು ಇಂದು ನಿವೃತ್ತರಾಗುತ್ತಿರುವುದು ಭಾರಿ ಭಾವಕರನ್ನಾಗಿಸಿದೆ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಧಾರವಾಡ ಗ್ರಾಮಾಂತರ ವಿಭಾಗದಲ್ಲಿ ಆಡಳಿತಾತ್ಮಕ ಸೇವೆಯಲ್ಲಿ ಹಲವಾರು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿ ನಾಳೆ ಮೇ 31ರಂದು ನಿವೃತ್ತರಾಗುತ್ತಿರುವ ಹಿರಿಯ ಅಧಿಕಾರಿ ಸುರೇಶ ಸರ್ಜಾಪುರ ಹಾಗೂ ಸುಣಗಾರ ಅವರಿಗೆ ಇಂದು ನೌಕರರು ಹೃದಯಸ್ಪರ್ಷಿ ಬೀಳ್ಕೊಡುಗೆ ನೀಡಿದರು.

ನಾಳೆ ಮೇ 31 ಭಾನುವಾರ ಬಂದಿರುವುರಿಂದ ಬಹುತೇಕ ಅಧಿಕಾರಿಗಳು ರಜೆಯಲ್ಲಿರುತ್ತಾರೆ, ಹೀಗಾಗಿ ನಾಳೆ ನಿವೃತ್ತರಾಗುತ್ತಿರುವ ಸಂಸ್ಥೆಯ ಅಧಿಕಾರಿಗಳು/ನೌಕರರಿಗೆ ಇಂದೇ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು.

ಈ ವೇಳೆ ನಾಳೆ ನಿವೃತ್ತರಾಗುತ್ತಿರುವ ಅಧಿಕಾರಿ ಸುರೇಶ ಅವರ ವೃತ್ತಿಪರತೆ ಬಗ್ಗೆ ಶ್ಲಾಘಿಸಿದ್ದಾರೆ. ನಮ್ಮೆಲ್ಲರ ನೆಚ್ಚಿನ ಅಧಿಕಾರಿ ಹಾಗೂ ನೌಕರರ ಮಾರ್ಗದರ್ಶಕರಾಗಿದ್ದ ನೀವು ಇಂದು ನಿವೃತ್ತರಾಗುತ್ತಿರುವುದು ಭಾರಿ ಭಾವಕರನ್ನಾಗಿಸಿದೆ ಎಂದು ಹೇಳಿದ್ದಾರೆ.

ಇನ್ನು ಬುದ್ಧ, ​ಬಸವಣ್ಣ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಅವರ ತತ್ವ ಗಳಿಂದ ಪ್ರೇರಿತರಾಗಿ,‌ ಸಾಮಾಜಿಕ ನ್ಯಾಯವನ್ನು ತಮ್ಮ ಸಾರಿಗೆ ಸೇವೆಯ ಜೀವನದ ಮುಖ್ಯ ಧ್ಯೇಯವನ್ನಾಗಿಸಿಕೊಂಡ ಖಡಕ್ ಅಧಿಕಾರಿಗಳಾದ್ರಿ, ಅದೇ ರೀತಿ ನಿಮ್ಮ ನಿವೃತ್ತಿಯ ಜೀವನವು ಸಂತೋಷದಿಂದ ಕೂಡಿರಲಿ ಎಂದು ಹಾರೈಸಿದ್ದಾರೆ.

ಅಲ್ಲದೆ ಅಧಿಕಾರಿಗಳು / ನೌಕರರ ಮೇಲಿನ ನಿಮ್ಮ ಅಚಲ ಬದ್ಧತೆ, ಸಾಮಾಜಿಕ ನ್ಯಾಯದ ಪರವಾದ ಕರ್ತವ್ಯನಿಷ್ಠೆ, ಬುದ್ಧ, ಬಸವಣ್ಣ ಹಾಗೂ ಅಂಬೇಡ್ಕರ್ ಅವರ ತತ್ವಗಳ ಮೇಲಿನ ನಿಷ್ಠೆ ನಮಗೆಲ್ಲರಿಗೂ ದಾರಿದೀಪವಾಗಿದೆ ಎಂದು ಹೇಳಿದ್ದಾರೆ.

ತಾವು ಪ್ರಮುಖವಾಗಿ ಹೇಳಬೇಕು ಎಂದರೆ ಸಾಮಾನ್ಯ ನೌಕರರ ಕಣ್ಣೀರಿನ ಭಾಷೆಯನ್ನು ಅರ್ಥಮಾಡಿ ಕೊಂಡ ಅಧಿಕಾರಿಯಾಗಿದ್ದೀರಿ ಎಂದು ಸುರೇಶ ಸರ್ಜಾಪುರ ಹಾಗೂ ಸುಣಗಾರ ಅವರ ಸೇವೆಯನ್ನು ಶ್ಲಾಘಿಸಿದ್ದಾರೆ.

ಇನ್ನು ಅಧಿಕಾರವಿರುವುದು ವೈಭವಕ್ಕಾಗಿ ಅಲ್ಲ, ಅದು ಜನಸೇವೆಯ ಸಾಧನವಾಗಿ ಎಂದು ಹೇಳಿ ಅದೇರೀತಿ ನಡೆದುಕೊಂಡ ಅಪರೂಪದ ಅಧಿಕಾರಿಗಳು ತಾವು ಎಂದು ಹೇಳಿದ್ದಾರೆ.

ಒಟ್ಟಾರೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಧಾರವಾಡ ಗ್ರಾಮಾಂತರ ವಿಭಾಗದಲ್ಲಿ ಆಡಳಿತಾತ್ಮಕ ಸೇವೆಯಲ್ಲಿ ಹಲವಾರು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿ ಇಂದು DTO ಸಂತೋಷ ಕಮತ ಅವರ ಅಧ್ಯಕ್ಷತೆಯಲ್ಲಿ ಸಮಸ್ತ ಅಧಿಕಾರಿ/ ನೌಕರ ಮಿತ್ರರೆಲ್ಲರೂ ಸೇರಿ ಆತ್ಮೀಯವಾಗಿ ನಿಮಗೆ ಬೀಳ್ಕೊಡುತ್ತಿದ್ದು, ನಿಮ್ಮ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ