KKRTC: ₹6ಲಕ್ಷ ಮೌಲ್ಯದ ಆಭರಣಗಳಿದ್ದ ವ್ಯಾನಿಟಿ ಬ್ಯಾಗ್ ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಚಾಲನಾ ಸಿಬ್ಬಂದಿ

ಬಳ್ಳಾರಿ: ಪ್ರಯಾಣಿಕರು ಬಸ್ನಲ್ಲಿ ಮರೆತು ಬಿಟ್ಟು ಹೋಗಿದ್ದ ಸುಮಾರು 6 ಲಕ್ಷ ರೂ. ಮೌಲ್ಯದ ಬಂಗಾರದ ಸರಗಳಿದ್ದ ವ್ಯಾನಿಟಿ ಬ್ಯಾಗನ್ನು ವಾರಸುದಾರರಿಗೆ ಮರಳಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಳ್ಳಾರಿ ಮೂರನೇ ಘಟಕದ ಚಾಲನಾ ಸಿಬ್ಬಂದಿಗಳು.
ಗುರುವಾರ ಬೆಳಗ್ಗೆ 11.30ರ ಸುಮಾರಿಗೆ ಘಟಕದ (KA-34 F-1175) ವಾಹನವು 310 BA (ಹರಗಿನ ಡೋಣಿ) ಮಾರ್ಗ ಮುಗಿಸಿಕೊಂಡು ನಗರ ಬಸ್ ನಿಲ್ದಾಣದಲ್ಲಿ ಎಲ್ಲ ಪ್ರಯಾಣಿಕರನ್ನು ಇಳಿಸಿ ಡ್ಯೂಟಿ ಪೂರ್ಣಗೊಂಡಿದ್ದರಿಂದ ಘಟಕಕ್ಕೆ ಬಸ್ ತೆಗೆದುಕೊಂಡು ಹೋಗುತ್ತಿದ್ದಾಗ ಪ್ರಯಾಣಿಕರು ಬಸ್ಸಿನಲ್ಲಿ ಬಿಟ್ಟು ಹೋಗಿರುವ ವ್ಯಾನಿಟಿ ಬ್ಯಾಗ್ ಸಿಕ್ಕಿದೆ.
ಅದನ್ನು ತೆಗೆದುಕೊಂಡು ಏನಿದೆ ಎಂದು ನಿರ್ವಾಹಕ ಚಂದ್ರಶೇಖರ್ ಆಚಾರ್ಯ (4005) ಅವರು ಚಾಲಕ ದೇವಪ್ಪ (453) ಅವರೊಂದಿಗೆ ನೋಡಿದಾಗ ಪ್ರಯಾಣಿಕರು ಬಸ್ಸಿನಲ್ಲಿ ಮರೆತು ಬಿಟ್ಟು ಹೋಗಿದ್ದ ಆ ಬ್ಯಾಗ್ನಲ್ಲಿ ಚಿನ್ನದ ಸರ, ನೆಕ್ಲೆಸ್, ಕಿವಿಓಲೆಗಳಿರುವುದು ಕಂಡು ಬಂದಿದೆ.
ಈ ಇಬ್ಬರು ಚಾಲನಾ ಸಿಬ್ಬಂದಿಗಳು ಅದನ್ನು ಘಟಕಕ್ಕೆ ತಂದು ಘಟಕ ವ್ಯವಸ್ಥಾಪಕ ಹರಿಕೃಷ್ಣ ಅವರ ಸಮ್ಮುಖದಲ್ಲಿ ಮತ್ತೊಮ್ಮೆ ಪರಿಶೀಲಿಸಿ ಬ್ಯಾಗಲ್ಲಿ 6 ತೋಲ (60gm) ಬಂಗಾರ ಇರುವುದನ್ನು ಖಚಿತಪಡಿಸಿಕೊಂಡರು. ಅಲ್ಲದೆ ಘಟಕ ವ್ಯವಸ್ಥಾಪಕರು ಆ ಬ್ಯಾಗನ್ನು ಪರಿಶೀಲಿಸಿ, ಅದರಲ್ಲಿರುವ ಆಧಾರ್ ಕಾರ್ಡ್ನ ಫೋನ್ ನಂಬರ್ಗೆ ಕರೆ ಮಾಡಿ ವಾರಸುದಾರರಿಗೆ ವಿಷಯ ತಿಳಿಸಿದರು..
ಈ ವೇಳೆ ಚಿನ್ನದ ಒಡವೆಗಳನ್ನು ಕಳೆದುಕೊಂಡಿದ್ದ ಪ್ರಯಾಣಿಕರು ಗಾಬರಿ ಮತ್ತು ಭಯಗೊಂಡು ಎಲ್ಹೋಯಿತು ಎಂದು ಹುಡುಕಾಡುತ್ತಿದ್ದರು. ಅದೇ ಸಮಯಕ್ಕೆ ಘಟಕ ವ್ಯವಸ್ಥಾಪಕರು ಕರೆ ಮಾಡಿ ಬ್ಯಾಗ್ ಸಿಕ್ಕಿರುವ ಬಗ್ಗೆ ಹೇಳಿದ್ದರಿಂದ ತುಸು ನೆಮ್ಮದಿಗೊಂಡರು.
ಇನ್ನು ಘಟಕಕ್ಕೆ ಬಂದು ಬ್ಯಾಗನ್ನು ತೆಗೆದುಕೊಂಡು ಹೋಗಲು ಘಟಕ ವ್ಯವಸ್ಥಾಪಕ ಹರಿಕೃಷ್ಣ ತಿಳಿಸಿದರು. ಬ್ಯಾಗ್ ಕಳೆದುಕೊಂಡಿದ್ದವರು ಘಟಕಕ್ಕೆ ಬಂದಾಗ ವಾರಸುದಾರರ ಆಧಾರ್ ಕಾರ್ಡಿನ ಪುರಾವೆಯನ್ನು ಪರಿಶೀಲಿಸಿ ಘಟಕದ ಪಾರುಪತ್ತೆಗಾರರು, ಚಾಲಕ ದೇವಪ್ಪ, ನಿರ್ವಾಹಕ ಚಂದ್ರಶೇಖರ್ ಆಚಾರ್ಯ ಹಾಗೂ ಘಟಕದ ಸಿಬ್ಬಂದಿಗಳ ಸಮ್ಮುಖದಲ್ಲಿ ಬ್ಯಾಗನ್ನು ಬಳ್ಳಾರಿ ಮೂರನೇ ಘಟಕದಲ್ಲಿ ಮಧ್ಯಾಹ್ನ 12:30ರ ಸುಮಾರರಿಗೆ ವಾರಸುದಾರರಿಗೆ ಘಟಕ ವ್ಯವಸ್ಥಾಪಕ ಹರಿಕೃಷ್ಣ ಮರಳಿಸಿದರು.

ಬಳಿಕ ಡಿಎಂ ಹರಿಕೃಷ್ಣ ಮಾತನಾಡಿ, ತಮ್ಮ ಡಿಪೋ ಚಾಲನಾ ಸಿಬ್ಬಂದಿಗಳಾದ ಚಾಲಕ ದೇವಪ್ಪ, ನಿರ್ವಾಹಕ ಚಂದ್ರಶೇಖರ್ ಆಚಾರ್ಯ ಅವರ ಪ್ರಾಯಾಣಿಕತೆಯನ್ನು ಶ್ಲಾಘಿಸಿದ್ದು, ಅಲ್ಲದೆ ಈ ಸಂಬಂಧ ಮೇಲಧಿಕಾರಿಗಳ ಗಮನಕ್ಕೆ ತಂದು ಚಾಲನಾ ಸಿಬ್ಬಂದಿಗಳನ್ನು ಗೌರವಿಸಲಾಗುವುದು ಎಂದು ವಿಜಯಪಥಕ್ಕೆ ತಿಳಿಸಿದರು.
Related


You Might Also Like
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...