LatestNEWSನಮ್ಮರಾಜ್ಯ

NWKRTC: ಮಳೆಗೆ ಸೋರುತಿಹುದು ಬಸ್‌ ಮಾಳಿಗೆ ಅಧಿಕಾರಿಗಳ ಅಜ್ಞಾನದಿಂದ ಸೋರುತಿಹುದು..!?

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ಮಾಳಿಗೆ ಮಳೆಗೆ ಸೋರುತಿದ್ದು ಇದು ಅಧಿಕಾರಿಗಳ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಾಗಿದೆ.

ಸಂಸ್ಥೆಯ ಹಾವೇರಿ ವಿಭಾಗದ ಹಾವೇರಿ ಘಟಕದ ಬಸ್ಛಾವಣಿ ತೂತು ಬಿದ್ದಿದ್ದು ಮಳೆಗೆ ಅದು ಸೂರುತ್ತಿದೆ. ಆ ಸೋರುತ್ತಿರುವ ಬಸ್ಸನ್ನೇ ಚಾಲಕ ಕೊಡೆ ಹಿಡಿದುಕೊಂಡು ಮಳೆಯೊಳಗೆ ಓಡಿಸುತ್ತಿರುವುದನ್ನು ಪ್ರಯಾಣಿಕರು ವಿಡಿಯೋ ಮಾಡಿದ್ದಾರೆ.

ಇದು ಘಟಕದ ಅಧಿಕಾರಿಗಳು ಮತ್ತು ಸಂಸ್ಥೆಯ ಅಧಿಕಾರಿಗಳ ನಡೆಯನ್ನು ತೋರಿಸುವಂತಿದೆ. ಬಸ್ಗಳನ್ನು ರಿಪೇರಿ ಮಾಡದೆ ಬಸ್ಗಳ ಫಿಟ್ನೆಸ್ನೋಡದೆ ಚಾಲಕರ ಕೈಗೆ ಬಸ್ಕೊಟ್ಟು ಕಳುಹಿಸುವ ಚಾಳಿಯಿಂದ ಈ ರೀತಿಯ ಅವಾಂತರಗಳು ನಡೆಯುತ್ತಿವೆ.

ಇನ್ನು ಚಾಲಕರು ಇಂಥ ಬಸ್ಬೇಡ ಎಂದು ಹೇಳಿದರೆ ಅವರಿಗೆ ಮೆಮೋ ಕೊಡುವುದು ಇಲ್ಲ ಬೇರೆ ಬಸ್ಕೊಡದೆ ಡಿಪೋನಲ್ಲೇ ಕೂರಿಸಿ ಬಳಿಕ ಗೈರು ಹಾಜರಿ ಮಾಡಿ ವೇತನ ಬರದಂತೆ ಮಾಡುವುದು.

ಇದನ್ನು ಪ್ರಶ್ನಿಸಿದರೆ ಮೇಲಧಿಕಾರಿಗಳಿಗೆ ಎದುರು ಮಾತನಾಡಿದ ಎಂದು ಹೇಳಿ ಮೆಮೋ ಕೊಟ್ಟು ಬಳಿಕ ಅಮಾನತು ಮಾಡುವುದು. ಇಲ್ಲಿ ಚಾಲಕರು ಬಸ್ಸರಿಯಿಲ್ಲ ಎಂದು ಹೇಳುವುದಕ್ಕೂ ಬಿಡದೆ ಈ ರೀತಿ ಅಧಿಕಾರಿಗಳು ದಬ್ಬಾಳಿಕ ಮಾಡುತ್ತಿರುವುದರಿಂದ ಇಂದು ಕೊಡೆ ಹಿಡಿದುಕೊಂಡು ಬಸ್ಓಡಿಸುವ ಸ್ಥಿತಿ ಚಾಲಕರಿಗೆ ಬಂದಿದೆ.

ಇನ್ನಾದರೂ ಈ ಬಗ್ಗೆ ಸಾರಿಗೆ ಸಚಿವರು ಮತ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕರು  ಗಮನ ಹರಿಸಿ ಬೇಜವಾಬ್ದಾರಿಯಿಂದ ನಡೆದುಕೊಳ್ಳುತಿರುವ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಪ್ರಯಾಣಿಕರೆ ಒತ್ತಾಯಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ