NEWSಕೃಷಿನಮ್ಮಜಿಲ್ಲೆ

NWKRTC: ವರುಣನ ಅಬ್ಬರಕ್ಕೆ ಕಾರವಾರದ ಬಸ್‌ ಡಿಪೋ ಜಲಾವೃತ- ಮಳೆ ನೀರಿನಲ್ಲೇ ನಿಂತು ಹೆರಿಗೆ ಮಾಡಿಸಿದ ವೈದ್ಯರು

ಕಾರವಾರ ಆಸ್ಪತ್ರೆ, ಬಸ್‌ ಡಿಪೋಗೆ ನುಗ್ಗಿದ ಮಳೆ ನೀರು.
ವಿಜಯಪಥ ಸಮಗ್ರ ಸುದ್ದಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಧಾರಾಕರ ಮಳೆಯಾಗುತ್ತಿದ್ದು, ಈ ಮಳೆಗೆ ವಾಯುವ್ಯ ರಸ್ತೆ ಸಾರಿಗೆ ನಿಮಗದ ಘಟಕ ಸಂಪೂರ್ಣ ಜಲಾವೃತವಾಗಿದ್ದು, ಬಸ್‌ಗಳನ್ನು ತೆಗೆಯುವುದಕ್ಕೂ ಸಿಬ್ಬಂದಿ ಪರದಾಡಿತ ಸ್ಥಿತಿ ನಿರ್ಮಾವಾಗಿತ್ತು.

ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಕಾರವಾರದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ನಗರದ NWKRTC ಘಟಕ ಸಂಪೂರ್ಣ ಜಲಾವೃತಗೊಂಡಿದ್ದು, ಡಿಪೋದಿಂದ ಬಸ್ ಹೊರ ತೆಗೆಯಲು ಚಾಲಕರು ಪರದಾಟಪಡುವಂತಾಗಿದೆ.

ಇನ್ನು ಮಳೆ ನೀರಿನಿಂದ ಒದ್ದೆಯಾದ ವಸ್ತುಗಳನ್ನು ಬೇರೆ ಕಡೆ ಸ್ಥಳಾಂತರಿಸಲು ಡಿಪೋದಲ್ಲಿ ನೌಕರರು ತಲೆ ಮೇಲೆ ವಸ್ತುಗಳನ್ನು ಹೊತ್ತುಕೊಂಡು ಬರುವ ಮೂಲಕ ಹರಸಾಹಸಪಟ್ಟಿದ್ದಾರೆ.

ಕಾರವಾರ ನಗರದ ಸರ್ಕಾರಿ ಆಸ್ಪತ್ರೆಗೂ ನೀರು ನುಗ್ಗಿದ್ದು, ಹೆರಿಗೆ ವಾರ್ಡ್‌ ಜಲಾವೃತಗೊಂಡಿತ್ತು. ಈ ವೇಳೆ ನೀರಿನ ನಡುವೆಯೇ ನಿಂತು ಹೆರಿಗೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಕೆಲ ಬಾಣಂತಿಯರನ್ನು ಕೆಳ ಮಹಡಿಯಿಂದ ಮೇಲ್ಮಹಡಿಗೆ ಸ್ಥಳಾಂತರಿಸಿದ್ದಾರೆ.

ಆದರೆ, ಅಲ್ಲಿ ಜಾಗ ಸಿಗದಿದ್ದಕ್ಕೆ ವೀಲ್‌ ಚೇರ್‌ನಲ್ಲೇ ಬಾಣಂತಿಯರನ್ನು ಕೂರಿಸಿಕೊಂಡಿದ್ದ ದೃಶ್ಯ ಅಲ್ಲಿನ ಜನಪ್ರತಿನಿಗಳ ಜವಾಬ್ದಾರಿಯನ್ನು ತೋರಿಸುತ್ತಿತ್ತು. ಇನ್ನು ಇಡೀ ರಾತ್ರಿ ಮಳೆಯಿಂದಾಗಿ ನಿದ್ದೆ ಇಲ್ಲದೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ಹೆರಿಗೆಗೆ ದಾಖಲಾದವರು ಸೇರಿದಂತೆ ಇತರೆ ರೋಗಿಗಳು ಪರದಾಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ