NEWSನಮ್ಮಜಿಲ್ಲೆನಮ್ಮರಾಜ್ಯ

NWKRTC: ಪರಿಷ್ಕೃತ ತುಟ್ಟಿಭತ್ಯೆ, HRA ಹಿಂಬಾಕಿ ಪಾವತಿ ಕುರಿತು ಎಂಡಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು/ನೌಕರರಿಗೆ ಮೂಲ ತುಟ್ಟಿಭತ್ಯೆ, ಪರಿಷ್ಕೃತ ಮನೆ ಬಾಡಿಗೆ ಭತ್ಯೆ ಹಾಗೂ ನಗರ ಪರಿಹಾರ ಭತ್ಯೆ ಹಿಂಬಾಕಿ ಜತೆಗೆ 01.07.2024 ರಿಂದ ಹಾಗೂ 01.01.2025 ರಿಂದ ಪರಿಷ್ಕರಿಸಲಾದ ತುಟ್ಟಿಭತ್ಯೆ ದರಗಳ ಹಿಂಬಾಕಿ ಮೊತ್ತ ಪಾವತಿ ಬಗ್ಗೆ ಸಂಸ್ಥೆ ಎಂಡಿ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಇದೇ ಅ.17ರಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಎಂ.ಪ್ರಿಯಾಂಗಾ ಅವರು ಆದೇಶ ಹೊರಡಿಸಿದ್ದು, ಇದನ್ನು ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಪ್ರಾದೇಶಿಕ ಕಾರ್ಯಾಗಾರ, ಕಾರ್ಯ ವ್ಯಸ್ಥಾಪಕರು, ಕಾರ್ಯ ನಿರ್ವಾಹಕ ಅಭಿಯಂತರರು ಪಾಲನೆ ಮಾಡುವಂತೆ ಸೂಚಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ, ಆಗಸ್ಟ್-2024 ರಿಂದ ಜೂನ್-2025ರ ವರೆಗಿನ 11 ತಿಂಗಳುಗಳ ಅವಧಿಯಲ್ಲಿ ಸೇವಾ ನಿರತ ಮತ್ತು ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ ನೌಕರರಿಗೆ ಮೂಲ ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆಗಳ ಮತ್ತು ತುಟ್ಟಿ ಭತ್ಯೆ ಹಿಂಬಾಕಿಗಳನ್ನು ಪಾವತಿಸುವುದು ಬಾಕಿ ಇದೆ.

ಇನ್ನು ಈಗಾಗಲೇ ಆಗಸ್ಟ್‌ -2024 ಈ 1 ತಿಂಗಳ ಹಿಂಬಾಕಿ ಪಾವತಿಸಲಾಗಿದೆ. ಅದರಂತೆ ಸೆಪ್ಟೆಂಬರ್-2024 ರ ಮಾಹೆಯ ಹಿಂಬಾಕಿ ಮೊತ್ತವನ್ನು ಈ ಕೆಳಗಿನಂತೆ ಪಾವತಿಸಲು ಸೂಕ್ತಾಧಿಕಾರಿಗಳು ಆದೇಶಿಸಿದ್ದಾರೆ.

ಪ್ರಸ್ತುತ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ ಸಿಬ್ಬಂದಿಗಳ ಸೆಪ್ಟೆಂಬರ್-2024ರ ಮಾಹೆಯ ಒಂದು ತಿಂಗಳ ಈ ಮೇಲಿನ ಹಿಂಬಾಕಿ ಮೊತ್ತವನ್ನು ಅಕ್ಟೋಬರ್-2025ರ ವೇತನದಲ್ಲಿ ಸೇರಿಸಿ ಪಾವತಿಸುವುದು. ಇನ್ನೂಳಿದ 9 ತಿಂಗಳುಗಳ ಹಿಂಬಾಕಿ ಪಾವತಿಯ ಕುರಿತು ನಂತರ ತಿಳಿಸಲಾಗುವುದು ಎಂದು ಹೇಳಿದ್ದಾರೆ.

ಅಕ್ಟೋಬರ್-2025ರ ಮಾಹೆಯಿಂದ ಮುಂದಕ್ಕೆ ಸೇವಾ ವಿಮುಕ್ತಿ ಹೊಂದುವವರಿಗೆ ಸೆಪ್ಟೆಂಬರ್-2024ರ ರಿಂದ ಜೂನ್-2025ರ ವರೆಗಿನ 10 ತಿಂಗಳುಗಳ ಹಿಂಬಾಕಿ ಮೊತ್ತವನ್ನು ನಿವೃತ್ತ ಮಾಹೆಯಲ್ಲಿ ವೇತನದಲ್ಲಿ ಸೇರಿಸಿ ಪಾವತಿಸಬೇಕು ಎಂದು ಆದೇಶ ಹೊರಡಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌ ಮೊದಲ ದಿನದ ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿ, ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದುವರಿಕೆ KSRTC: ಇಂದು ಸಾರಿಗೆ ಸಚಿವರ ಭೇಟಿಯಾದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌! ಆಟೋ ಗ್ಯಾಸ್ ಕೊರತೆ - ವದಂತಿಗಳಿಗೆ ಕಿವಿಗೊಡಬೇಡಿ - ಸಾರ್ವಜನಿಕರಿಗೆ ಕರೆ ಚಿತ್ರದುರ್ಗ: ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಾರಿಗೆ ನೌಕರರ ಪಾದಯಾತ್ರೆ ಆರಂಭ ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿ ನಾಪತ್ತೆ