NEWSನಮ್ಮಜಿಲ್ಲೆನಮ್ಮರಾಜ್ಯ

NWKRTC: ಪರಿಷ್ಕೃತ ತುಟ್ಟಿಭತ್ಯೆ, HRA ಹಿಂಬಾಕಿ ಪಾವತಿ ಕುರಿತು ಎಂಡಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು/ನೌಕರರಿಗೆ ಮೂಲ ತುಟ್ಟಿಭತ್ಯೆ, ಪರಿಷ್ಕೃತ ಮನೆ ಬಾಡಿಗೆ ಭತ್ಯೆ ಹಾಗೂ ನಗರ ಪರಿಹಾರ ಭತ್ಯೆ ಹಿಂಬಾಕಿ ಜತೆಗೆ 01.07.2024 ರಿಂದ ಹಾಗೂ 01.01.2025 ರಿಂದ ಪರಿಷ್ಕರಿಸಲಾದ ತುಟ್ಟಿಭತ್ಯೆ ದರಗಳ ಹಿಂಬಾಕಿ ಮೊತ್ತ ಪಾವತಿ ಬಗ್ಗೆ ಸಂಸ್ಥೆ ಎಂಡಿ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಇದೇ ಅ.17ರಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಎಂ.ಪ್ರಿಯಾಂಗಾ ಅವರು ಆದೇಶ ಹೊರಡಿಸಿದ್ದು, ಇದನ್ನು ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಪ್ರಾದೇಶಿಕ ಕಾರ್ಯಾಗಾರ, ಕಾರ್ಯ ವ್ಯಸ್ಥಾಪಕರು, ಕಾರ್ಯ ನಿರ್ವಾಹಕ ಅಭಿಯಂತರರು ಪಾಲನೆ ಮಾಡುವಂತೆ ಸೂಚಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ, ಆಗಸ್ಟ್-2024 ರಿಂದ ಜೂನ್-2025ರ ವರೆಗಿನ 11 ತಿಂಗಳುಗಳ ಅವಧಿಯಲ್ಲಿ ಸೇವಾ ನಿರತ ಮತ್ತು ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ ನೌಕರರಿಗೆ ಮೂಲ ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆಗಳ ಮತ್ತು ತುಟ್ಟಿ ಭತ್ಯೆ ಹಿಂಬಾಕಿಗಳನ್ನು ಪಾವತಿಸುವುದು ಬಾಕಿ ಇದೆ.

ಇನ್ನು ಈಗಾಗಲೇ ಆಗಸ್ಟ್‌ -2024 ಈ 1 ತಿಂಗಳ ಹಿಂಬಾಕಿ ಪಾವತಿಸಲಾಗಿದೆ. ಅದರಂತೆ ಸೆಪ್ಟೆಂಬರ್-2024 ರ ಮಾಹೆಯ ಹಿಂಬಾಕಿ ಮೊತ್ತವನ್ನು ಈ ಕೆಳಗಿನಂತೆ ಪಾವತಿಸಲು ಸೂಕ್ತಾಧಿಕಾರಿಗಳು ಆದೇಶಿಸಿದ್ದಾರೆ.

ಪ್ರಸ್ತುತ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ ಸಿಬ್ಬಂದಿಗಳ ಸೆಪ್ಟೆಂಬರ್-2024ರ ಮಾಹೆಯ ಒಂದು ತಿಂಗಳ ಈ ಮೇಲಿನ ಹಿಂಬಾಕಿ ಮೊತ್ತವನ್ನು ಅಕ್ಟೋಬರ್-2025ರ ವೇತನದಲ್ಲಿ ಸೇರಿಸಿ ಪಾವತಿಸುವುದು. ಇನ್ನೂಳಿದ 9 ತಿಂಗಳುಗಳ ಹಿಂಬಾಕಿ ಪಾವತಿಯ ಕುರಿತು ನಂತರ ತಿಳಿಸಲಾಗುವುದು ಎಂದು ಹೇಳಿದ್ದಾರೆ.

ಅಕ್ಟೋಬರ್-2025ರ ಮಾಹೆಯಿಂದ ಮುಂದಕ್ಕೆ ಸೇವಾ ವಿಮುಕ್ತಿ ಹೊಂದುವವರಿಗೆ ಸೆಪ್ಟೆಂಬರ್-2024ರ ರಿಂದ ಜೂನ್-2025ರ ವರೆಗಿನ 10 ತಿಂಗಳುಗಳ ಹಿಂಬಾಕಿ ಮೊತ್ತವನ್ನು ನಿವೃತ್ತ ಮಾಹೆಯಲ್ಲಿ ವೇತನದಲ್ಲಿ ಸೇರಿಸಿ ಪಾವತಿಸಬೇಕು ಎಂದು ಆದೇಶ ಹೊರಡಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ