ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸಹಾಯಕ ಸಂಚಾರ ಅಧೀಕ್ಷಕ (ದರ್ಜೆ-3)ರಾಗಿ ಕರ್ತವ್ಯ ನಿರ್ವಹಿಸುತ್ತಿರುವ 7 ಮಂದಿಯನ್ನು ಸಹಾಯಕ ಸಂಚಾರ ವ್ಯವಸ್ಥಾಪಕ (ದರ್ಜೆ-2)ರ ಹುದ್ದೆಗೆ ಬಡ್ತಿ ನೀಡಿ ಸಂಸ್ಥೆಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.
ಇದೇ ಜೂನ್24ರಂದು ನಡೆದ ಇಲಾಖಾ ಮುಂಬಡ್ತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದು, ಅದರಂತೆ ಸೂಕ್ತಾಧಿಕಾರಿಗಳ ಆದೇಶ ಮೇರೆಗೆ ಜೂನ್25ರಂದು ಸಹಾಯಕ ಸಂಚಾರ ಅಧೀಕ್ಷಕ (ದರ್ಜೆ-3)ರಾಗಿದ್ದ 7ಮಂದಿಯನ್ನು ಸಹಾಯಕ ಸಂಚಾರ ವ್ಯವಸ್ಥಾಪಕ (ದರ್ಜೆ-2) ಹುದ್ದೆಗೆ ಬಡ್ತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಬಡ್ತಿಯೊಂದಿಗೆ ಡಿಎಂಗಳಾಗಿ ವರ್ಗಾವಣೆಗೊಂಡವರ ವಿವರ: ಉತ್ತರ ಕನ್ನಡ ವಿಭಾಗ ಶಿರಸಿಯ ವಿ.ತ.ದಳದಲ್ಲಿದ್ದ ಸಹಾಯಕ ಸಂಚಾರ ಅಧೀಕ್ಷಕ ಎಸ್.ಎಂ.ಕುರ್ತಕೋಟಿ ಅವರನ್ನು ಉತ್ತರ ಕನ್ನಡ ವಿಭಾಗದ ಕುಮಟ ಘಟಕಕ್ಕೆ ಘಟಕ ವ್ಯವಸ್ಥಾಪಕರಾಗಿ ನಿಯೋಜನೆ ಮಾಡಿ ಆದೇಶ ಹೊರಡಿಸಿದ್ದಾರೆ.
ಹುಬ್ಬಳ್ಳಿ ಗ್ರಾಮಾಂತರ ವಿಭಾಗ, ನವಲಗುಂದ ಘಟಕದಲ್ಲಿ ಸಹಾಯಕ ಸಂಚಾರ ಅಧೀಕ್ಷಕರಾಗಿದ್ದ ಟಿ.ಎಸ್.ಮುನ್ನಾಸಾಬ್ ಅವರನ್ನು ಹುಬ್ಬಳ್ಳಿ ಗ್ರಾಮಾಂತರ ವಿಭಾಗ ಘಟಕ 3ರ ಘಟಕ ವ್ಯವಸ್ಥಾಪಕರಾಗಿ ಬಡ್ತಿನೀಡಿ ನಿಯೋಜಿಸಲಾಗಿದೆ.
ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಎಂ-2 ಘಟಕದಲ್ಲಿ ಸಹಾಯಕ ಸಂಚಾರ ಅಧೀಕ್ಷಕರಾಗಿದ್ದ ಬಿ.ಕೆ. ನಾಗರಾಜ ಅವರನ್ನು ಹುಬ್ಬಳ್ಳಿ ಗ್ರಾಮಾಂತರ ಘಟಕ-1ಕ್ಕೆ ಘಟಕ ವ್ಯವಸ್ಥಾಪಕರಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.
ಹಾವೇರಿ ವಿಭಾಗ, ವಿಭಾಗೀಯ ಕಚೇರಿಯಲ್ಲಿ ಸಹಾಯಕ ಸಂಚಾರ ಅಧೀಕ್ಷಕರಾಗಿದ್ದ ಗುರುಬಸಪ್ಪ ಅಡರಕಟ್ಟಿ ಅವರನ್ನು ಹಾವೇರಿ ಘಟಕದ ಘಟಕ ವ್ಯವಸ್ಥಾಪಕರಾಗಿ ನಿಯೋಜನೆ ಮಾಡಿ ಅಧಿಕಾರ ವಹಿಸಿಕೊಳ್ಳಲು ಆದೇಶಿಸಿದ್ದಾರೆ.
ಬಾಗಲಕೋಟೆ ವಿಭಾಗದ ಬಾದಾಮಿ ಘಟಕದಲ್ಲಿ ಸಹಾಯಕ ಸಂಚಾರ ಅಧೀಕ್ಷಕರಾಗಿದ್ದ ಈಶಪ್ಪ ಎಸ್. ನಾಯ್ಕರ ಅವರನ್ನು ಬಾಗಲಕೋಟ ವಿಭಾಗದ ಬೀಳಗಿ ಘಟಕದ ಘಟಕ ವ್ಯವಸ್ಥಾಪಕರಾಗಿ ಬಡ್ತಿಯೊಂದಿಗೆ ನಿಯೋಜಿಸಿ ಆದೇಶ ಹೊರಡಿಸಿದ್ದಾರೆ.
ಚಿಕ್ಕೋಡಿ ವಿಭಾಗದ ಅಥಣಿ ಘಟಕದಲ್ಲಿ ಸಹಾಯಕ ಸಂಚಾರ ಅಧೀಕ್ಷಕರಾಗಿದ್ದ ಸುನೀಲ ಟಿ.ಹೊನವಾಡ ಅವರನ್ನು ಚಿಕ್ಕೋಡಿ ವಿಭಾಗದ ಗೋಕಾಕ ಘಟಕಕ್ಕೆ ಘಟಕ ವ್ಯವಸ್ಥಾಪಕರಾಗಿ ಬಡ್ತಿಯೊಂದಿಗೆ ನಿಯೋಜಿಸಲಾಗಿದೆ.
ಹುಬ್ಬಳ್ಳಿ ಧಾರವಾಡ ನಗರ ಸಾರಿಗೆ ವಿಭಾಗದ ಹುಬ್ಬಳ್ಳಿ ಬಿಆರ್ಟಿಎಸ್ನಲ್ಲಿ ಸಹಾಯಕ ಸಂಚಾರ ಅಧೀಕ್ಷಕರಾಗಿದ್ದ ಸಂತೋಷ ಬೆನಕನಕೊಪ್ಪ ಅವರನ್ನು ಬೆಳಗಾವಿ ವಿಭಾಗದ ಖಾನಾಪುರ ಘಟಕಕ್ಕೆ ಘಟಕ ವ್ಯವಸ್ಥಾಪಕರಾಗಿ ಮುಂಬಡ್ತಿಯೊಂದಿಗೆ ನೇಮಿಸಿ ಆದೇಶ ಹೊರಡಿಸಿದ್ದಾರೆ.
ಈ ಎಲ್ಲ ಸಿಬ್ಬಂದಿಯವರ ಕಾರ್ಯ ಕ್ಷೇತ್ರದಲ್ಲಿ ಬದಲಾವಣೆ ಇರುವ ಸಿಬ್ಬಂದಿಗಳು ಮಾತ್ರ ನಿಯಮಾನುಸಾರ ನಿಯೋಜನಾ ಸೌಲಭ್ಯಗಳಿಗೆ ಅರ್ಹರಿರುತ್ತಾರೆ. ಮುಂದುವರಿದಂತೆ, ಈ ಬಡ್ತಿಯು ವರಿಷ್ಠತಾ ಪಟ್ಟಿಯ ಪರಿಷ್ಕರಣೆಯಿಂದ ಹಾಗೂ ಜೇಷ್ಠತೆಯಲ್ಲಿ ಹಿರಿಯರಿರುವ ಯಾರಾದರೂ ಪೂರ್ವಾನ್ವಯ ಬಡ್ತಿಗೆ ಅರ್ಹತೆ ಪಡೆದುಕೊಂಡಲ್ಲಿ, ಜೇಷ್ಠತಾ ಪಟ್ಟಿಯಲ್ಲಿ ಕಿರಿಯರಿರುವ ಅಧಿಕಾರಿಗಳನ್ನು ಹಿಂಬಡ್ತಿಗೊಳಿಸುವ ಷರತ್ತಿಗೊಳಪಟ್ಟಿದೆ.
ಈ ಸಿಬ್ಬಂದಿಯವರು ಪದೋನ್ನತಿ ಮೇರೆಗೆ ನಿಯೋಜನೆಗೊಂಡ ಸ್ಥಳದಲ್ಲಿ ಕೂಡಲೇ ವರದಿ ಮಾಡಿಕೊಳ್ಳತಕ್ಕದ್ದು. ಒಂದು ವೇಳೆ ಬಡ್ತಿಯನ್ನು ಒಪ್ಪಿಕೊಳ್ಳದೇ ಇದ್ದಲ್ಲಿ ಬಡ್ತಿ ನಿರಾಕರಣೆಯ ಮನವಿಯನ್ನು ಏಳು(7) ದಿನಗಳೊಳಗಾಗಿ ಕೇಂದ್ರ ಕಚೇರಿಗೆ ಸಲ್ಲಿಸತಕ್ಕದ್ದು. ಇಂತಹ ಪ್ರಕರಣಗಳನ್ನು ಸುತ್ತೋಲೆ ಸಂಖ್ಯೆ: 1344, 17-05-2006ರ ಅನ್ವಯ ಕ್ರಮ ಕೈಗೊಳ್ಳಲಾಗುವುದು.
ಮುಂದುವರಿದಂತೆ, ಬಡ್ತಿ ಆದೇಶ ಹೊರಡಿಸಿದ ದಿನಾಂಕದಂದು, ಸಿಬ್ಬಂದಿಗಳ ವಿರುದ್ದ ಪ್ರಸ್ತುತ ಅಪರಾಧ ಪ್ರಕರಣಗಳು ಬಾಕಿ ಇದ್ದಲ್ಲಿ, ದಂಡನೆ ಚಾಲ್ತಿ ಇದ್ದಲ್ಲಿ ಅಥವಾ ಅಮಾನತಿನಲ್ಲಿದ್ದಲ್ಲಿ ಯಾವುದೇ ಕಾರಣಕ್ಕೂ ಬಡ್ತಿಯ ಆದೇಶವನ್ನು ಜಾರಿಗೊಳಿಸತಕ್ಕದ್ದಲ್ಲ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಕೇಂದ್ರ ಕಚೇರಿಗೆ ಮಾಹಿತಿಯನ್ನು ನೀಡಬೇಕು ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶದಲ್ಲಿ ತಿಳಿಸಿದ್ದಾರೆ.
Related

You Might Also Like
ಬೆಂ.ಗ್ರಾಮಾಂತರ: ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮ- ವಾಹನ, ಸಾರ್ವಜನಿಕರ ಪ್ರವೇಶ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಾಳೆ (ಜೂ.20) ಬೆಂಗಳೂರು ಉತ್ತರ ತಾಲೂಕಿನ ನಗರೂರು ಗ್ರಾಮದಲ್ಲಿನ ಬಿ.ಜಿ.ಎಸ್ ಆಸ್ಪತ್ರೆಯ ನೂತನ ಘಟಕದ ಕಟ್ಟಡ...
ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ...
ಮಾವಿನ ಬೆಂಬೆಲ ಬೆಲೆ ನಿಗದಿಗೆ ಆಹಾರ ಸಚಿವ ಮುನಿಯಪ್ಪ ಒತ್ತಾಯ
ಬೆಂಗಳೂರು: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟದ...
ವಿವೇಚನಾತ್ಮಕವಾಗಿ ನೈಸರ್ಗಿಕ ಸಂಪತ್ ಬಳಸಿದರಷ್ಟೇ ಉಳಿಗಾಲ: ಸಚಿವ ಈಶ್ವರ ಖಂಡ್ರೆ
ಪಳೆಯುಳಿಕೆ ಇಂಧನಕ್ಕೆ ಪರ್ಯಾಯವಾಗಿ ನವೀಕೃತ ಮತ್ತು ಜೈವಿಕ ಇಂಧನ ಬಳಕೆಗೆ ಕರೆ ಬೆಂಗಳೂರು: ಪರಿಸರ ಸ್ನೇಹಿಯಾದ ನವೀಕರಿಸಬಹುದಾದ ಮತ್ತು ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುವ...
KKRTC ಕಂಡಕ್ಟರ್ ಮೇಲೆ ಹಲ್ಲೆ: ಮೂವರಿಗೆ ₹75 ಸಾವಿರ ದಂಡ- ಕಟ್ಟಲಾಗದಿದ್ದರೆ 6 ತಿಂಗಳು ಜೈಲು ಶಿಕ್ಷೆ- ಕೋರ್ಟ್ ಮಹತ್ವದ ತೀರ್ಪು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಮೂವರಿಗೆ ಅಫಜಲಪುರ ಪ್ರಧಾನ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯ ತಲಾ...
KKRTC ವಿಜಯಪುರ: ತಂದೆ ನಿಧನರಾದ ನಾಲ್ಕೇ ದಿನಕ್ಕೆ ಡ್ಯೂಟಿಗೆ ಬರಬೇಕಿತ್ತು ಅಂತ ಚಾಲಕನಿಗೆ ಗೈರುಹಾಜರಿ ಮಾಡಿದ ಡಿಸಿ ನಾರಾಯಣಪ್ಪ ಕುರುಬರ
ಒಟ್ಟು 58 ದಿನ ರಜೆಯಲ್ಲಿದ್ದ ಚಾಲಕ ಕಂ ನಿರ್ವಾಹಕನಿಗೆ ಹಿಂದೆ ಮುಂದೆ ಗೈರು ಹಾಜರಿ ತೋರಿಸಿ 7ದಿನ ರಜೆ ಮಂಜೂರು ಮಾಡಿದ ಡಿಸಿಯ ನಡೆ ಅನುಮಾನಕ್ಕೆ ಎಡೆ...
BMTC: ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನ ಪ್ರಕರಣದ FIRಗೆ ಹೈ ಕೋರ್ಟ್ ತಡೆ
ಬಿಎಂಟಿಸಿ ಚಾಲಕನ ಪರ ವಕ್ಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ವಕೀಲ ಎಚ್.ಬಿ.ಶಿವರಾಜು ಬಹುತೇಕ ಸಾರಿಗೆ ನೌಕರರ ಎಲ್ಲ ಪ್ರಕರಣಗಳಲ್ಲೂ ಜಾಣ್ಮೆಯ ವಾದ ಮಂಡಿಸಿ...
KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ....
ಜೂ.21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ....