ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಉಗ್ರಾಣ ಅಧೀಕ್ಷಕ (ದರ್ಜೆ-3)ರಾಗಿ ಕರ್ತವ್ಯ ನಿರ್ವಹಿಸುತ್ತಿರುವ 3 ಮಂದಿಯನ್ನು ಸಹಾಯಕ ಉಗ್ರಾಣಾಧಿಕಾರಿಗಳ (ದರ್ಜೆ-2) ಹುದ್ದೆಗೆ ಬಡ್ತಿ ನೀಡಿ ಸಂಸ್ಥೆಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.
ಇದೇ ಜೂನ್24ರಂದು ನಡೆದ ಇಲಾಖಾ ಮುಂಬಡ್ತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದು, ಅದರಂತೆ ಸೂಕ್ತಾಧಿಕಾರಿಗಳ ಆದೇಶ ಮೇರೆಗೆ ಜೂನ್25ರಂದು ಉಗ್ರಾಣ ಅಧೀಕ್ಷಕ (ದರ್ಜೆ-3)ರಾಗಿ ಕರ್ತವ್ಯ ನಿರ್ವಹಿಸುತ್ತಿರುವ 3 ಮಂದಿಯನ್ನು ಸಹಾಯಕ ಉಗ್ರಾಣಾಧಿಕಾರಿಗಳ (ದರ್ಜೆ-2) ಹುದ್ದೆಗೆ ಬಡ್ತಿ ಎಂದು ತಿಳಿಸಿದ್ದಾರೆ.
ಬಡ್ತಿಯೊಂದಿಗೆ ವರ್ಗಾವಣೆಗೊಂಡವರ ವಿವರ: ಹುಬ್ಬಳ್ಳಿ ಕೇಂದ್ರ ಕಚೇರಿಯಲ್ಲಿ ಉಗ್ರಾಣ ಅಧೀಕ್ಷಕರಾಗಿದ್ದ ಗದಿಗೆಪ್ಪ ರು ಕವಳಿ ಅವರನ್ನು ಕೇಂದ್ರ ಕಚೇರಿಯಲ್ಲೇ ಸಹಾಯಕ ಉಗ್ರಾಣಾಧಿಕಾರಿಯಾಗಿ ಮುಂಬಡ್ತಿಯೊಂದಿಗೆ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಚಿಕ್ಕೋಡಿ ವಿಭಾಗದಲ್ಲಿ ಉಗ್ರಾಣ ಅಧೀಕ್ಷಕರಾಗಿದ್ದ ಶಿವಲಿಂಗಮ್ಮ ನೀಲಪ್ಪನವರ ಅವರನ್ನು ಚಿಕ್ಕೋಡಿ ವಿಭಾಗದಲ್ಲೇ ಸಹಾಯಕ ಉಗ್ರಾಣಾಧಿಕಾರಿಯಾಗಿ ಮತ್ತು ಉತ್ತರ ಕನ್ನಡ ವಿಭಾಗದಲ್ಲಿ ಉಗ್ರಾಣ ಅಧೀಕ್ಷಕರಾಗಿದ್ದ ರವೀಂದ್ರ ಭಟ್ ಅವರನ್ನು ಸಹಾಯಕ ಉಗ್ರಾಣಾಧಿಕಾರಿಯಾಗಿ ಬಡ್ತಿನೀಡಿ ಹುಬ್ಬಳ್ಳಿ ಕೇಂದ್ರ ಕಚೇರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಈ ಎಲ್ಲ ಸಿಬ್ಬಂದಿಯವರ ಕಾರ್ಯ ಕ್ಷೇತ್ರದಲ್ಲಿ ಬದಲಾವಣೆ ಇರುವ ಸಿಬ್ಬಂದಿಗಳು ಮಾತ್ರ ನಿಯಮಾನುಸಾರ ನಿಯೋಜನಾ ಸೌಲಭ್ಯಗಳಿಗೆ ಅರ್ಹರಿರುತ್ತಾರೆ. ಮುಂದುವರಿದಂತೆ, ಈ ಬಡ್ತಿಯು ವರಿಷ್ಠತಾ ಪಟ್ಟಿಯ ಪರಿಷ್ಕರಣೆಯಿಂದ ಹಾಗೂ ಜೇಷ್ಠತೆಯಲ್ಲಿ ಹಿರಿಯರಿರುವ ಯಾರಾದರೂ ಪೂರ್ವಾನ್ವಯ ಬಡ್ತಿಗೆ ಅರ್ಹತೆ ಪಡೆದುಕೊಂಡಲ್ಲಿ, ಜೇಷ್ಠತಾ ಪಟ್ಟಿಯಲ್ಲಿ ಕಿರಿಯರಿರುವ ಅಧಿಕಾರಿಗಳನ್ನು ಹಿಂಬಡ್ತಿಗೊಳಿಸುವ ಷರತ್ತಿಗೊಳಪಟ್ಟಿದೆ.
ಈ ಸಿಬ್ಬಂದಿಯವರು ಪದೋನ್ನತಿ ಮೇರೆಗೆ ನಿಯೋಜನೆಗೊಂಡ ಸ್ಥಳದಲ್ಲಿ ಕೂಡಲೇ ವರದಿ ಮಾಡಿಕೊಳ್ಳತಕ್ಕದ್ದು. ಒಂದು ವೇಳೆ ಬಡ್ತಿಯನ್ನು ಒಪ್ಪಿಕೊಳ್ಳದೇ ಇದ್ದಲ್ಲಿ ಬಡ್ತಿ ನಿರಾಕರಣೆಯ ಮನವಿಯನ್ನು ಏಳು(7) ದಿನಗಳೊಳಗಾಗಿ ಕೇಂದ್ರ ಕಚೇರಿಗೆ ಸಲ್ಲಿಸತಕ್ಕದ್ದು. ಇಂತಹ ಪ್ರಕರಣಗಳನ್ನು ಸುತ್ತೋಲೆ ಸಂಖ್ಯೆ: 1344, 17-05-2006ರ ಅನ್ವಯ ಕ್ರಮ ಕೈಗೊಳ್ಳಲಾಗುವುದು.

ಮುಂದುವರಿದಂತೆ, ಬಡ್ತಿ ಆದೇಶ ಹೊರಡಿಸಿದ ದಿನಾಂಕದಂದು, ಸಿಬ್ಬಂದಿಗಳ ವಿರುದ್ದ ಪ್ರಸ್ತುತ ಅಪರಾಧ ಪ್ರಕರಣಗಳು ಬಾಕಿ ಇದ್ದಲ್ಲಿ, ದಂಡನೆ ಚಾಲ್ತಿ ಇದ್ದಲ್ಲಿ ಅಥವಾ ಅಮಾನತಿನಲ್ಲಿದ್ದಲ್ಲಿ ಯಾವುದೇ ಕಾರಣಕ್ಕೂ ಬಡ್ತಿಯ ಆದೇಶವನ್ನು ಜಾರಿಗೊಳಿಸತಕ್ಕದ್ದಲ್ಲ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಕೇಂದ್ರ ಕಚೇರಿಗೆ ಮಾಹಿತಿಯನ್ನು ನೀಡಬೇಕು ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶದಲ್ಲಿ ತಿಳಿಸಿದ್ದಾರೆ.
Related


You Might Also Like
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...