NEWSನಮ್ಮಜಿಲ್ಲೆನಮ್ಮರಾಜ್ಯ

NWKRTC: DA ಅರಿಯರ್ಸ್ ಬಗ್ಗೆ ಚರ್ಚಿಸಿ ಆದೇಶ ಮಾಡುವೆ-ಕೂಟದ ಪದಾಧಿಕಾರಿಗಳ ಜತೆ ವ್ಯವಸ್ಥಾಪಕ ನಿರ್ದೇಶಕರ ಚರ್ಚೆ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ಸಾರಿಗೆ ನೌಕರರ ಕೂಟದಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಲಯ ಮಟ್ಟದ ಕುಂದು ಕೊರತೆ ಬಗ್ಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಅವರ ಜತೆ ಸೋಮವಾರ ಸಭೆ ಮಾಡಲಾಯಿತು.

ಸಭೆಯಲ್ಲಿ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ರಾಜ್ಯ ಪ್ರಧಾನಕಾರ್ಯದರ್ಶಿ ತಿಪ್ಪೆಸ್ವಾಮಿ ನಾಯಕ, ರಾಜ್ಯ ಸಹ ಜಂಟಿ ಕಾರ್ಯದರ್ಶಿ ಶಶಿಕಾಂತ ಪಾಟೀಲ, ವಾಯುವ್ಯ ಕಾರ್ಯಧ್ಯಕ್ಷ ವಿರೇಶ ಪೂಜಾರ ನಿಗಮದ ನೌಕರರ ಪತ್ತಿನ ಸಹಕಾರಿ ಸಂಘ ಬಾಗಲಕೋಟ ಅಧ್ಯಕ್ಷ ವಜ್ರಮಟ್ಟಿ ಭಾಗವಹಿಸಿದ್ದರು.

ಈ ವೇಳೆ ವ್ಯವಸ್ಥಾಪಕ ನಿರ್ದೇಶಕರ ಬಳಿ ನೌಕರರಿಗೆ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಮಾಡಲಾಯಿತು. ಪ್ರಮುಖವಾಗಿ ವಾಯುವ್ಯ ಸಾರಿಗೆಯಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ಕೊಡಲಾಗುವ ಪರಿಹಾರ ಮೊತ್ತವನ್ನು ₹5 ಲಕ್ಷದಿಂದ 10 ಲಕ್ಷ ರೂ.ಗಳಿಗೆ ಹೆಚ್ಚಿಸಬೇಕು ಎಂದು ಕೇಳಲಾಯಿತು.

ಇದಕ್ಕೆ ಸ್ಪಂದಿಸಿದ ವ್ಯವಸ್ಥಾಪಕ ನಿರ್ದೇಶಕರು ಅತೀ ಶೀಘ್ರದಲ್ಲೇ 8 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ಇನ್ನು ನಗದು ರಹಿತ ಆರೋಗ್ಯದ ಬಗ್ಗೆಯೂ ಚರ್ಚಿಸಲಾಯಿತು. ಈ ವೇಳೆ ಸಂಸ್ಥೆಯ ಕೆಲ ನೌಕರರು ನಮಗೆ ಇದು ಬೇಡ ಅಂತಾ ಬರೆದುಕೊಟ್ಟಿದ್ದು, ಸದ್ಯದಲ್ಲೇ ಅದನ್ನು ಕೂಡ ಜಾರಿ ಮಾಡಲಾಗುವುದು ಎಂದು ತಿಳಿಸಿದರು.

DA ಅರಿಯರ್ಸ್ ಬಗ್ಗೆ ಚರ್ಚಿಸಿ ಸದ್ಯದಲ್ಲೇ ಅದನ್ನು ಕೂಡ ಆದೇಶ ಮಾಡುವುದಾಗಿ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಅವರು ಕೂಟದ ಪದಾಧಿಕಾರಿಗಳಿಗೆ ತಿಳಿಸಿದರು.

ಇನ್ನು ಧಾರವಾಡ ಗ್ರಾಮೀಣ ವಿಭಾಗದ ರಾಮದುರ್ಗ ಘಟಕದಲ್ಲಿ ಫಾರಂ -4ನಲ್ಲಿ ಕಿಲೋಮೀಟರ್ ಕಡಿಮೆ ಇದ್ದು ವಾಹನದ ರೀಡಿಂಗ್ ಕಿಲೋಮೀಟರ್ ಹೆಚ್ಚಾಗಿದೆ, ಇದರಿಂದ ನೌಕರರಿಗೆ ಆಗುತ್ತಿರುವ ಕೆಎಂಪಿಲ್ ಸಮಸ್ಯೆ ಬಗ್ಗೆ ತಾವು ಗಮನಹರಿಸಬೇಕು ಎಂದಾಗ ಆ ಫಾರಂ -4 ಬದಲಾವಣೆ ಮಾಡುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಸಿ ಆಗುತ್ತಿರುವ ಸಮಸ್ಯೆ ಪರಿಹರಿಸುವುದಾಗಿ ತಿಳಿಸಿದರು.

ಹೀಗೆ ನೌಕರರಿಗೆ ಸಂಬಂಧಿಸಿದ ಹತ್ತು ಹಲವು ಸಮಸ್ಯೆಗಳ ಬಗ್ಗೆ ಕೂಟದ ಪದಾಧಿಕಾರಿಗಳು ಎಂಡಿ ಅವರ ಬಳಿ ಚರ್ಚೆ ನಡೆಸಿದ್ದು, ನೌಕರರ ಹಿತ ಕಾಯುವುದಾಗಿ ಎಂಡಿ ಅವರು ಭರವಸೆ ನೀಡಿರುವುದಾಗಿ ಪದಾಧಿಕಾರಿಗಳು ತಿಳಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ