CrimeNEWSನಮ್ಮಜಿಲ್ಲೆ

NWKRTC: ಚಲಿಸುತ್ತಿದ್ದಾಗ ಬಸ್​ ಚಾಸಿಸ್ ತುಂಡು- ಹಲವು ಪ್ರಯಾಣಿಕರಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಕಾರವಾರ: ಪ್ರಯಾಣಿಕರನ್ನು ತುಂಬಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್​​ನ ಚಾಸಿಸ್ ತುಂಡಾಗಿದ್ದರಿಂದ ಬಸ್‌ ಅಪಘಾತಕ್ಕೀಡಾಗಿ ಹಲವು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಕಾರವಾರ ನಗರದ ಹಬ್ಬುವಾಡ ರಸ್ತೆಯಲ್ಲಿ ನಡೆದಿದೆ.

ಸಾರಿಗೆ ಬಸ್​ ಕಾರವಾರ ನಗರದಿಂದ ಕೆರವಡಿ ಗ್ರಾಮಕ್ಕೆ ತೆರಳುತ್ತಿತ್ತು. ಈ ವೇಳೆ ನಡುರಸ್ತೆಯಲ್ಲೇ ಬಸ್​ ಚಾಸಿಸ್ ತುಂಡಾಗಿದ್ದು, ಬಸ್​ನಲ್ಲಿದ್ದ ಹಲವು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಯಾವುದೇ ಜೀವಹಾನಿ ಇಲ್ಲದೆ ಬಚಾವ್‌ ಆಗಿದ್ದಾರೆ.

ಬಸ್ಸಿನಲ್ಲಿ ಐವತ್ತಕ್ಕೂ ಅಧಿಕ ಜನರು ಪ್ರಯಾಣಿಸುತ್ತಿದ್ದರು. ಆದರೆ ಈ ವೇಳೆ ಬಸ್ಸಿನ ಹಿಂಬದಿ ಚಾಸಿಸ್ ಒಮ್ಮೆಲೆ ಕಟ್ ಆಗಿದೆ. ಇನ್ನು ಚಾಸಿಸ್ ಕಟ್​​ ಆಗಿ ಬಸ್​ ರಸ್ತೆಯಲ್ಲಿಯೇ ಪಲ್ಟಿಯಾಗುವ ಹಂತಕ್ಕೆ ತಲುಪಿತ್ತು. ಆದರೆ ಉರುಳಿ ಬೀಳುವಂತಿದ್ದ ಬಸ್ಸನ್ನು ಸಾರ್ವಜನಿಕರು ಹಿಡಿದು ನಿಲ್ಲಿಸಿದ್ದಾರೆ.

ಅತ್ತ ಕಂಡೀಷನ್ ಇಲ್ಲದ ಬಸ್ಸನ್ನು ಕಾರ್ಯಾಚರಣೆಗೆ ಬಿಟ್ಟ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ನಡು ರಸ್ತೆಯಲ್ಲೇ ಬಸ್ ಅವಾಂತರದ ಹಿನ್ನೆಲೆ ಕಾರವಾರ ಕೈಗಾ ರಸ್ತೆ ಸಂಚಾರ ಕೆಲ ಹೊತ್ತು ಬಂದ್ ಆಗಿತ್ತು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ