NEWSನಮ್ಮಜಿಲ್ಲೆನಮ್ಮರಾಜ್ಯ

NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ್ಕಾರ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 27ನೇ ಸಂಸ್ಥಾಪನಾ ದಿನ ಸಮಾರಂಭದಲ್ಲಿ 2023-24ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಸೇವೆ ಸಲ್ಲಿಸಿದ ಅಧಿಕಾರಿಗಳನ್ನು ಪುರಸ್ಕರಿಸಲಾಯಿತು.

ಶುಕ್ರವಾರ ಅಂದರೆ ನ.15 ರಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 27ನೇ ಸಂಸ್ಥಾಪನಾ ದಿನದ ಅಂಗವಾಗಿ ಎಚ್.ಡಿ.ಬಿ.ಆರ್.ಟಿ.ಎಸ್ ಘಟಕ ಹುಬ್ಬಳ್ಳಿಯಲ್ಲಿ ಸಮಾರಂಭ ಆಯೋಜನೆ ಮಾಡಲಾಗಿತ್ತು.

ಈ ಸಮಾರಂಭದಲ್ಲಿ 2023-24ನೇ ಸಾಲಿನಲ್ಲಿ ಸಂಸ್ಥೆಯ ಕಾರ್ಯ ನಿರ್ವಹಣೆಯನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಪ್ರಯುಕ್ತ ಹಾವೇರಿ ವಿಭಾಗಕ್ಕೆ ಮೊದಲ ಸ್ಥಾನ ಹಾಗೂ ವಿಭಾಗದ ವ್ಯಾಪ್ತಿಯ ಘಟಕಗಳ ಉತ್ತಮ ಕಾರ್ಯ ಸಾಧನೆಗೆ ಹಿರೇಕೆರೂರು ಮತ್ತು ಹಾವೇರಿ ಘಟಕಗಳಿಗೆ 2ನೇ ಮತ್ತು 3ನೇ ಪಡೆದುಕೊಂಡಿವೆ.

2023-24 ನೇ ಸಾಲಿನಲ್ಲಿ ಸಂಸ್ಥೆಯ ಕಾರ್ಯ ನಿರ್ವಹಣೆಯನ್ನು ಅತ್ಯುತ್ತಮವಾಗಿ ನಿರ್ವಹಿಸಿದ ವಿಭಾಗದ ಭದ್ರತಾ ಶಾಖೆಯ ವಿಭಾಗೀಯ ಭದ್ರತಾ ಅಧೀಕ್ಷಕ ಎಚ್. ಡಿ. ತೋಗುಣುಸಿ ಅತ್ಯುತ್ತಮ ಮೇಲ್ವಿಚಾರಕ ಸಿಬ್ಬಂದಿ ಪುರಸ್ಕಾರ ಪಡೆದುಕೊಂಡಿದ್ದಾರೆ.

ಇನ್ನು ಸಂಸ್ಥೆಯ ಕಾರ್ಯ ನಿರ್ವಹಣೆಯನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಅಧಿಕಾರಿಯಾಗಿ ವಿಭಾಗದ ವಿಭಾಗೀಯ ಸಂಚಾರ ಅಧಿಕಾರಿ ಅಶೋಕ ರು. ಪಾಟೀಲ ಅವರು ಭಾಜನರಾಗಿದ್ದಾರೆ. ಒಟ್ಟಾರೆಯಾಗಿ ಹಾವೇರಿ ವಿಭಾಗದ ಉತ್ತಮ ಕಾರ್ಯನಿರ್ವಹಣೆಗೆ 5 ಅಧಿಕಾರಿಗಳಿಗೆ ಪುರಸ್ಕಾರ ನೀಡಿ ಸನ್ಮಾನಿಸಲಾಗಿದೆ.

ಈ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕಾರ್ಮಿಕ ಸಚಿವ ಸಂತೋಷ ಲಾಡ್, ಸಂಸ್ಥೆಯ ಅಧ್ಯಕ್ಷ ಭರಮಗೌಡ (ರಾಜು) ಅ. ಕಾಗೆ, ಉಪಾಧ್ಯಕ್ಷ ಪೀರ್‌ಸಾಬ್ ಕೌತಾಳ, ವ್ಯವಸ್ಥಾಪಕ ನಿರ್ದೇಶಕಿ ಎಂ.ಪ್ರಿಯಾಂಗಾ ಸೇರಿದಂತೆ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ