CrimeNEWSನಮ್ಮಜಿಲ್ಲೆ

NWKSRTC- ಹೃದಯಾಘಾತಕ್ಕೀಡಾದ ನಿರ್ವಾಹಕರ ಬಿಟ್ಟು ಪರಾರಿಯಾದ ತಪಾಸಣಾಧಿಕಾರಿಗಳು : ಕಂಡಕ್ಟರ್ ಮೃತ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ತಪಾಸಣಾ ಅಧಿಕಾರಿಗಳು ಬಂದ ಕೆಲವೇ ಕ್ಷಣಗಳಲ್ಲಿ ಕಂಡಕ್ಟರ್​ ಹೃದಯಾಘಾತದಿಂದ  ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ವಿದ್ಯಾನಗರದಲ್ಲಿ ನಡೆದಿದೆ.

ಹುಬ್ಬಳ್ಳಿಯ ಬಂಡಿವಾಡ – ಅಗಸಿಯಿಂದ ಗಾಮನಗಟ್ಟಿಗೆ ಹೊರಟಿದ್ದ ಬಸ್​ನ ಕಂಡಕ್ಟರ್​ ಮಹೇಶ್​ ಹೂಗಾರ ಎಂಬುವರೆ ಹೃದಯಘಾತದಿಂದ ಮೃತಪಟ್ಟವರು.

ಹುಬ್ಬಳ್ಳಿಯ ಬಂಡಿವಾಡ ಅಗಸಿಯಿಂದ ಗಾಮನಗಟ್ಟಿಗೆ ಬಸ್ ಹೊರಟಿತ್ತು.‌ ತಪಾಸಣಾ ಅಧಿಕಾರಿಗಳು ವಿದ್ಯಾನಗರದ ಬಳಿ ಬಸ್ ನಿಲ್ಲಿಸಿ ಟಿಕೆಟ್ ಬುಕ್ ಪಡೆಯುತ್ತಿದ್ದಂತೆ ಕಂಡಕ್ಟರ್ ಮಹೇಶ್​ ಹೂಗಾರ ಎದೆ ನೋವಿನಿಂದ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ತಪಾಸಣಾ ಅಧಿಕಾರಿ ಅಲ್ಲಿಂದ ಪರಾರಿಯಾಗಿದ್ದಾರೆ. ಆದರೆ, ಚಾಲಕ ಹರಸಾಹಸ ಮಾಡಿ ಕಿಮ್ಸ್​ಗೆ ತರುವಷ್ಟರಲ್ಲಿಯೇ ನಿರ್ವಾಹಕರ ಪ್ರಾಣ ಪಕ್ಷ ಹಾರಿಹೋಗಿತ್ತು.

ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಈಗಾಗಲೇ ಹಲವು ಸಮಸ್ಯೆಗಳನ್ನು ಸಿಬ್ಬಂದಿ ಎದುರಿಸುತ್ತಿದ್ದು, ಪ್ರತಿ ಕ್ಷಣವೂ ಆತಂಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ರುದಾರೆ. ಹೀಗಾಗಿ ಈ  ದುರ್ಘಟನೆಗೆ ಕಾರಣವಾಗಿದೆ ಎಂದು ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಎದೆ ನೋವಿನಿಂದ ನರಳುತ್ತಿದ್ದ ನಿರ್ವಾಹಕರನ್ನು ಆಸ್ಪತ್ರೆಗೆ ಸೇರಿಸುವ ಬದಲು ಅಧಿಕಾರಿಗಳು ಅಲ್ಲಿಂದ ಪರಾರಿಯಾಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಮಾನವೀಯತೆ ಇಲ್ಲದಂತೆ ವರ್ತಿಸುವ ಇಂಥ ಅಧಿಕಾರಿಗಳಿಗೆ ಜೀವದ ಬೆಲೆ ಎಲ್ಲಿ ಗೊತ್ತಾಗುತ್ತದೆ ಎಂದು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಆದರೂ ನಿಗಮದ ಉನ್ನತ ಅಧಿಕಾರಿಗಳು ಈ ಬಗ್ಗೆ ಏನು ಪ್ರತಿಕ್ರಿಯೆ ನೀಡದಿರುವುದು ಸೋಜಿಗವೇ ಸರಿ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ