ಗದಗ: ಪೊಲೀಸ್ ಅಧಿಕಾರಿ ಸಹೋದರನೊಬ್ಬ ರಾತ್ರಿ ಕುಡಿದ ಮತ್ತಿನಲ್ಲಿ ಪೊಲೀಸ್ ಠಾಣೆಗೆ ನುಗ್ಗಿ, ಪೊಲೀಸರಿಗೆ ಅವಾಜ್ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಕಿರಿಕ್ ಮಾಡಿಕೊಂಡ ಘಟನೆ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಪೊಲೀಸ್ ಠಾಣೆಯಲ್ಲಿ ರೌಡಿ ರೀತಿ ವರ್ತಿಸಿದ ಅಕ್ಷತ್ ಹದ್ದಣ್ಣವರ್ ನಿಂದ ಈ ಎಲ್ಲ ರಂಪಾಟ ನಡೆದಿದೆ. ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಅಕ್ಷತ್ ಹಾಗೂ ಸಹಚರನಿಂದ ರಾತ್ರಿಯಿಡೀ ಹೈಡ್ರಾಮಾ ಮಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಸ್ಥಳೀಯರು ಈತನ ಜತೆಗೆ ಸಹಚರನನ್ನು ತರಾಟೆಗೆ ತೆಗೆದುಕೊಂದ್ದಾರೆ.
ಕುಡಿದ ಮತ್ತಿನಲ್ಲಿ ಏಕಾಏಕಿ ಕಾರ್ನಲ್ಲಿ ಬಂದು ಪೊಲೀಸ್ ಠಾಣೆಗೆ ನುಗ್ಗಿ, ನಾನು ವಕೀಲ ಯಾರು ಏನು ಮಾಡ್ತಿರಿ ಎಂದು ಠಾಣೆಯ ಬಳಿಯಿದ್ದ ಸ್ಥಳೀಯರೊಂದಿಗೆ ಗಲಾಟೆ ಮಾಡಿಕೊಂಡಿದ್ದಾನೆ.
ಅಲ್ಲದೆ ಸಿಪಿಐ, ಪಿಎಸ್ಐ ವಾಹನ ನಿಲ್ಲಿಸುವ ಸ್ಥಳದಲ್ಲಿ ಅಕ್ಷತ್ ತನ್ನ ಕಾರ್ ಪಾರ್ಕಿಂಗ್ ಮಾಡಿದ್ದು, ಅಧಿಕಾರಿಗಳ ಕಾರು ನಿಲ್ಲಿಸಲು ಸ್ಥಳವಿಲ್ಲದ ಕಾರಣ ಠಾಣೆಯ ಹೊರಗೆ ರಸ್ತೆ ಬದಿ ನಿಲ್ಲಿಸಿದ್ದರು. ಬೆಟಗೇರಿ ಪೊಲೀಸ್ ಠಾಣೆ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಏಕವಚನ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪವಿದೆ.
ಇಷ್ಟೆಲ್ಲ ನಡೆದರೂ ಪೊಲೀಸರು ಕೇವಲ ಡ್ರಿಂಕ್ & ಡ್ರೈವ್ ಟೆಸ್ಟ್ ಮಾಡಿ ಕಳುಹಿಸಿದ್ರಾ? ಅಕಸ್ಮಾತ್ ಜನಸಾಮಾನ್ಯರು ಹೀಗೆ ಮಾಡಿದ್ರೆ ಪೊಲೀಸರು ಸುಮ್ಮನೆ ಬಿಡ್ತಿದ್ರಾ? ಅಧಿಕಾರಿ ಸಹೋದರನಿಗೆ ಒಂದು ನ್ಯಾಯ, ಜನ ಸಾಮಾನ್ಯರಿಗೊಂದು ಕಾನೂನಾ? ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ರೂ ಪೊಲೀಸರು ಸುಮ್ಮನಿರೋದಾದ್ರೂ ಯಾಕೆ?
ಇನ್ನು ಈ ಐಪಿಎಸ್ ಅಧಿಕಾರಿ ಸಹೋದರನ ಆಟಾಟೋಪ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
Related

You Might Also Like
KSRTC: ಸರ್ಕಾರ ಸಾರಿಗೆ ನೌಕರರಿಗೆ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಡಲೇ ಬೇಕು- ಏಕೆಂದರೆ ELಗೆ ಶೇ.15ರಷ್ಟು ಹೆಚ್ಚುವರಿ…!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಮಾರ್ಚ್ 2023ರಲ್ಲಿ ಅಂದಿನ ಬಿಜೆಪಿ ಸರ್ಕಾರ 2020 ಜನವರಿ 1ರಿಂದ ಅನ್ವಯವಾಗುವಂತೆ ಘೋಷಣೆ ಮಾಡಿರುವ ಶೇ.15ರಷ್ಟು...
ಎಲ್ಲವೂ ಕೋರ್ಟ್ನಲ್ಲಿ ಇತ್ಯರ್ಥ ಆಗತ್ತೆ: 3.15 ಕೋಟಿ ರೂ. ವಂಚನೆ ಆರೋಪಕ್ಕೆ ಧ್ರುವ ಮ್ಯಾನೇಜರ್ ಸ್ಪಷ್ಟನೆ
ಬೆಂಗಳೂರು: ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ವಿರುದ್ಧ ಈಗ 3.15 ಕೋಟಿ ರೂಪಾಯಿ ವಂಚನೆ ಆರೋಪ ಕೇಳಿ ಬಂದಿದೆ. 2016ರ ಜಗ್ಗು ದಾದ ಸಿನಿಮಾ ನಿರ್ದೇಶಕ ಹಾಗೂ...
ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪ: FIR ದಾಖಲು
ಬೆಂಗಳೂರು: ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ಅವರು ಸಿನಿಮಾ ಮಾಡುವುದಾಗಿ ನಂಬಿಸಿ 3.15 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂಬ ಆರೋಪದಡಿ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ...
KSRTC ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಸಿಬ್ಬಂದಿ ಮಂಜುನಾಥ್ ಅಮಾನತು: ಎಸ್ಪಿ ಆದೇಶ
ಕೂಡ್ಲಿಗಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಕರ್ತವ್ಯ ನಿರತ ಚಾಲಕನ ಮೇಲೆ ಮನಬಂದಂತೆ ಕೂಡ್ಲಿಗಿ ಪೊಲೀಸ್ ಸಿಬ್ಬಂದಿ ಮಂಜುನಾಥ್ ಚಪ್ಪಲಿಯಿಂದ ಹಲ್ಲೆ ಮಾಡಿದ್ದ. ಈ ಸಂಬಂಧ ಇಂದು...
ರಾತ್ರೋರಾತ್ರಿ ಡಾ.ವಿಷ್ಣುವರ್ಧನ್ ಸಮಾಧಿ ತೆರವು- ಅಭಿಮಾನಿಗಳ ಆಕ್ರೋಶ
ಬೆಂಗಳೂರು: ರಾತ್ರೋರಾತ್ರಿ ಅಭಿಮಾನಿಗಳ ವಿರೋಧದ ನಡುವೆಯೂ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಸಮಾಧಿಯನ್ನು ತೆರವುಗೊಳಿಸಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹೈಕೋರ್ಟ್ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನ ರಾತ್ರೋರಾತ್ರಿ...
ವೈ.ರಾಮಕೃಷ್ಣರ ಸೇವೆ-ಹೋರಾಟ ಇಂದಿಗೂ ಸ್ಮರಣೀಯ: ಸಚಿವ ಮುನಿಯಪ್ಪ
ಮೈಸೂರು: ಅನೇಕ ಕ್ಷೇತ್ರಗಳಲ್ಲಿ ತಮ್ಮದೇ ಆದಂತಹ ಛಾಪನ್ನು ವೈ.ರಾಮಕೃಷ್ಣ ಮೂಡಿಸಿದ್ದು, ಅವರ ಸೇವೆ ಮತ್ತು ಹೋರಾಟ ಇಂದಿಗೂ ಸಹ ಸ್ಮರಣೀಯವಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು...
ವಿಜಯಪಥ ವರದಿ ಪರಿಣಾಮ: ವರದಿ ಬಂದ ಅರ್ಥಗಂಟೆಯಲ್ಲಿ ಹಣ ಪಾವತಿ ಸಂಬಂಧ ಲೆಕ್ಕಾಧಿಕಾರಿಗೆ ಟಿಪ್ಪಣಿ ಬರೆದ ಡಿಸಿ
ವಿಜಯಪುರ: KKRTC ವಿಜಯಪುರ: ನಿವೃತ್ತ ನೌಕರನಿಗೆ 29ಲಕ್ಷ ಕೊಡುವಂತೆ ಹೈ ಕೋರ್ಟ್ ತೀರ್ಪು- ಈ ಆದೇಶವನ್ನೇ ಉಲ್ಲಂಘಿಸುತ್ತಿರುವ ಡಿಸಿ! ಎಂಬ ಶೀರ್ಷಿಕೆಯಡಿ ವಿಜಯಪಥ ದಲ್ಲಿ ವರದಿ ಬಂದ ಕೇವಲ...
ಲಾಲ್ಬಾಗ್: ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣರ ಜೀವನ ಚರಿತ್ರೆ ಫಲಪುಷ್ಪಗಳಲ್ಲಿ ಅನಾವರಣ
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಲಾಲ್ಬಾಗ್ನಲ್ಲಿ ಆಯೋಜಿಸಿರುವ 218ನೇ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಅವರ...