CRIMENEWSನಮ್ಮಜಿಲ್ಲೆ

ಕುಡಿದು ಠಾಣೆಗೆ ನುಗ್ಗಿ ಪೊಲೀಸರಿಗೇ ಅವಾಜ್ ಹಾಕಿ ಅಧಿಕಾರಿ ಸಹೋದರನ ರಂಪಾಟ

ವಿಜಯಪಥ ಸಮಗ್ರ ಸುದ್ದಿ

ಗದಗ: ಪೊಲೀಸ್‌ ಅಧಿಕಾರಿ ಸಹೋದರನೊಬ್ಬ ರಾತ್ರಿ ಕುಡಿದ ಮತ್ತಿನಲ್ಲಿ ಪೊಲೀಸ್ ಠಾಣೆಗೆ ನುಗ್ಗಿ, ಪೊಲೀಸರಿಗೆ ಅವಾಜ್ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಕಿರಿಕ್ ಮಾಡಿಕೊಂಡ ಘಟನೆ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಪೊಲೀಸ್ ಠಾಣೆಯಲ್ಲಿ ರೌಡಿ ರೀತಿ ವರ್ತಿಸಿದ ಅಕ್ಷತ್ ಹದ್ದಣ್ಣವರ್‌ ನಿಂದ ಈ ಎಲ್ಲ ರಂಪಾಟ ನಡೆದಿದೆ. ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಅಕ್ಷತ್ ಹಾಗೂ ಸಹಚರನಿಂದ ರಾತ್ರಿಯಿಡೀ ಹೈಡ್ರಾಮಾ ಮಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಸ್ಥಳೀಯರು ಈತನ ಜತೆಗೆ ಸಹಚರನನ್ನು ತರಾಟೆಗೆ ತೆಗೆದುಕೊಂದ್ದಾರೆ.

ಕುಡಿದ ಮತ್ತಿನಲ್ಲಿ ಏಕಾಏಕಿ ಕಾರ್‌ನಲ್ಲಿ ಬಂದು ಪೊಲೀಸ್ ಠಾಣೆಗೆ ನುಗ್ಗಿ, ನಾನು ವಕೀಲ ಯಾರು ಏನು ಮಾಡ್ತಿರಿ ಎಂದು ಠಾಣೆಯ ಬಳಿಯಿದ್ದ ಸ್ಥಳೀಯರೊಂದಿಗೆ ಗಲಾಟೆ ಮಾಡಿಕೊಂಡಿದ್ದಾನೆ.

ಅಲ್ಲದೆ ಸಿಪಿಐ, ಪಿಎಸ್‌ಐ ವಾಹನ ನಿಲ್ಲಿಸುವ ಸ್ಥಳದಲ್ಲಿ ಅಕ್ಷತ್ ತನ್ನ ಕಾರ್ ಪಾರ್ಕಿಂಗ್ ಮಾಡಿದ್ದು, ಅಧಿಕಾರಿಗಳ ಕಾರು ನಿಲ್ಲಿಸಲು ಸ್ಥಳವಿಲ್ಲದ ಕಾರಣ ಠಾಣೆಯ ಹೊರಗೆ ರಸ್ತೆ ಬದಿ ನಿಲ್ಲಿಸಿದ್ದರು. ಬೆಟಗೇರಿ ಪೊಲೀಸ್ ಠಾಣೆ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಏಕವಚನ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪವಿದೆ.

ಇಷ್ಟೆಲ್ಲ ನಡೆದರೂ ಪೊಲೀಸರು ಕೇವಲ ಡ್ರಿಂಕ್ & ಡ್ರೈವ್ ಟೆಸ್ಟ್ ಮಾಡಿ ಕಳುಹಿಸಿದ್ರಾ? ಅಕಸ್ಮಾತ್ ಜನಸಾಮಾನ್ಯರು ಹೀಗೆ ಮಾಡಿದ್ರೆ ಪೊಲೀಸರು ಸುಮ್ಮನೆ ಬಿಡ್ತಿದ್ರಾ? ಅಧಿಕಾರಿ ಸಹೋದರನಿಗೆ ಒಂದು ನ್ಯಾಯ, ಜನ ಸಾಮಾನ್ಯರಿಗೊಂದು ಕಾನೂನಾ? ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ರೂ ಪೊಲೀಸರು ಸುಮ್ಮನಿರೋದಾದ್ರೂ ಯಾಕೆ?

ಇನ್ನು ಈ ಐಪಿಎಸ್ ಅಧಿಕಾರಿ ಸಹೋದರನ ಆಟಾಟೋಪ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ