CRIMENEWSನಮ್ಮಜಿಲ್ಲೆ

ಕುಡಿದು ಠಾಣೆಗೆ ನುಗ್ಗಿ ಪೊಲೀಸರಿಗೇ ಅವಾಜ್ ಹಾಕಿ ಅಧಿಕಾರಿ ಸಹೋದರನ ರಂಪಾಟ

ವಿಜಯಪಥ ಸಮಗ್ರ ಸುದ್ದಿ

ಗದಗ: ಪೊಲೀಸ್‌ ಅಧಿಕಾರಿ ಸಹೋದರನೊಬ್ಬ ರಾತ್ರಿ ಕುಡಿದ ಮತ್ತಿನಲ್ಲಿ ಪೊಲೀಸ್ ಠಾಣೆಗೆ ನುಗ್ಗಿ, ಪೊಲೀಸರಿಗೆ ಅವಾಜ್ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಕಿರಿಕ್ ಮಾಡಿಕೊಂಡ ಘಟನೆ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಪೊಲೀಸ್ ಠಾಣೆಯಲ್ಲಿ ರೌಡಿ ರೀತಿ ವರ್ತಿಸಿದ ಅಕ್ಷತ್ ಹದ್ದಣ್ಣವರ್‌ ನಿಂದ ಈ ಎಲ್ಲ ರಂಪಾಟ ನಡೆದಿದೆ. ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಅಕ್ಷತ್ ಹಾಗೂ ಸಹಚರನಿಂದ ರಾತ್ರಿಯಿಡೀ ಹೈಡ್ರಾಮಾ ಮಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಸ್ಥಳೀಯರು ಈತನ ಜತೆಗೆ ಸಹಚರನನ್ನು ತರಾಟೆಗೆ ತೆಗೆದುಕೊಂದ್ದಾರೆ.

ಕುಡಿದ ಮತ್ತಿನಲ್ಲಿ ಏಕಾಏಕಿ ಕಾರ್‌ನಲ್ಲಿ ಬಂದು ಪೊಲೀಸ್ ಠಾಣೆಗೆ ನುಗ್ಗಿ, ನಾನು ವಕೀಲ ಯಾರು ಏನು ಮಾಡ್ತಿರಿ ಎಂದು ಠಾಣೆಯ ಬಳಿಯಿದ್ದ ಸ್ಥಳೀಯರೊಂದಿಗೆ ಗಲಾಟೆ ಮಾಡಿಕೊಂಡಿದ್ದಾನೆ.

ಅಲ್ಲದೆ ಸಿಪಿಐ, ಪಿಎಸ್‌ಐ ವಾಹನ ನಿಲ್ಲಿಸುವ ಸ್ಥಳದಲ್ಲಿ ಅಕ್ಷತ್ ತನ್ನ ಕಾರ್ ಪಾರ್ಕಿಂಗ್ ಮಾಡಿದ್ದು, ಅಧಿಕಾರಿಗಳ ಕಾರು ನಿಲ್ಲಿಸಲು ಸ್ಥಳವಿಲ್ಲದ ಕಾರಣ ಠಾಣೆಯ ಹೊರಗೆ ರಸ್ತೆ ಬದಿ ನಿಲ್ಲಿಸಿದ್ದರು. ಬೆಟಗೇರಿ ಪೊಲೀಸ್ ಠಾಣೆ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಏಕವಚನ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪವಿದೆ.

ಇಷ್ಟೆಲ್ಲ ನಡೆದರೂ ಪೊಲೀಸರು ಕೇವಲ ಡ್ರಿಂಕ್ & ಡ್ರೈವ್ ಟೆಸ್ಟ್ ಮಾಡಿ ಕಳುಹಿಸಿದ್ರಾ? ಅಕಸ್ಮಾತ್ ಜನಸಾಮಾನ್ಯರು ಹೀಗೆ ಮಾಡಿದ್ರೆ ಪೊಲೀಸರು ಸುಮ್ಮನೆ ಬಿಡ್ತಿದ್ರಾ? ಅಧಿಕಾರಿ ಸಹೋದರನಿಗೆ ಒಂದು ನ್ಯಾಯ, ಜನ ಸಾಮಾನ್ಯರಿಗೊಂದು ಕಾನೂನಾ? ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ರೂ ಪೊಲೀಸರು ಸುಮ್ಮನಿರೋದಾದ್ರೂ ಯಾಕೆ?

ಇನ್ನು ಈ ಐಪಿಎಸ್ ಅಧಿಕಾರಿ ಸಹೋದರನ ಆಟಾಟೋಪ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆ ಎಂಡಿಗಳಿಗೆ ಪತ್ರ ಬರೆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ