NEWSನಮ್ಮಜಿಲ್ಲೆನಮ್ಮರಾಜ್ಯ

ಫೆ.27ರಂದು ಸಾರಿಗೆ ನೌಕರರ ವೇತನ ಪರಿಷ್ಕರಣೆ ಸಂಬಂಧ ಚರ್ಚೆ: ಜಂಟಿ ಕ್ರಿಯಾಸಮಿತಿ ಪದಾಧಿಕಾರಿಗಳಿಗೆ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿಗಳು ನಾಲ್ಕೂ ನಿಗಮಗಳ ಅಧಿಕಾರಿಗಳು ಮತ್ತು ನೌಕರರ ವೇತನ ಪರಿಷ್ಕರಣೆ ಸಂಬಂಧ ಇದೇ ಫೆ.27ರಂದು ಸಭೆ ಕರೆದಿದ್ದಾರೆ.

ವೇತನ ಪರಿಷ್ಕರಣೆ ಸಂಬಂಧ ಚರ್ಚಿಸಲು ನಿಗಮದ ಸೂಕ್ತಾಧಿಕಾರಿಗಳ ಆದೇಶ ಮೇರೆಗೆ ಈ ಸಭೆ ನಡೆಸಲಾಗುತ್ತಿರುವುದಾಗಿ  ಶನಿವಾರ ಮಾಹಿತಿ ನೀಡಿರುವ ಅಧಿಕಾರಿಗಳು, ದಿನಾಂಕ 21.02.2023 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿರುವ ಬೇಡಿಕೆಯಾದ 4 ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಸಂಬಂಧ ಚರ್ಚಿಸಲು ದಿನಾಂಕ ನಿಗದಿಪಡಿಸಲಾಗಿದೆ.

ಅಂದರೆ ಇದೇ ಫೆ. 27 ರಂದು ಅಪರಾಹ್ನ 3 ಗಂಟೆಗೆ ಕರಾರಸಾ ನಿಗಮದ ಕೇಂದ್ರ ಕಚೇರಿ ಸಭಾಂಗಣದಲ್ಲಿ ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಹಾಗೂ BMTC, NWKRTC, KKRTC ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರ ನೇತೃತ್ವದಲ್ಲಿ ಜಂಟಿ ಕ್ರಿಯಾ ಸಮಿತಿಯ ಪದಾಧಿಕಾರಿಗಳೊಂದಿಗೆ ಸಭೆಯನ್ನು ನಿಗದಿಪಡಿಸಲಾಗಿದ್ದು, ಈ ಸಭೆಗೆ ಜಂಟಿ ಕ್ರಿಯಾ ಸಮಿತಿಯ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಹಾಜರಾಗುವಂತೆ ಕೋರಿದೆ ಎಂದು ನಿಗಮದ ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಜಂಟಿ ಕ್ರಿಯಾ ಸಮಿತಿಯ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳ ವಿಳಾಸವಾದ ಕರಾರ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಂ.6, ಸಿರೂರ್ ಪಾರ್ಕ್ ರಸ್ತೆ, ಶೇಷಾದ್ರಿಪುರಂ, ಬೆಂಗಳೂರು -560020ಕ್ಕೆ ಸಭೆ ಸೂಚನಾ ಪತ್ರವನ್ನು ಕಳುಹಿಸಿದ್ದಾರೆ.

ಕಳೆದ 2016ರ ಜನವರಿ 1ರಂದು ವೇತನ ಪರಿಷ್ಕರಣೆ ಆಗಿದೆ. ಆ ಬಳಿಕ ಮತ್ತೆ ಈವರೆಗೂ ವೇತನ ಹೆಚ್ಚಳವಿಲ್ಲದೆ ನೌಕರರು ಒಂದು ರೀತಿ ಕತ್ತೆಯಂತೆ ದುಡಿಯುತ್ತಿದ್ದಾರೆ. ಆದರೆ, ಕಳೆದ 2020ರ ಜನವರಿ 1ರಿಂದಲೇ ವೇತನ ಹೆಚ್ಚಳ ಮಾಡಬೇಕಿರುವ ಸರ್ಕಾರ ಈವರೆಗೂ ಮಾಡದೆ ಮೀನಮೇಷ ಎಣಿಸಿಕೊಂಡು ಬಂದಿದ್ದು ಚುನಾವಣೆ ಘೋಷಣೆಗೆ ಬೆರಳೆಣಿಕೆಯಷ್ಟು ದಿನಗಳಿರುವಾಗ ಕೊಟ್ಟ ಮಾತನ್ನು ತಪ್ಪಿರುವ ಸರ್ಕಾರ ಮತ್ತೆ ವೇತನ ಪರಿಷ್ಕರಣೆ ಸಂಬಂಧ ಸಭೆ ಕರೆದು ಚರ್ಚಿಸುವುದಾಗಿ ತಿಳಿಸಿದೆ.

ಈ ರೀತಿ ಹತ್ತಾರು ಸಭೆಗಳನ್ನು ನಾಲ್ಕೂ ನಿಗಮಗಳ ಎಂಡಿಗಳು ಮತ್ತು ಉನ್ನತ ಅಧಿಕಾರಿಗಳ ಮಟ್ಟದಲ್ಲಿ  ಸಭೆ ನಡೆಸಿ  ಸರ್ಕಾರಕ್ಕೆ ಅಲ್ಲಿ ನಡೆದ ಚರ್ಚೆ, ತೆಗೆದುಕೊಂಡ ತೀರ್ಮಾನಗಳ ಬಗ್ಗೆ ಎಲ್ಲವನ್ನು ಸಲ್ಲಿಸಲಾಗಿದೆ. ಆದರೆ, ಈವರೆಗೂ ನೌಕರರ ಸಂಘಟನೆಗಳನ್ನು ಮಾತ್ರ ಕರೆಯದಿದ್ದ ಸರ್ಕಾರ ಈಗ ಸಭೆ ಕರೆದಿದೆ.

ಈ ಸಭೆಯಲ್ಲಿ ವೇತನ ಪರಿಷ್ಕರಣೆ ಅಂದರೆ ನೌಕರರಿಗೆ ಬೇಡವಾಗಿರುವ ಅಗ್ರಿಮೆಂಟ್‌ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಂಡು ತಾನೆ 2020ರ ಡಿಸೆಂಬರ್‌ನಲ್ಲಿ ನೌಕರರಿಗೆ ಲಿಖಿತವಾಗಿ ಕೊಟ್ಟಿರುವ ಮಾತನ್ನು ತಪ್ಪುತ್ತದೆಯೋ ಇಲ್ಲ ಮಾತುಕೊಟ್ಟಂತೆ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಅಂದರೆ ವೇತನ ಆಯೋಗ ಮಾದರಿಯಲ್ಲಿ ಕೊಡುವ ಮೂಲಕ ತನ್ನ ಮಾತನ್ನು ಉಳಿಸಿಕೊಳ್ಳುತ್ತದೆಯೋ ಎಂಬುದನ್ನು ಕಾದು ನೋಡಬೇಕಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ