NEWSನಮ್ಮಜಿಲ್ಲೆನಮ್ಮರಾಜ್ಯ

ಜ.24ರಂದು ದೃಶ್ಯ ಮಾಧ್ಯಮಗಳು ಒಂದು ಸರ್ಕಾರ ಅಥವಾ ಪಕ್ಷದ ಪರ ನಿಂತ ಹಿನ್ನೆಲೆ ದುರ್ಬಲಗೊಳ್ಳಿತ್ತಿದೆ ಜನತಂತ್ರ ವ್ಯವಸ್ಥೆ – ವಿಮರ್ಸಗೋಷ್ಠಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮವನ್ನು ನಾಲ್ಕನೇ ಆಧಾರ ಸ್ತಂಭವೆಂದು ಪರಿಗಣಿಸಲಾಗಿದೆ. ಹೀಗಾಗಿ ಶಾಸಕಾಂಗ, ಕಾರ್ಯಾಂಗ, ಮತ್ತು ನ್ಯಾಯಾಂಗದ ಕೆಲಸ ಕಾರ್ಯಗಳ ಬಗ್ಗೆ ವಸ್ತುನಿಷ್ಠವಾಗಿ ವರದಿ ಮಾಡುವ ಮೂಲಕ ಸರ್ಕಾರ ಮತ್ತು ಜನಸಾಮಾನ್ಯರ ನಡುವೆ ಮಾಧ್ಯಮಗಳು ಸೆತುವೆಯಂತೆ ಕಾರ್ಯನಿರ್ವಹಿಸಬೇಕೆಂಬುದು ಪ್ರಜಾಪ್ರಭುತ್ವದ ಪ್ರತಿಯೊಬ್ಬ ನಾಗರೀಕನ ನಿರೀಕ್ಷೆ.

ಇಂದು ನಗರದಲ್ಲಿ ಆಯೋಜಿಸಿದ್ದ ಮಾಧ್ಯಮ ಹಾಗೂ ಜನತಂತ್ರ ವ್ಯವಸ್ಥೆ ಕುರಿತು ವಿಚಾರ ವಿಮರ್ಸಗೋಷ್ಠಿಯಲ್ಲಿ ಈ ಬಗ್ಗೆ ಹಲವರು ವಿಚಾರ ವಿನಿಯಮ ಮಾಡಿಕೊಂಡಿದ್ದು, ಈ ವೇಳೆ ಶಾಸಕಾಂಗ ಮತ್ತು ಕಾರ್ಯಾಂಗ ಜನರ ಹಿತಾಸಕ್ತಿಯನ್ನು ಕಡೆಗಣಿಸಿ ದಿಕ್ಕು ತಪ್ಪಿದಾಗ ಮಾಧ್ಯಮಗಳು ಈ ವ್ಯವಸ್ಥೆಗಳನ್ನು ಎಚ್ಚರಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಾದ ಆದ್ಯ ಕರ್ತವ್ಯವನ್ನು ಹೊಂದಿದೆ.

ಆದರೆ ಇತ್ತೀಚಿನ ದಿನಗಳಲ್ಲಿ ಮಾಧ್ಯಮ ಅದರಲ್ಲೂ ವಿಶೇಷವಾಗಿ ದೃಶ್ಯ ಮಾಧ್ಯಮಗಳು ಒಂದು ಸರ್ಕಾರ ಅಥವಾ ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿವೆ ಎಂಬ ಆರೋಪ ದೊಡ್ಡ ಮಟ್ಟದಲ್ಲಿ ಕೇಳಿ ಬರುತ್ತಿದೆ. ಶಾಸಕಾಂಗ ಮತ್ತು ಕಾರ್ಯಾಂಗದ ಆಡಳಿತದಲ್ಲಿ ದುರಾಡಳಿತ ಜನತಂತ್ರ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿದೆ.

ಈ ಬಗೆಯ ಅಪವಿತ್ರ ಮೈತ್ರಿ ಜನತಂತ್ರ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿದ್ದು ಪ್ರಜಾಪ್ರಭುತ್ವ ಇಂದು ಅಪಾಯದ ಅಂಚಿನಲ್ಲಿದೆ ಎಂಬ ಚರ್ಚೆಗಳು ಕಳೆದ ಹಲವು ವರ್ಷಗಳಿಂದ ನಡೆಯುತ್ತಿವೆ. ಈ ವಿಷಯಗಳ ಬಗ್ಗೆ ಮುಕ್ತವಾಗಿ ಮತ್ತು ವಸ್ತುನಿಷ್ಠವಾಗಿ ಚರ್ಚಿಸಿ ವಿಮರ್ಶೆ ಮಾಡಬೇಕಾದ ಕಾಲ ಇಂದು ನಮ್ಮ ಮುಂದಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ನೆಲ ಜಲ ಸಂರಕ್ಷಣ ಸಮಿತಿಯು ಒಂದು ಮುಕ್ತ ಚರ್ಚೆಯನ್ನು ಸಂಘಟಿಸುವ ಮೂಲಕ ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವವರನ್ನು, ನ್ಯಾಯಾಂಗದ ಪ್ರತಿನಿಧಿಗಳನ್ನು, ಸಾಮಾಜಿಕ ಹೋರಾಟಗಾರರನ್ನು ಮತ್ತು ಜನಸಾಮಾನ್ಯರನ್ನು ಒಟ್ಟಿಗೆ ಸೇರಿಸಿ ಚರ್ಚಿಸಲು ದಿನಾಂಕ 24.01.2024 ರ ಗುರುವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಶಾಸಕರ ಭವನ ಎರಡರಲ್ಲಿ ವಿಚಾರಗೋಷ್ಠಿಯನ್ನು ಏರ್ಪಡಿಸಿದೆ.

ಈ ಕಾರ್ಯಕ್ರಮ ಆಯೋಜಕರಾದ ರೈತ ಮುಖಂಡ ಕುರುಬೂರು ಶಾಂತಕುಮಾರ್,   ಮುಖ್ಯಮಂತ್ರಿ ಚಂದ್ರು, ಅಭಿವೃದ್ಧಿ ಶಿಕ್ಷಣ ತಜ್ಞರು ಡಾ.ನಿರಂಜನಾರಾಧ್ಯ ವಿ.ಪಿ, ಗುರುದೇವ ನಾರಾಯಣ್, ಯೋಗಾನಂದ ಅಂದು ಎಲ್ಲರೂ ತಪ್ಪದೆ ಭಾಗವಹಿಸಿ ಎಂದು ಕೋರಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...