ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸುವ ಆಹಾರ ಧಾನ್ಯಗಳ ಗುಣಮಟ್ಟವನ್ನು ಕಾಪಾಡಬೇಕು, ಲೋಪವೆಸಗಿದ್ದಲ್ಲಿ ಅಧಿಕಾರಿಗಳ ವಿರುದ್ಧ ಕಠಣಕ್ರಮ ತೆಗೆದುಕೊಳ್ಳಲಾಗುವುದು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಮುನಿಯಪ್ಪ ಅವರು ಸೋಮವಾರ ವಿಧಾನ ಸೌಧದಲ್ಲಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರು, ಜಿಲ್ಲೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಖರೀದಿ ಎಜೆನ್ಸಿ ಮುಖ್ಯಸ್ಥರೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ ತಿಳಿಸಿದರು.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ(MSP) ರೈತರಿಂದ ಖರೀದಿಸುವ ರಾಗಿ, ಜೋಳ, ಭತ್ತದ ಗುಣಮಟ್ಟವನ್ನು ಕಾಪಾಡಬೇಕು. ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯೇ MSPಯ ಅಧ್ಯಕ್ಷರಿದ್ದು ಆಹಾರ ಧಾನ್ಯಗಳು ಗುಣಮಟ್ಟದಲ್ಲಿ ವ್ಯತ್ಯಾಸವಿದ್ದಲ್ಲಿ ಅಧಿಕಾರಿಗಳು ಸ್ಥಳದಲ್ಲಿಯೇ ಅವರ ಮೇಲೆ ಕ್ರಮ ತೆಗೆದುಕೊಳ್ಳುಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರತಿ ಕ್ವಿಂಟಾಲ್ ರಾಗಿಗೆ 4,290 ರೂ.ಗಳನ್ನು ಹಾಗೂ ಪ್ರತಿ ಕ್ವಿಂಟಾಲ್ ಹೈಬ್ರೀಡ್ ಜೋಳಕ್ಕೆ 3,371 ಹಾಗೂ ಮಾಲದಂಡಿ ಜೋಳ 3,421, ಭತ್ತಕ್ಕೆ ಸಾಮಾನ್ಯವಾಗಿ ಪ್ರತಿ ಕ್ವಿಂಟಾಲ್ 2,300 ಗ್ರೇಡ್ ಎ2,320 ದರ ನಿಗದಿಯಾಗಿದ್ದು, ಈ ದರದಲ್ಲಿ ರೈತರಿಂದ ಖರೀದಿಸಿ ಅವರಿಗೆ ಸರಿಯಾದ ಸಮಯಕ್ಕೆ ಹಣ ಸಂದಾಯ ಮಾಡಬೇಕು ಎಂದರು.
ಜಿಲ್ಲಾಧಿಕಾರಿಗಳು ಖರೀದೀಕೇಂದ್ರಗಳ ಸ್ಥಳಗಳಲ್ಲಿ ರೈತರಿಗೆ ಕುಡಿಯುವ ನೀರು ಹಾಗೂ ಶಾಮಿಯಾನದ ವ್ಯವಸ್ಥೆಯನ್ನು ಕಲ್ಪಿಸಬೇಕು. ಕಾರಣ ಮಾರ್ಚ್ ತಿಂಗಳಲ್ಲಿ ಹೆಚ್ಚಿನ ಬಿಸಿಲಿರುವುದರಿಂದ ರೈತರಿಗೆ ಅನುಕೂಲಕರವಾದ ವಾತಾವರಣ ನಿರ್ಮಿಸಬೇಕು ಎಂದರು.
ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿಯನ್ನು ನೀಡುವುದರೊಂದಿಗೆ ಫೆಬ್ರವರಿ ತಿಂಗಳ 5 ಕೆಜಿ ಅಕ್ಕಿಯನ್ನು ಸೇರಿಸಿ 15 ಕೆಜಿ ಅಕ್ಕಿ ವಿತರಿಸಲು ತೀರ್ಮಾನಿಸಿದ್ದು ಅರ್ಹ ಫಲಾನುಭವಿಗಳಿಗೆ ವಿತರಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳೇ ನೇರವಾಗಿ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ಮಾಡಬೇಕು. ರಾಗಿಯನ್ನು ಖರೀದಿಸುವ ಕೇಂದ್ರಗಳಲ್ಲಿ ತೂಕದಲ್ಲಿ ವ್ಯತ್ಯಾಸಗಳು ಕಾಣದಂತೆ ನಿಗಾವಹಿಸಬೇಕು. ಲೋಪವೆಸಗಿದ್ದಲ್ಲಿ ಅಧಿಕಾರಿಗಳನ್ನು ಸ್ಥಳದಲ್ಲಿಯೇ ಅಮಾನತು ಮಾಡಬೇಕು ಎಂದು ಜಿಲ್ಲಾಧಿಕಾರಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್, ಆಯುಕ್ತರಾದ ವಾಸಿ ರೆಡ್ಡಿ ವಿಜಯ ಜೋತ್ನಾ, ನಿಗಮ ನಿರ್ದೇಶಕ ಚಂದ್ರಕಾತ್, ಸಚಿವರ ಆಪ್ತ ಕಾರ್ಯದರ್ಶಿ ನಟರಾಜ್, ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕರಾದ ಎಂ.ಎಸ್.ಎನ್. ಬಾಬು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Related

You Might Also Like
ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ನ್ಯಾ.ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಬಖ್ರು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ...
BMTC ನೌಕರರಿಗೆ ಕಿರುಕುಳ: ಸಮಸ್ಯೆ ಕೇಳದ ಘಟಕ- 20ರ ಡಿಎಂ- ಸರ್ವಾಧಿಕಾರಿಯ ವರ್ತನೆ
2 ಗಂಟೆ ಬಳಿಕ ತನ್ನ ಕಚೇರಿ ಬಾಗಿಲು ಹಾಕಿಕೊಂಡು ಚೇಳಗಳ ಜತೆ ಹರಟೆ ನೌಕರರ ಸಮಸ್ಯೆ ಬಗೆಹರಿಸದೆ ದರ್ಪ ಮೆರೆಯುತ್ತಿರುವ ಕಿರಾತಕ ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ...
BMTC: ಹೋಟೆಲ್ಗೆ ನುಗ್ಗಿದ ಎಲೆಕ್ಟ್ರಿಕ್ ಬಸ್, ಓರ್ವ ಯುವತಿ ಸಾವು, ಮೂವರಿಗೆ ಗಾಯ
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಎಂದು ಕರೆಸಿಕೊಳ್ಳುವ ಬೆಂಗಳೂರು ಮಹಾನಗರ ಸಾರಿಗೆಯ ಎಲೆಕ್ಟ್ರಿಕ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಫುಟ್ಪಾತ್ಗೆ ನುಗ್ಗಿದ ಪರಿಣಾಮ ಯುವತಿಯೋರ್ವರು ಮೃತಪಪ್ಟಿದ್ದು, ಫುಟ್ಪಾತ್ ಮೇಲೆ...
ಸಾರಿಗೆ ನೌಕರರು ಮುಷ್ಕರ ಹೂಡುವುದಾಗಿ ಕೊಟ್ಟ ಮುಷ್ಕರದ ನೋಟಿಸ್ ಸಂಬಂಧ ನಿರ್ದೇಶನ ಕೋರಿ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಆ.5ರಿಂದ...
ಸಾರಿಗೆ ನೌಕರರ ಮುಷ್ಕರದ ಬಗ್ಗೆ ನನ್ನ ಅಭಿಪ್ರಾಯ-ಅನಿಸಿಕೆಗಳು
ಸಾರಿಗೆ ಮುಷ್ಕರ ಎಂಬುದು ಎಲ್ಲಾ ಅಧಿಕಾರಿಗಳು ಮತ್ತು ನೌಕರ ಸಿಬ್ಬಂದಿಗಳ ವೇತನಕ್ಕೆ ಸಂಬಂಧಪಟ್ಟಿರುವುದಾಗಿರುತ್ತದೆ.ಎಲ್ಲರೂ ಒಗ್ಗಟ್ಟಿನಿಂದ ಒಟ್ಟಾಗಿ ಮುಷ್ಕರ ಮಾಡಬೇಕಾಗಿದೆ. ಆದರೆ ನಮ್ಮ ನಿಗಮದಲ್ಲಿ ಅಧಿಕಾರಿಗಳು ಮತ್ತು ಆಡಳಿತ...
ಡಿ.31ರವರೆಗೆ ಸಾರಿಗೆ ನೌಕರರು ಮುಷ್ಕರ ಮಾಡದಂತೆ ಎಸ್ಮಾಜಾರಿ ಮಾಡಿದ ಸರ್ಕಾರ- ಎಸ್ಮಾ ಜಾರಿ ಮಾಡಿದರೆ ಮುಷ್ಕರಕ್ಕೆ ಅವಕಾಶವಿಲ್ಲವೇ? ತಜ್ಞರ ಹೇಳಿಕೆ ಏನು?
ಬೆಂಗಳೂರು: ತಮ್ಮ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ಬಾಗಿಲು ಬಡಿದು ಸುಸ್ತಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಸಿಬ್ಬಂದಿ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಜುಲೈ 29ರಿಂದ...
KSRTC ನೌಕರರ ವೇತನ ಹೆಚ್ಚಳ ಸಂಬಂಧ ಉಪವಾಸ ಸತ್ಯಾಗ್ರಹ ಮಾಡುವ ಕುರಿತು ಜು.18ರಂದು ಸುದ್ದಿಗೋಷ್ಠಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜು.29ರಿಂದ ಒಕ್ಕೂಟದಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವ...
ಜು.29ರೊಳಗೆ KSRTC ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಸದಿದ್ದರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ: ಎಂಡಿಗೆ ಒಕ್ಕೂಟ ಮನವಿ
ಬೆಂಗಳೂರು: ಇಲ್ಲಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಇದೇ ಜುಲೈ...
ಬೀಡನಹಳ್ಳಿ: ಸಂಭ್ರಮದ ಚಾಮುಂಡೇಶ್ವರಿ ವರ್ಧಂತಿ – ಭಕ್ತರಿಗೆ ಅನ್ನಸಂತರ್ಪಣೆ
ಮೈಸೂರು: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿಬೆಟ್ಟದಲ್ಲಿ ಇಂದು (ಜು.17) ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬೀಡನಹಳ್ಳಿ ಗ್ರಾಮದ ಚಾಮುಂಡೇಶ್ವರಿ ದೇವಸ್ಥಾನದಲ್ಲೂ ಪೂಜಾ ಕೈಂಕರ್ಯಗಳು...