NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ ವೇತನ ಹೆಚ್ಚಳ ಸಂಬಂಧ ಸರ್ವ ಸಂಘಟನೆಗಳೊಂದಿಗೆ ಒಂದೇ ವೇದಿಕೆಯಡಿ ಸಭೆ ಆಯೋಜಿಸಿ: ಸಾರಿಗೆ ಸಚಿವರಿಗೆ ಬಿಎಂಎಸ್‌ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಬರಬೇಕಿರುವ 38 ತಿಂಗಳ ವೇತನ ಹಿಂಬಾಕಿ ಮತ್ತು 01.01.2024 ರಿಂದ ಜಾರಿಯಾಗಬೇಕಿರುವ ವೇತನ ಪರಿಷ್ಕರಣೆ ಸಂಬಂಧ ಸರ್ವ ಸಂಘಟನೆಗಳೊಂದಿಗೆ ಒಂದೇ ವೇದಿಕೆಯಡಿ ಸಭೆಯನ್ನು ಆಯೋಜಿಸಬೇಕು ಎಂದು ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್‌ ಸಂಘ ಒಕ್ಕೂಟದ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ.

ಈ ಸಂಬಂಧ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್‌ ಪಾಷ ಅವರಿಗೆ ನ.27ರಂದು ಮನವಿ ಸಲ್ಲಿಸಿರುವ ಒಕ್ಕೂಟದ ರಾಜ್ಯಾಧ್ಯಕ್ಷ ಸುರೇಶ್‌ ಎಸ್‌.ನಾಡಿಗೇರ್‌ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್‌.ಬಿ. ದೊಡ್ಡಗೌಡನವರ ಮನವಿ ಸಲ್ಲಿಸಿದ್ದಾರೆ.

ಡಿ.13ರಂದು ಪ್ರತ್ಯೇಕವಾಗಿ ಸಭೆ ನಿಗದಿಪಡಿಸುವುದನ್ನು ಮಾರ್ಪಡಿಸಿ ಸರ್ವ ಸಂಘಟನೆಗಳೊಂದಿಗೆ ಒಂದೇ ವೇದಿಕೆಯಡಿ ಸಭೆ ಆಯೋಜಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಳೆದ ನ.26 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿದಂತೆ ಈ ವಿಷಯಕ್ಕೆ ಸಂಬಂಧಿಸಿದಂತೆ ನಾಲ್ಕೂ ಸಾರಿಗೆ ನಿಗಮಗಳ ಸಮಸ್ತ ನೌಕರರಿಗೆ ಸಿಗಬೇಕಿರುವ 38 ತಿಂಗಳ ವೇತನ ಹಿಂಬಾಕಿ ಮತ್ತು 01.01.2024 ರಿಂದ ಜಾರಿಯಾಗಬೇಕಿರುವ ವೇತನ ಪರಿಷ್ಕರಣೆ ಸಂಬಂಧ ರಾಜ್ಯ ಸರ್ಕಾರ / ಆಡಳಿತ ವರ್ಗ ನೌಕರರ ಸಂಘಟನೆಗಳನ್ನು ಎರಡು ಗುಂಪುಗಳಾಗಿ ವಿಭಜಿಸಿ ಪ್ರತ್ಯೇಕವಾಗಿ ಸಭೆಗಳನ್ನು ನಡೆಸುತ್ತಿರುವುದಿಂದ ಈವರೆಗೂ ಒಮ್ಮತದ ನಿರ್ಧಾರಕ್ಕೆ ಬರಲಾಗಿಲ್ಲ.

ಅಲ್ಲದೆ ಸಾರಿಗೆ ನೌಕರರ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಾಲ್ಕೂ ಬಾರಿ ಸಭೆ ನಡೆಸಿದರೂ ನೌಕರರ ಸಮಸ್ಯೆ ಬಗೆಹರಿಯದಿರುವುದು ಅತ್ಯಂತ ವಿಷಾದನೀಯ ಸಂಗತಿಯಾಗಿದೆ.

ಆದ್ದರಿಂದ, 38 ತಿಂಗಳ ವೇತನ ಹಿಂಬಾಕಿ ಮತ್ತು 01.01.2024 ರಿಂದ ಜಾರಿಗೊಳಿಸಬೇಕಾಗಿರುವ ವೇತನ ಪರಿಷ್ಕರಣೆ ಸಂಬಂಧ ಡಿ. 13ರಂದು ಪ್ರತ್ಯೇಕವಾಗಿ ಸಭೆ ನಿಗದಿಪಡಿಸದೆ ಸಮಸ್ತ ಸಾರಿಗೆ ನೌಕರರ ಹಿತದೃಷ್ಟಿಯಿಂದ ಅದನ್ನು ಮಾರ್ಪಡಿಸಿ ಸರ್ವ ಸಂಘಟನೆಗಳೊಂದಿಗೆ ಒಂದೇ ವೇದಿಕೆಯಡಿ ಸಭೆ ನಡೆಸಿ ಸಮಸ್ಯೆ ಇತ್ಯರ್ಥಪಡಿಸಬೇಕು ಎಂದು ಮನವಿ ಮಾಡಿದ್ದಾರೆ.

Megha
the authorMegha

Leave a Reply

error: Content is protected !!
Latest news
KKRTC: 26 ತಿಂಗಳ ಹಿಂಬಾಕಿ ಪಾವತಿಸಲು 3ದಿನದೊಳಗೆ ನೌಕರರ ಮಾಹಿತಿ ನೀಡಿ- ನಿಗಮದ ಡಿಸಿಗಳಿಗೆ ಲೆಕ್ಕಾಧಿಕಾರಿ ಆದೇಶ ಜನಗಣತಿ ಕಾರ್ಯಕ್ಕೆ ಗೈರಾದ ಸಿಬ್ಬಂದಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ: ಆಯುಕ್ತ ರಮೇಶ್ ಎಚ್ಚರಿಕೆ ಸಿದ್ದಾರ್ಥ ಬಡಾವಣೆಯ ಮನೆಯೊಂದಕ್ಕೆ ನುಗ್ಗಿದ ಚಿರತೆ: ಪ್ರಾಣದ ಹಂಗು ತೊರೆದು ಅಮ್ಮನ ರಕ್ಷಿಸಿದ ಮಗಳು ಸಾರಿಗೆ ನೌಕರರ ಎಲ್ಲ ಸಂಘಟನೆಯವರು ಒಂದಾಗಿ ನೌಕರರಿಗೆ ಸಮಾನ ವೇತನ ಕೊಡಿಸಲು ಮುಂದಾಗಿ: ನೌಕರನ ಮನವಿ ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಸರ್ಕಾರವು ಕಬ್ಬು ಬೇಸಾಯದಲ್ಲಿ ಎಐ ತಂತ್ರಜ್ಞಾನ ಜಾರಿಗೆ ತರಲಿ: ಕುರುಬೂರು ಶಾಂತಕುಮಾರ್ ಹುಚ್ಚಮ್ಮ ದೇವಿಯ 650 ಕುರಿಗಳ ಮೆರವಣಿಗೆ, 12 ಟನ್ ಮಟನ್ ಸಾರು: ಇತಿಹಾಸ ನಿರ್ಮಿಸಿದ ಲಕ್ಷಕ್ಕೂ ಹೆಚ್ಚು ಭಕ್ತರಿಗೆ ಅನ್ನ... KSRTC: ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಾಡುತ್ತಿರುವ ಪಾದಯಾತ್ರೆಗೂ ಅಡ್ಡಿ ಮಾಡುತ್ತಿರುವ ಜಂಟಿ ಸಂಘಟನೆ... ಸಾವಿರಾರು ಜನರನ್ನು ಅವರ ಗಮ್ಯಸ್ಥಾನಕ್ಕೆ ತಲುಪಿಸಲು ಆರೋಗ್ಯ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಿರುವ ಸಾರಿಗೆ ನೌಕರರು... ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ